AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್ ಹಮಾಸ್ ಸಂಘರ್ಷ ವಿಚಾರ: ಮುಸ್ಲಿಂ ಬಾಲಕನನ್ನು 26 ಬಾರಿ ಇರಿದು ಕೊಂದ ಅಮೆರಿಕದ ವ್ಯಕ್ತಿ

ಇಸ್ರೇಲ್ ಹಾಗೂ ಹಮಾಸ್​ ನಡುವಿನ ಸಂಘರ್ಷವನ್ನು ಗಂಭೀರವಾಗಿ ತೆಗೆದುಕೊಂಡಿರುವ ಅಮೆರಿಕದ ವ್ಯಕ್ತಿಯೊಬ್ಬರು ಮುಸ್ಲಿಂ ಬಾಲಕನನ್ನು 26 ಬಾರಿ ತಿವಿದು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. 26 ಬಾರಿ ಇರಿತಕ್ಕೊಳಗಾದ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ, ಆತನ ತಾಯಿ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ, ಬದುಕುಳಿಯುವ ನಿರೀಕ್ಷೆಯಿದೆ ಎಂದು ವಿಲ್ ಕೌಂಟಿ ಶೆರಿಫ್ ಕಚೇರಿಯ ಹೇಳಿಕೆ ತಿಳಿಸಿದೆ.

ಇಸ್ರೇಲ್ ಹಮಾಸ್ ಸಂಘರ್ಷ ವಿಚಾರ: ಮುಸ್ಲಿಂ ಬಾಲಕನನ್ನು 26 ಬಾರಿ ಇರಿದು ಕೊಂದ ಅಮೆರಿಕದ ವ್ಯಕ್ತಿ
ಬಾಲಕImage Credit source: NDTV
Follow us
ನಯನಾ ರಾಜೀವ್
|

Updated on: Oct 16, 2023 | 8:24 AM

ಇಸ್ರೇಲ್(Israel) ಹಾಗೂ ಹಮಾಸ್(Hamas)​ ನಡುವಿನ ಸಂಘರ್ಷವನ್ನು ಗಂಭೀರವಾಗಿ ತೆಗೆದುಕೊಂಡಿರುವ ಅಮೆರಿಕದ ವ್ಯಕ್ತಿಯೊಬ್ಬರು ಮುಸ್ಲಿಂ ಬಾಲಕನನ್ನು 26 ಬಾರಿ ತಿವಿದು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. 26 ಬಾರಿ ಇರಿತಕ್ಕೊಳಗಾದ ಬಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ, ಆತನ ತಾಯಿ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ, ಬದುಕುಳಿಯುವ ನಿರೀಕ್ಷೆಯಿದೆ ಎಂದು ವಿಲ್ ಕೌಂಟಿ ಶೆರಿಫ್ ಕಚೇರಿಯ ಹೇಳಿಕೆ ತಿಳಿಸಿದೆ.

ಅವರ ಮನೆಯಲ್ಲೇ ದಾಳಿ ನಡೆದಿದ್ದು, ಎದೆ, ತಲೆ ಸೇರಿದಂತೆ ಹಲವು ಕಡೆ ಚಾಕುವಿನಿಂದ ಇರಿಯಲಾಗಿತ್ತು. ಶವ ಪರೀಕ್ಷೆಯ ಸಮಯದಲ್ಲಿ ಬಾಲಕನ ಹೊಟ್ಟೆಯಿಂದ 7 ಇಂಚಿನ ಬ್ಲೇಡ್ ಮಾದರಿಯ ಚಾಕುವನ್ನು ಹೊರ ತೆಗೆಯಲಾಗಿದೆ.

ಪೊಲೀಸರು ಆಗಮಿಸಿದಾಗ ಮಹಿಳೆಯ ಹಣೆಗೆ ಗಂಭೀರವಾಗಿ ಗಾಯವಾಗಿತ್ತು, ಪ್ರಕರಣ ದಾಖಲಿಸುವ ಮೊದಲು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇಸ್ರೇಲ್​ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕೂಡ ಬೆಂಬಲ ಸೂಚಿಸಿದ್ದಾರೆ. ಗಾಜಾದ ಪರಿಸ್ಥಿತಿ ತೀರಾ ಹದಗೆಟ್ಟಿದೆ, ಹಮಾಸ್​ನ ಇಸ್ರೇಲ್​ ಮೇಲಿನ ದಾಳಿಯ ಪ್ರತಿಯಾಗಿ ಇಸ್ರೇಲ್(Israel)ಗಾಜಾ ಮೇಲೆ ದಾಳಿ ನಡೆಸುತ್ತಿದೆ. ಗಾಜಾದಲ್ಲಿರುವ ಜನರಿಗೆ ದಕ್ಷಿಣ ಭಾಗಕ್ಕೆ ತೆರಳುವಂತೆ 3 ಗಂಟೆಗಳ ಗಡುವು ನೀಡಿತ್ತು. ಗಡುವು ಮುಕ್ತಾಯವಾಗುತ್ತಿದ್ದಂತೆ 1 ಮಿಲಿಯನ್ ಮಂದಿ ಗಾಜಾದಿಂದ ಪಲಾಯನ ಮಾಡಿದ್ದಾರೆ.

ಮತ್ತಷ್ಟು ಓದಿ: ಹಮಾಸ್ ಕಮಾಂಡರ್​ ಹತ್ಯೆ, ಮೂರು ಮಾರ್ಗದಿಂದ ಗಾಜಾ ಮೇಲೆ ದಾಳಿ ನಡೆಸಲು ಇಸ್ರೇಲ್ ಸಿದ್ಧತೆ

ತಾವು ವಾಯು, ಸಮುದ್ರ, ಭೂಮಿ ಮೂಲಕ ದಾಳಿ ನಡೆಸುವುದಾಗಿ ಇಸ್ರೇಲ್ ಎಚ್ಚರಿಕೆಯನ್ನು ನೀಡಿತ್ತು. ಈ ಕಾರಿಡಾರ್​ನಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಯಾವುದೇ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿತ್ತು.

ಗಾಜಾ ನಗರ ಹಾಗೂ ಉತ್ತರ ಗಾಜಾದ ಜನರಿಗೆ ದಕ್ಷಿಣ ಭಾಗಕ್ಕೆ ತೆರಳಲು ಮುಂಚೆಯೇ ಎಚ್ಚರಿಕೆ ನೀಡಲಾಗಿದೆ ಎಂದು ಸೇನೆ ಹೇಳಿದೆ. ಗಾಜಾದಲ್ಲಿ 2.3 ಮಿಲಿಯನ್ ನಾಗರಿಕರು ಆಹಾರ, ನೀರು, ಭದ್ರತೆ ವಿಚಾರದಲ್ಲಿ ಹೋರಾಟವನ್ನು ಎದುರಿಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು