AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗೂಢ ಕಾಯಿಲೆಯಿಂದ 165 ಮಕ್ಕಳು ಸಾವು; ಹೆಚ್ಚಾಯ್ತು ಮತ್ತೊಂದು ಮಹಾಮಾರಿಯ ಭೀತಿ

Mysterious Disease: ಆಗಸ್ಟ್‌ನಲ್ಲಿ ಕ್ವಿಲು ಪ್ರಾಂತ್ಯದ ಗುಂಗು ಪಟ್ಟಣದಲ್ಲಿ ಈ ನಿಗೂಢ ರೋಗ ಮೊದಲು ಕಾಣಿಸಿಕೊಂಡಿತ್ತು. ಈ ಕಾಯಿಲೆ 5 ವರ್ಷದವರೆಗಿನ ಮಕ್ಕಳನ್ನು ಹೆಚ್ಚಾಗಿ ಭಾಧಿಸುತ್ತಿದೆ.

ನಿಗೂಢ ಕಾಯಿಲೆಯಿಂದ 165 ಮಕ್ಕಳು ಸಾವು; ಹೆಚ್ಚಾಯ್ತು ಮತ್ತೊಂದು ಮಹಾಮಾರಿಯ ಭೀತಿ
ಸಾಂಕೇತಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Oct 22, 2021 | 4:56 PM

Share

ಕಾಂಗೋ: ವಿಶ್ವಾದ್ಯಂತ ಈಗಾಗಲೇ ಕೊವಿಡ್ ಮಹಾಮಾರಿ 49 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. ಇದರ ಜೊತೆಗೆ ಕೊರೊನಾ ರೂಪಾಂತರಿ, ಮಲೇರಿಯಾ, ಡೆಂಗ್ಯೂ ಮುಂತಾದ ಅನೇಕ ರೋಗಗಳು ಪ್ರತಿವರ್ಷ ಸಾವಿರಾರು ಜನರನ್ನು ಬಲಿ ಪಡೆಯುತ್ತಿವೆ. ಇದರ ನಡುವೆ ಕಾಂಗೋದಲ್ಲಿ ಮತ್ತೊಂದು ನಿಗೂಢ ಕಾಯಿಲೆ ಪತ್ತೆಯಾಗಿದ್ದು, ಆಗಸ್ಟ್​ನಿಂದ ಇಲ್ಲಿಯರೆಗೂ 165ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.

ಆಗಸ್ಟ್‌ನಲ್ಲಿ ಕ್ವಿಲು ಪ್ರಾಂತ್ಯದ ಗುಂಗು ಪಟ್ಟಣದಲ್ಲಿ ಈ ನಿಗೂಢ ರೋಗ ಮೊದಲು ಕಾಣಿಸಿಕೊಂಡಿತ್ತು. ಈ ಕಾಯಿಲೆ 5 ವರ್ಷದವರೆಗಿನ ಮಕ್ಕಳನ್ನು ಹೆಚ್ಚಾಗಿ ಭಾಧಿಸುತ್ತಿದೆ. ಇಲ್ಲಿನ ಪ್ರಾದೇಶಿಕ ಆರೋಗ್ಯ ಮುಖ್ಯಸ್ಥ ಜೀನ್-ಪಿಯರ್ ಬಸಾಕೆ ಅವರು ಕೆಲವು ಸೋಂಕಿತ ಮಕ್ಕಳಲ್ಲಿ ಮಲೇರಿಯಾದಂತಹ ರೋಗಲಕ್ಷಣಗಳು ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ.

ಈ ರೋಗ ಮಲೇರಿಯಾದ ರೀತಿಯ ರೋಗಲಕ್ಷಣಗಳನ್ನು ಹೊಂದಿದೆ. ಈ ಕಾಯಿಲೆಯ ಕುರಿತು ರ್ಯಾಪಿಡ್ ಟೆಸ್ಟ್​ಗಳನ್ನು ಮಾಡಲಾಗುತ್ತಿದೆ. ಈ ಕಾಯಿಲೆಯಿಂದ ಅನೀಮಿಯಾ ಕಾಣಿಸಿಕೊಳ್ಳುತ್ತಿದ್ದು, ಇದಕ್ಕೆ ಕಾರಣವೇನೆಂದು ಇನ್ನೂ ಪತ್ತೆಯಾಗಿಲ್ಲ ಎಂದು ಬಸಾಕೆ ತಿಳಿಸಿದ್ದಾರೆ.

ಕಳೆದ ಆಗಸ್ಟ್ ಅಂತ್ಯದಲ್ಲಿ ಮೊದಲು ಕಾಣಿಸಿಕೊಂಡ ಈ ರೋಗವು ವಿಶೇಷವಾಗಿ ಐದು ವರ್ಷದೊಳಗಿನ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಮಲೇರಿಯಾದ ಹೊರತಾಗಿ, ನಮಗೆ ತಿಳಿದಿಲ್ಲದ ಬೇರೊಂದು ರೋಗದ ಲಕ್ಷಣ ಕೂಡ ಇದಾಗಿರಬಹುದು. ಈ ಕಾಯಿಲೆ ಬಂದ ರೋಗಗಳು ಅನೀಮಿಯಾ ಅಥವಾ ರಕ್ತಹೀನತೆಯಿಂದ ಬಳಲತೊಡಗುತ್ತಾರೆ. ಇದಕ್ಕೆ ಯಾವ ಬಗೆಯ ಔಷಧಿ ನೀಡಬೇಕೆಂಬುದು ತಿಳಿಯುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈ ನಿಗೂಢ ಕಾಯಿಲೆ ಈಗ ಹೆಚ್ಚು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Coronavirus cases in India: ಭಾರತದಲ್ಲಿ 15,786 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಭಾರೀ ಅಗ್ನಿ ದುರಂತ; ಓರ್ವ ಸಾವು, 26 ಜನರ ರಕ್ಷಣೆ

Published On - 4:56 pm, Fri, 22 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ