AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್ ಹಮಾಸ್ ಸಂಘರ್ಷ ವಿಚಾರ: ಮುಸ್ಲಿಂ ಬಾಲಕನನ್ನು 26 ಬಾರಿ ಇರಿದು ಕೊಂದ ಅಮೆರಿಕದ ವ್ಯಕ್ತಿ

ಇಸ್ರೇಲ್ ಹಾಗೂ ಹಮಾಸ್​ ನಡುವಿನ ಸಂಘರ್ಷವನ್ನು ಗಂಭೀರವಾಗಿ ತೆಗೆದುಕೊಂಡಿರುವ ಅಮೆರಿಕದ ವ್ಯಕ್ತಿಯೊಬ್ಬರು ಮುಸ್ಲಿಂ ಬಾಲಕನನ್ನು 26 ಬಾರಿ ತಿವಿದು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. 26 ಬಾರಿ ಇರಿತಕ್ಕೊಳಗಾದ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ, ಆತನ ತಾಯಿ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ, ಬದುಕುಳಿಯುವ ನಿರೀಕ್ಷೆಯಿದೆ ಎಂದು ವಿಲ್ ಕೌಂಟಿ ಶೆರಿಫ್ ಕಚೇರಿಯ ಹೇಳಿಕೆ ತಿಳಿಸಿದೆ.

ಇಸ್ರೇಲ್ ಹಮಾಸ್ ಸಂಘರ್ಷ ವಿಚಾರ: ಮುಸ್ಲಿಂ ಬಾಲಕನನ್ನು 26 ಬಾರಿ ಇರಿದು ಕೊಂದ ಅಮೆರಿಕದ ವ್ಯಕ್ತಿ
ಬಾಲಕImage Credit source: NDTV
ನಯನಾ ರಾಜೀವ್
|

Updated on: Oct 16, 2023 | 8:24 AM

Share

ಇಸ್ರೇಲ್(Israel) ಹಾಗೂ ಹಮಾಸ್(Hamas)​ ನಡುವಿನ ಸಂಘರ್ಷವನ್ನು ಗಂಭೀರವಾಗಿ ತೆಗೆದುಕೊಂಡಿರುವ ಅಮೆರಿಕದ ವ್ಯಕ್ತಿಯೊಬ್ಬರು ಮುಸ್ಲಿಂ ಬಾಲಕನನ್ನು 26 ಬಾರಿ ತಿವಿದು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. 26 ಬಾರಿ ಇರಿತಕ್ಕೊಳಗಾದ ಬಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ, ಆತನ ತಾಯಿ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ, ಬದುಕುಳಿಯುವ ನಿರೀಕ್ಷೆಯಿದೆ ಎಂದು ವಿಲ್ ಕೌಂಟಿ ಶೆರಿಫ್ ಕಚೇರಿಯ ಹೇಳಿಕೆ ತಿಳಿಸಿದೆ.

ಅವರ ಮನೆಯಲ್ಲೇ ದಾಳಿ ನಡೆದಿದ್ದು, ಎದೆ, ತಲೆ ಸೇರಿದಂತೆ ಹಲವು ಕಡೆ ಚಾಕುವಿನಿಂದ ಇರಿಯಲಾಗಿತ್ತು. ಶವ ಪರೀಕ್ಷೆಯ ಸಮಯದಲ್ಲಿ ಬಾಲಕನ ಹೊಟ್ಟೆಯಿಂದ 7 ಇಂಚಿನ ಬ್ಲೇಡ್ ಮಾದರಿಯ ಚಾಕುವನ್ನು ಹೊರ ತೆಗೆಯಲಾಗಿದೆ.

ಪೊಲೀಸರು ಆಗಮಿಸಿದಾಗ ಮಹಿಳೆಯ ಹಣೆಗೆ ಗಂಭೀರವಾಗಿ ಗಾಯವಾಗಿತ್ತು, ಪ್ರಕರಣ ದಾಖಲಿಸುವ ಮೊದಲು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇಸ್ರೇಲ್​ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕೂಡ ಬೆಂಬಲ ಸೂಚಿಸಿದ್ದಾರೆ. ಗಾಜಾದ ಪರಿಸ್ಥಿತಿ ತೀರಾ ಹದಗೆಟ್ಟಿದೆ, ಹಮಾಸ್​ನ ಇಸ್ರೇಲ್​ ಮೇಲಿನ ದಾಳಿಯ ಪ್ರತಿಯಾಗಿ ಇಸ್ರೇಲ್(Israel)ಗಾಜಾ ಮೇಲೆ ದಾಳಿ ನಡೆಸುತ್ತಿದೆ. ಗಾಜಾದಲ್ಲಿರುವ ಜನರಿಗೆ ದಕ್ಷಿಣ ಭಾಗಕ್ಕೆ ತೆರಳುವಂತೆ 3 ಗಂಟೆಗಳ ಗಡುವು ನೀಡಿತ್ತು. ಗಡುವು ಮುಕ್ತಾಯವಾಗುತ್ತಿದ್ದಂತೆ 1 ಮಿಲಿಯನ್ ಮಂದಿ ಗಾಜಾದಿಂದ ಪಲಾಯನ ಮಾಡಿದ್ದಾರೆ.

ಮತ್ತಷ್ಟು ಓದಿ: ಹಮಾಸ್ ಕಮಾಂಡರ್​ ಹತ್ಯೆ, ಮೂರು ಮಾರ್ಗದಿಂದ ಗಾಜಾ ಮೇಲೆ ದಾಳಿ ನಡೆಸಲು ಇಸ್ರೇಲ್ ಸಿದ್ಧತೆ

ತಾವು ವಾಯು, ಸಮುದ್ರ, ಭೂಮಿ ಮೂಲಕ ದಾಳಿ ನಡೆಸುವುದಾಗಿ ಇಸ್ರೇಲ್ ಎಚ್ಚರಿಕೆಯನ್ನು ನೀಡಿತ್ತು. ಈ ಕಾರಿಡಾರ್​ನಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಯಾವುದೇ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿತ್ತು.

ಗಾಜಾ ನಗರ ಹಾಗೂ ಉತ್ತರ ಗಾಜಾದ ಜನರಿಗೆ ದಕ್ಷಿಣ ಭಾಗಕ್ಕೆ ತೆರಳಲು ಮುಂಚೆಯೇ ಎಚ್ಚರಿಕೆ ನೀಡಲಾಗಿದೆ ಎಂದು ಸೇನೆ ಹೇಳಿದೆ. ಗಾಜಾದಲ್ಲಿ 2.3 ಮಿಲಿಯನ್ ನಾಗರಿಕರು ಆಹಾರ, ನೀರು, ಭದ್ರತೆ ವಿಚಾರದಲ್ಲಿ ಹೋರಾಟವನ್ನು ಎದುರಿಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ