Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್: ವಿವಾದಕ್ಕೆ ಕಾರಣವಾದ ಜೋರ್ಡಾನ್ ಪ್ರಯಾಣಿಕರ ನಡೆ

ಫ್ರಾನ್ಸ್​ನ ಅತಿದೊಡ್ಡ ವಿಮಾನ ನಿಲ್ದಾಣದ ಟರ್ಮಿನಲ್ 2ಬಿಯಲ್ಲಿ ನಮಾಜ್ ಮಾಡಲಾಗಿತ್ತು. ಸುಮಾರು 30 ಮಂದಿ ಪ್ರಯಾಣಿಕರು ನಮಾಜ್​ನಲ್ಲಿ ಭಾಗವಹಿಸಿದ್ದರು. ಸುಮಾರು 10 ನಿಮಿಷಗಳ ಕಾಲ ನಮಾಜ್ ಮಾಡಲಾಗಿತ್ತು ಎಂದು ‘ಎಎಫ್​ಪಿ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್: ವಿವಾದಕ್ಕೆ ಕಾರಣವಾದ ಜೋರ್ಡಾನ್ ಪ್ರಯಾಣಿಕರ ನಡೆ
ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್
Follow us
TV9 Web
| Updated By: Ganapathi Sharma

Updated on: Nov 06, 2023 | 6:42 PM

ಪ್ಯಾರಿಸ್, ನವೆಂಬರ್ 6: ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ (Paris Airport) ಮುಸ್ಲಿಂ ಪ್ರಯಾಣಿಕರು (Muslim travellers) ಸಾಮೂಹಿಕವಾಗಿ ನಮಾಜ್ ಮಾಡುತ್ತಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿವಾದಕ್ಕೆ ಗುರಿಯಾಗಿದೆ. ಚಿತ್ರವು ವಿವಾದಕ್ಕೀಡಾಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಪ್ಯಾರಿಸ್ ವಿಮಾನ ನಿಲ್ದಾಣ ಆಡಳಿತವು, ಈ ರೀತಿಯ ವಿದ್ಯಮಾನವು ವಿಷಾದನೀಯ ಎಂದು ಹೇಳಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಆಗಿರುವ ಚಿತ್ರದಲ್ಲಿ, ಪ್ಯಾರಿಸ್​​ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದ ನಿರ್ಗಮನ ಹಾಲ್​ನಲ್ಲಿ ಹತ್ತಾರು ಮಂದಿ ಸಾಮೂಹಿಕವಾಗಿ ನಮಾಜ್ ಮಾಡುವ ಚಿತ್ರವಿದೆ. ಅವರೆಲ್ಲ ಜೋರ್ಡಾನ್​ಗೆ ತೆರಳುವ ವಿಮಾನಕ್ಕೆ ಕಾಯುತ್ತಿದ್ದವರು ಎನ್ನಲಾಗಿದೆ. ಹಮಾಸ್ ಮತ್ತು ಇಸ್ರೇಲ್​​​ ನಡುವಣ ಸಂಘರ್ಷದ ಸಂದರ್ಭದಲ್ಲೇ ವಿಮಾ ನಿಲ್ದಾಣದಲ್ಲಿನ ನಮಾಜ್ ಚಿತ್ರ ವೈರಲ್ ಆಗಿರುವುದು ಫ್ರಾನ್ಸ್​​ನಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ.

ಈ ಮಧ್ಯೆ, ಫ್ರಾನ್ಸ್​​​ನ ಸಾರಿಗೆ ಸಚಿವ ಕ್ಲೆಮೆಂಟ್ ಬ್ಯೂನ್ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದ್ದು, ವಿಮಾನ ನಿಲ್ದಾಣದ ಅಧಿಕಾರಿಗಳು ನಿಯಮಗಳ ಪಾಲನೆಗೆ ಸಂಪೂರ್ಣವಾಗಿ ಬದ್ಧರಾಗಿದ್ದಾರೆ ಮತ್ತು ಆ ನಿಟ್ಟಿನಲ್ಲಿ ದೃಢ ಹೆಜ್ಜೆ ಇಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಫ್ರಾನ್ಸ್​ನ ಅತಿದೊಡ್ಡ ವಿಮಾನ ನಿಲ್ದಾಣದ ಟರ್ಮಿನಲ್ 2ಬಿಯಲ್ಲಿ ನಮಾಜ್ ಮಾಡಲಾಗಿತ್ತು. ಸುಮಾರು 30 ಮಂದಿ ಪ್ರಯಾಣಿಕರು ನಮಾಜ್​ನಲ್ಲಿ ಭಾಗವಹಿಸಿದ್ದರು. ಸುಮಾರು 10 ನಿಮಿಷಗಳ ಕಾಲ ನಮಾಜ್ ಮಾಡಲಾಗಿತ್ತು ಎಂದು ‘ಎಎಫ್​ಪಿ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ದಯನೀಯ ಸ್ಥಿತಿಯಲ್ಲಿ ಆಫ್ಘನ್ ನಿರಾಶ್ರಿತರು: ಪಾಕಿಸ್ತಾನ ತೊರೆಯುತ್ತಿರುವವರಿಗೆ ಕುಡಿಯಲು ನೀರು, ಆಹಾರಕ್ಕೆ ತತ್ವಾರ

ಸಾಮಾನ್ಯವಾಗಿ ಎಲ್ಲಾ ಧರ್ಮಗಳ ಜನರು ಖಾಸಗಿಯಾಗಿ ಪ್ರಾರ್ಥನೆ ಸಲ್ಲಿಸಲು ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕೊಠಡಿಗಳನ್ನು ಮೀಸಲಿಟ್ಟಿರಲಾಗುತ್ತದೆ. ಆದರೆ ಫ್ರಾನ್ಸ್ ಸರ್ಕಾರವು ಶಾಲೆಗಳು, ವಿಮಾನ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ನಂಬಿಕೆಯ ಪ್ರದರ್ಶನಕ್ಕೆ ಮಿತಿ ಹೇರಿದೆ.

‘ಇದು ವಿಷಾದನೀಯ’ ಎಂದು ಪ್ಯಾರಿಸ್ ವಿಮಾನ ನಿಲ್ದಾಣದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಸ್ಟಿನ್ ಡಿ ರೊಮಾನೆಟ್ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಉಲ್ಲೇಖಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ