AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗೂಢ ಕಾಯಿಲೆಯಿಂದ 165 ಮಕ್ಕಳು ಸಾವು; ಹೆಚ್ಚಾಯ್ತು ಮತ್ತೊಂದು ಮಹಾಮಾರಿಯ ಭೀತಿ

Mysterious Disease: ಆಗಸ್ಟ್‌ನಲ್ಲಿ ಕ್ವಿಲು ಪ್ರಾಂತ್ಯದ ಗುಂಗು ಪಟ್ಟಣದಲ್ಲಿ ಈ ನಿಗೂಢ ರೋಗ ಮೊದಲು ಕಾಣಿಸಿಕೊಂಡಿತ್ತು. ಈ ಕಾಯಿಲೆ 5 ವರ್ಷದವರೆಗಿನ ಮಕ್ಕಳನ್ನು ಹೆಚ್ಚಾಗಿ ಭಾಧಿಸುತ್ತಿದೆ.

ನಿಗೂಢ ಕಾಯಿಲೆಯಿಂದ 165 ಮಕ್ಕಳು ಸಾವು; ಹೆಚ್ಚಾಯ್ತು ಮತ್ತೊಂದು ಮಹಾಮಾರಿಯ ಭೀತಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 22, 2021 | 4:56 PM

Share

ಕಾಂಗೋ: ವಿಶ್ವಾದ್ಯಂತ ಈಗಾಗಲೇ ಕೊವಿಡ್ ಮಹಾಮಾರಿ 49 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. ಇದರ ಜೊತೆಗೆ ಕೊರೊನಾ ರೂಪಾಂತರಿ, ಮಲೇರಿಯಾ, ಡೆಂಗ್ಯೂ ಮುಂತಾದ ಅನೇಕ ರೋಗಗಳು ಪ್ರತಿವರ್ಷ ಸಾವಿರಾರು ಜನರನ್ನು ಬಲಿ ಪಡೆಯುತ್ತಿವೆ. ಇದರ ನಡುವೆ ಕಾಂಗೋದಲ್ಲಿ ಮತ್ತೊಂದು ನಿಗೂಢ ಕಾಯಿಲೆ ಪತ್ತೆಯಾಗಿದ್ದು, ಆಗಸ್ಟ್​ನಿಂದ ಇಲ್ಲಿಯರೆಗೂ 165ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.

ಆಗಸ್ಟ್‌ನಲ್ಲಿ ಕ್ವಿಲು ಪ್ರಾಂತ್ಯದ ಗುಂಗು ಪಟ್ಟಣದಲ್ಲಿ ಈ ನಿಗೂಢ ರೋಗ ಮೊದಲು ಕಾಣಿಸಿಕೊಂಡಿತ್ತು. ಈ ಕಾಯಿಲೆ 5 ವರ್ಷದವರೆಗಿನ ಮಕ್ಕಳನ್ನು ಹೆಚ್ಚಾಗಿ ಭಾಧಿಸುತ್ತಿದೆ. ಇಲ್ಲಿನ ಪ್ರಾದೇಶಿಕ ಆರೋಗ್ಯ ಮುಖ್ಯಸ್ಥ ಜೀನ್-ಪಿಯರ್ ಬಸಾಕೆ ಅವರು ಕೆಲವು ಸೋಂಕಿತ ಮಕ್ಕಳಲ್ಲಿ ಮಲೇರಿಯಾದಂತಹ ರೋಗಲಕ್ಷಣಗಳು ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ.

ಈ ರೋಗ ಮಲೇರಿಯಾದ ರೀತಿಯ ರೋಗಲಕ್ಷಣಗಳನ್ನು ಹೊಂದಿದೆ. ಈ ಕಾಯಿಲೆಯ ಕುರಿತು ರ್ಯಾಪಿಡ್ ಟೆಸ್ಟ್​ಗಳನ್ನು ಮಾಡಲಾಗುತ್ತಿದೆ. ಈ ಕಾಯಿಲೆಯಿಂದ ಅನೀಮಿಯಾ ಕಾಣಿಸಿಕೊಳ್ಳುತ್ತಿದ್ದು, ಇದಕ್ಕೆ ಕಾರಣವೇನೆಂದು ಇನ್ನೂ ಪತ್ತೆಯಾಗಿಲ್ಲ ಎಂದು ಬಸಾಕೆ ತಿಳಿಸಿದ್ದಾರೆ.

ಕಳೆದ ಆಗಸ್ಟ್ ಅಂತ್ಯದಲ್ಲಿ ಮೊದಲು ಕಾಣಿಸಿಕೊಂಡ ಈ ರೋಗವು ವಿಶೇಷವಾಗಿ ಐದು ವರ್ಷದೊಳಗಿನ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಮಲೇರಿಯಾದ ಹೊರತಾಗಿ, ನಮಗೆ ತಿಳಿದಿಲ್ಲದ ಬೇರೊಂದು ರೋಗದ ಲಕ್ಷಣ ಕೂಡ ಇದಾಗಿರಬಹುದು. ಈ ಕಾಯಿಲೆ ಬಂದ ರೋಗಗಳು ಅನೀಮಿಯಾ ಅಥವಾ ರಕ್ತಹೀನತೆಯಿಂದ ಬಳಲತೊಡಗುತ್ತಾರೆ. ಇದಕ್ಕೆ ಯಾವ ಬಗೆಯ ಔಷಧಿ ನೀಡಬೇಕೆಂಬುದು ತಿಳಿಯುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈ ನಿಗೂಢ ಕಾಯಿಲೆ ಈಗ ಹೆಚ್ಚು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Coronavirus cases in India: ಭಾರತದಲ್ಲಿ 15,786 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಭಾರೀ ಅಗ್ನಿ ದುರಂತ; ಓರ್ವ ಸಾವು, 26 ಜನರ ರಕ್ಷಣೆ

Published On - 4:56 pm, Fri, 22 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ