Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕಾದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವು; ಕೃತ್ಯದ ವೇಳೆ ಫೇಸ್​ಬುಕ್ ಲೈವ್ ವಿಡಿಯೋ ಮಾಡಿದ 19 ವರ್ಷದ ಆರೋಪಿ

ಗುಂಡಿನ ದಾಳಿ ನಡೆಸುತ್ತಿರುವ ಕಪ್ಪು ವರ್ಣೀಯ ತನ್ನೆಲ್ಲ ಕೃತ್ಯಗಳನ್ನು ಫೇಸ್​ಬುಕ್ ಲೈವ್ ಮೂಲಕ ಪ್ರಸಾರ ಮಾಡುತ್ತಿದ್ದಾನೆ. ಆತ ಈಗ ಎಲ್ಲಿದ್ದಾನೆ ಎಂಬ ನಿರ್ದಿಷ್ಟ ಸ್ಥಳವನ್ನು ನಾವು ಪತ್ತೆಹಚ್ಚುತ್ತಿದ್ದೇವೆ ಎಂದು ಮೆಂಫಿಸ್ ಪೊಲೀಸ್ ಅಧಿಕಾರಿಗಳು

ಅಮೆರಿಕಾದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವು; ಕೃತ್ಯದ ವೇಳೆ ಫೇಸ್​ಬುಕ್ ಲೈವ್ ವಿಡಿಯೋ ಮಾಡಿದ 19 ವರ್ಷದ ಆರೋಪಿ
ಅಮೆರಿಕದ ಮೆಂಫಿಸ್‌ನಲ್ಲಿ ಗುಂಡಿನ ದಾಳಿ ನಡೆಸಿದ ಯುವಕ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 08, 2022 | 11:58 AM

ಟೆನ್ನೆಸ್ಸೀ: ಅಮೆರಿಕದ (United States) ಮೆಂಫಿಸ್‌ನಲ್ಲಿ ಬುಧವಾರ ಸಂಜೆ 19 ವರ್ಷದ ಕಪ್ಪು ವರ್ಣೀಯ ಯುವಕನೊಬ್ಬ ಗುಂಡಿನ ದಾಳಿ ನಡೆಸಿದ್ದು, ತನ್ನ ಕೃತ್ಯಗಳನ್ನು ಫೇಸ್‌ಬುಕ್‌ ಲೈವ್ (Facebook Live) ಪ್ರಸಾರ ಮಾಡಿದ್ದಾನೆ. ಎಜೆಕಿಯೆಲ್ ಕೆಲ್ಲಿ ಎಂದು ಗುರುತಿಸಲಾದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಇದಕ್ಕೂ ಮೊದಲು ಮೆಂಫಿಸ್ ಪೊಲೀಸ್ ಇಲಾಖೆಯ ಅಧಿಕಾರಿಗಳು ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದರು. ಗುಂಡಿನ ದಾಳಿ ನಡೆಸುತ್ತಿರುವ ಕಪ್ಪು ವರ್ಣೀಯ ತನ್ನೆಲ್ಲ ಕೃತ್ಯಗಳನ್ನು ಫೇಸ್​ಬುಕ್ ಲೈವ್ ಮೂಲಕ ಪ್ರಸಾರ ಮಾಡುತ್ತಿದ್ದಾನೆ. ಆತ ಈಗ ಎಲ್ಲಿದ್ದಾನೆ ಎಂಬ ನಿರ್ದಿಷ್ಟ ಸ್ಥಳವನ್ನು ನಾವು ಪತ್ತೆಹಚ್ಚುತ್ತಿದ್ದೇವೆ. ಅಲ್ಲಿಯವರೆಗೂ ನೀವೆಲ್ಲರೂ ಎಚ್ಚರಿಕೆಯಿಂದ ಇದ್ದು ನಮಗೆ ಸಹಕರಿಸಿ ಎಂದು ಮನವಿ ಮಾಡಿದ್ದರು.

ಇದನ್ನೂ ಓದಿ: Murder News: ರಾಜಸ್ಥಾನದಲ್ಲಿ ಮನೆಗೆ ತೆರಳುತ್ತಿದ್ದ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ

ಜನರು ಮನೆ ಬಿಟ್ಟು ಆಚೆ ಬಾರದಂತೆ ಪೊಲೀಸರು ಸೂಚಿಸಿದ್ದರು. “ಶಂಕಿತ ವ್ಯಕ್ತಿ ಇನ್ನೂ ತಲೆಮರೆಸಿಕೊಂಡಿದ್ದಾನೆ. ನೀವು ಹೊರಗೆ ಹೋಗಲೇಬೇಕಾದ ಅನಿವಾರ್ಯತೆ ಇಲ್ಲದಿದ್ದರೆ ಇದು ಬಗೆಹರಿಯುವವರೆಗೆ ನೀವೆಲ್ಲರೂ ಮನೆಯೊಳಗೆ ಇರಿ” ಎಂದು ಪೊಲೀಸರು ಹೇಳಿದ್ದರು.

ಪೊಲೀಸರು ಗುಂಡಿನ ದಾಳಿ ನಡೆಸಿದ ಯುವಕನ ಚಿತ್ರ ಹಾಗೂ ಆತ ಚಾಲನೆ ಮಾಡುತ್ತಿರುವ ವಾಹನದ ವಿವರಣೆಯನ್ನು ಬಿಡುಗಡೆ ಮಾಡಿದ್ದಾರೆ. ಆರಂಭದಲ್ಲಿ ನೀಲಿ ಅಥವಾ ಸಿಲ್ವರ್ ಸೆಡಾನ್‌ನಲ್ಲಿ ಓಡಾಡುತ್ತಿದ್ದ ಆತ ಕೊನೆಗೆ ಬೂದು ಬಣ್ಣದ ಎಸ್‌ಯುವಿಯಲ್ಲಿ ಹೋಗುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್