AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

26/11ರ ಮುಂಬೈ ದಾಳಿಯ ಯೋಜಕ ಜಕಿಯೂರ್ ರೆಹಮಾನ್ ಲಖ್ವಿ ಪಾಕ್​ನಲ್ಲಿ ಅರೆಸ್ಟ್​

ಡಿಸೆಂಬರ್​ ಮೊದಲ ವಾರದಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯ 1267 ನಿರ್ಬಂಧಗಳ ಸಮಿತಿ, ಜಕಿಯೂರ್ ರೆಹಮಾನ್ ಲಖ್ವಿಗೆ ಮಾಸಿಕ 1.5 ಲಕ್ಷ ರೂಪಾಯಿಯನ್ನು ಮೂಲಭೂತ ವೆಚ್ಚಗಳಿಗಾಗಿ ನೀಡಲು ಪಾಕ್​ ಸರ್ಕಾರಕ್ಕೆ ಅನುಮೋದನೆ ನೀಡಿತ್ತು

26/11ರ ಮುಂಬೈ ದಾಳಿಯ ಯೋಜಕ ಜಕಿಯೂರ್ ರೆಹಮಾನ್ ಲಖ್ವಿ ಪಾಕ್​ನಲ್ಲಿ ಅರೆಸ್ಟ್​
ಜಕಿಯೂರ್ ರೆಹಮಾನ್ ಲಖ್ವಿ
Lakshmi Hegde
| Edited By: |

Updated on: Jan 02, 2021 | 3:51 PM

Share

ನವದೆಹಲಿ: 26/11ರ ಮುಂಬೈ ದಾಳಿಯ ಯೋಜಕ, ಲಷ್ಕರ್ ಎ ತೊಯ್ಬಾದ ಕಮಾಂಡರ್​ ಜಕಿಯೂರ್ ರೆಹಮಾನ್ ಲಖ್ವಿ ಪಾಕಿಸ್ತಾನದಲ್ಲಿ ಬಂಧಿತನಾಗಿದ್ದಾನೆ.

ಲಖ್ವಿ ಭಯೋತ್ಪಾದಕ ಚಟುವಟಿಕೆಗಳಿಗಾಗಿ ಹಣ ಸಂಗ್ರಹ ಕಾರ್ಯದಲ್ಲಿ ತೊಡಗಿದ್ದ. ಇದೇ ಹಣದಲ್ಲಿ ಆತ ಉಗ್ರರಿಗಾಗಿ ಔಷಧಾಲಯ ನಡೆಸುತ್ತಿದ್ದ. ಈ ಬಗ್ಗೆ ಪಂಜಾಬ್​ ಕೌಂಟರ್​ ಟೆರರ್​ ಡಿಪಾರ್ಟ್​ಮೆಂಟ್​ ಲಾಹೋರ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿತ್ತು. ಲಷ್ಕರ್​ ಎ ತೊಯ್ಬಾದ ಕಾರ್ಯಾಚರಣೆಗಳ ಕಮಾಂಡರ್ ಆಗಿರುವ ಈತನನ್ನು ವಿಶ್ವಸಂಸ್ಥೆ, 2008ರಲ್ಲಿ ಮುಂಬೈ ದಾಳಿ ನಂತರ ಜಾಗತಿಕ ಉಗ್ರ ಎಂದು ಗುರುತಿಸಿದೆ. ಆರು ವರ್ಷ ಪಾಕಿಸ್ತಾನದ ಜೈಲಿನಲ್ಲಿ ಇದ್ದ ಈತ 2015ರ ಏಪ್ರಿಲ್​ನಲ್ಲಿ ಬಿಡುಗಡೆಯಾಗಿದ್ದ.

ಡಿಸೆಂಬರ್​ ಮೊದಲ ವಾರದಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯ 1267 ನಿರ್ಬಂಧಗಳ ಸಮಿತಿ, ಜಕಿಯೂರ್ ರೆಹಮಾನ್ ಲಖ್ವಿಗೆ ಮಾಸಿಕ 1.5 ಲಕ್ಷ ರೂಪಾಯಿಯನ್ನು ಮೂಲಭೂತ ವೆಚ್ಚಗಳಿಗಾಗಿ ನೀಡಲು ಪಾಕ್​ ಸರ್ಕಾರಕ್ಕೆ ಅನುಮೋದನೆ ನೀಡಿತ್ತು. ಈ ಆದೇಶ ಹೊರಬಿದ್ದ ಕೆಲವೇ ದಿನಗಳಲ್ಲಿ ಲಖ್ವಿ ಬಂಧಿಸಲ್ಪಟ್ಟಿದ್ದಾನೆ.

ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರಿಂದ ಗ್ರೆನೇಡ್​ ದಾಳಿ, ಆದರೆ ಜನರ ಮೇಲೆ ಬಿದ್ದು 7 ಮಂದಿಗೆ ಗಾಯ

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ