AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್ ಹಮಾಸ್ ಸಂಘರ್ಷ ವಿಚಾರ: ಮುಸ್ಲಿಂ ಬಾಲಕನನ್ನು 26 ಬಾರಿ ಇರಿದು ಕೊಂದ ಅಮೆರಿಕದ ವ್ಯಕ್ತಿ

ಇಸ್ರೇಲ್ ಹಾಗೂ ಹಮಾಸ್​ ನಡುವಿನ ಸಂಘರ್ಷವನ್ನು ಗಂಭೀರವಾಗಿ ತೆಗೆದುಕೊಂಡಿರುವ ಅಮೆರಿಕದ ವ್ಯಕ್ತಿಯೊಬ್ಬರು ಮುಸ್ಲಿಂ ಬಾಲಕನನ್ನು 26 ಬಾರಿ ತಿವಿದು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. 26 ಬಾರಿ ಇರಿತಕ್ಕೊಳಗಾದ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ, ಆತನ ತಾಯಿ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ, ಬದುಕುಳಿಯುವ ನಿರೀಕ್ಷೆಯಿದೆ ಎಂದು ವಿಲ್ ಕೌಂಟಿ ಶೆರಿಫ್ ಕಚೇರಿಯ ಹೇಳಿಕೆ ತಿಳಿಸಿದೆ.

ಇಸ್ರೇಲ್ ಹಮಾಸ್ ಸಂಘರ್ಷ ವಿಚಾರ: ಮುಸ್ಲಿಂ ಬಾಲಕನನ್ನು 26 ಬಾರಿ ಇರಿದು ಕೊಂದ ಅಮೆರಿಕದ ವ್ಯಕ್ತಿ
ಬಾಲಕImage Credit source: NDTV
ನಯನಾ ರಾಜೀವ್
|

Updated on: Oct 16, 2023 | 8:24 AM

Share

ಇಸ್ರೇಲ್(Israel) ಹಾಗೂ ಹಮಾಸ್(Hamas)​ ನಡುವಿನ ಸಂಘರ್ಷವನ್ನು ಗಂಭೀರವಾಗಿ ತೆಗೆದುಕೊಂಡಿರುವ ಅಮೆರಿಕದ ವ್ಯಕ್ತಿಯೊಬ್ಬರು ಮುಸ್ಲಿಂ ಬಾಲಕನನ್ನು 26 ಬಾರಿ ತಿವಿದು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. 26 ಬಾರಿ ಇರಿತಕ್ಕೊಳಗಾದ ಬಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ, ಆತನ ತಾಯಿ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ, ಬದುಕುಳಿಯುವ ನಿರೀಕ್ಷೆಯಿದೆ ಎಂದು ವಿಲ್ ಕೌಂಟಿ ಶೆರಿಫ್ ಕಚೇರಿಯ ಹೇಳಿಕೆ ತಿಳಿಸಿದೆ.

ಅವರ ಮನೆಯಲ್ಲೇ ದಾಳಿ ನಡೆದಿದ್ದು, ಎದೆ, ತಲೆ ಸೇರಿದಂತೆ ಹಲವು ಕಡೆ ಚಾಕುವಿನಿಂದ ಇರಿಯಲಾಗಿತ್ತು. ಶವ ಪರೀಕ್ಷೆಯ ಸಮಯದಲ್ಲಿ ಬಾಲಕನ ಹೊಟ್ಟೆಯಿಂದ 7 ಇಂಚಿನ ಬ್ಲೇಡ್ ಮಾದರಿಯ ಚಾಕುವನ್ನು ಹೊರ ತೆಗೆಯಲಾಗಿದೆ.

ಪೊಲೀಸರು ಆಗಮಿಸಿದಾಗ ಮಹಿಳೆಯ ಹಣೆಗೆ ಗಂಭೀರವಾಗಿ ಗಾಯವಾಗಿತ್ತು, ಪ್ರಕರಣ ದಾಖಲಿಸುವ ಮೊದಲು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇಸ್ರೇಲ್​ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕೂಡ ಬೆಂಬಲ ಸೂಚಿಸಿದ್ದಾರೆ. ಗಾಜಾದ ಪರಿಸ್ಥಿತಿ ತೀರಾ ಹದಗೆಟ್ಟಿದೆ, ಹಮಾಸ್​ನ ಇಸ್ರೇಲ್​ ಮೇಲಿನ ದಾಳಿಯ ಪ್ರತಿಯಾಗಿ ಇಸ್ರೇಲ್(Israel)ಗಾಜಾ ಮೇಲೆ ದಾಳಿ ನಡೆಸುತ್ತಿದೆ. ಗಾಜಾದಲ್ಲಿರುವ ಜನರಿಗೆ ದಕ್ಷಿಣ ಭಾಗಕ್ಕೆ ತೆರಳುವಂತೆ 3 ಗಂಟೆಗಳ ಗಡುವು ನೀಡಿತ್ತು. ಗಡುವು ಮುಕ್ತಾಯವಾಗುತ್ತಿದ್ದಂತೆ 1 ಮಿಲಿಯನ್ ಮಂದಿ ಗಾಜಾದಿಂದ ಪಲಾಯನ ಮಾಡಿದ್ದಾರೆ.

ಮತ್ತಷ್ಟು ಓದಿ: ಹಮಾಸ್ ಕಮಾಂಡರ್​ ಹತ್ಯೆ, ಮೂರು ಮಾರ್ಗದಿಂದ ಗಾಜಾ ಮೇಲೆ ದಾಳಿ ನಡೆಸಲು ಇಸ್ರೇಲ್ ಸಿದ್ಧತೆ

ತಾವು ವಾಯು, ಸಮುದ್ರ, ಭೂಮಿ ಮೂಲಕ ದಾಳಿ ನಡೆಸುವುದಾಗಿ ಇಸ್ರೇಲ್ ಎಚ್ಚರಿಕೆಯನ್ನು ನೀಡಿತ್ತು. ಈ ಕಾರಿಡಾರ್​ನಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಯಾವುದೇ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿತ್ತು.

ಗಾಜಾ ನಗರ ಹಾಗೂ ಉತ್ತರ ಗಾಜಾದ ಜನರಿಗೆ ದಕ್ಷಿಣ ಭಾಗಕ್ಕೆ ತೆರಳಲು ಮುಂಚೆಯೇ ಎಚ್ಚರಿಕೆ ನೀಡಲಾಗಿದೆ ಎಂದು ಸೇನೆ ಹೇಳಿದೆ. ಗಾಜಾದಲ್ಲಿ 2.3 ಮಿಲಿಯನ್ ನಾಗರಿಕರು ಆಹಾರ, ನೀರು, ಭದ್ರತೆ ವಿಚಾರದಲ್ಲಿ ಹೋರಾಟವನ್ನು ಎದುರಿಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ