‘ಆನೆ ಲದ್ದಿಯಿಂದ ಕೊರೊನಾ ಗುಣವಾಗುತ್ತೆ’ ಎಂಬ ವದಂತಿ ಕೇಳಿ ಜನ ಏನು ಮಾಡಿದ್ರು ಗೊತ್ತಾ!?

ಆನೆ ಲದ್ದಿ ಕೊರೊನಾ ಸೋಂಕನ್ನು ಗುಣ ಮಾಡುತ್ತದೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದೇ ತಡ,ಆನೆ ಲದ್ದಿಯನ್ನು ಕೊಂಡುಕೊಳ್ಳಲು ಜನ ಮುಗಿಬಿದ್ದಿರುವ ಘಟನೆ ನಡೆದಲ್ಲಿ ನಮೀಬಿಯಾದಲ್ಲಿ ನಡೆದಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅರಣ್ಯ ಮತ್ತು ಪ್ರವಾಸೋದ್ಯಮ ವಕ್ತಾರ ರೋಮಿಯೋ ಮುಯುಂಡಾ, ಆನೆ ಲದ್ದಿ ಕೊರೊನಾ ಸೋಂಕನ್ನು ಗುಣಪಡಿಸುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದಾಗಿ ಆನೆ ಲದ್ದಿಯನ್ನು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ. […]

‘ಆನೆ ಲದ್ದಿಯಿಂದ ಕೊರೊನಾ ಗುಣವಾಗುತ್ತೆ’ ಎಂಬ ವದಂತಿ ಕೇಳಿ ಜನ ಏನು ಮಾಡಿದ್ರು ಗೊತ್ತಾ!?
ಸಾಧು ಶ್ರೀನಾಥ್​

Updated on: Aug 19, 2020 | 11:35 AM

ಆನೆ ಲದ್ದಿ ಕೊರೊನಾ ಸೋಂಕನ್ನು ಗುಣ ಮಾಡುತ್ತದೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದೇ ತಡ,ಆನೆ ಲದ್ದಿಯನ್ನು ಕೊಂಡುಕೊಳ್ಳಲು ಜನ ಮುಗಿಬಿದ್ದಿರುವ ಘಟನೆ ನಡೆದಲ್ಲಿ ನಮೀಬಿಯಾದಲ್ಲಿ ನಡೆದಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅರಣ್ಯ ಮತ್ತು ಪ್ರವಾಸೋದ್ಯಮ ವಕ್ತಾರ ರೋಮಿಯೋ ಮುಯುಂಡಾ, ಆನೆ ಲದ್ದಿ ಕೊರೊನಾ ಸೋಂಕನ್ನು ಗುಣಪಡಿಸುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದಾಗಿ ಆನೆ ಲದ್ದಿಯನ್ನು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ.

ಕೊರೊನಾ ಸೋಂಕಿಗೆ ಪ್ರಸ್ತುತ ಯಾವುದೇ ಲಸಿಕೆ ಇಲ್ಲ. ಹಾಗಾಗಿ ಯಾರೂ ಈ ಸುಳ್ಳು ವದಂತಿ ಕಿವಿ ಕೊಡಬೇಡಿ ಎಂದು ನಮೀಬಿಯಾದ ಆರೋಗ್ಯ ಸಚಿವ ಕಲುಂಬಿ ಶಂಗುಲಾ ಹೇಳಿದ್ದಾರೆ.

ಜೊತೆಗೆ ಕೆಲವು ಸಾಂಪ್ರದಾಯಿಕ ವೈದ್ಯರು ಆನೆ ಸಗಣಿ ತಲೆನೋವು, ಹಲ್ಲುನೋವಿಗೆ ಚಿಕಿತ್ಸೆ ನೀಡುವ ಗುಣಗಳನ್ನು ಹೊಂದಿದೆ ಎಂದು ಹೇಳುತ್ತಾರೆ. ಆದರೆ ಇದು COVID-19 ಅನ್ನು ಗುಣಪಡಿಸುತ್ತದೆ ಎಂದು ಹೇಳಿಕೊಳ್ಳುವುದು ಹೊಸ ಪ್ರವೃತ್ತಿಯಾಗಿದೆ. ಈ ಸುದ್ದಿ ಸಂಪೂರ್ಣ ಸುಳ್ಳಾಗಿದ್ದು, ಯಾರೂ ಈ ವದಂತಿಗೆ ಕಿವಿ ಕೊಡಬೇಡಿ ಎಂದಿದ್ದಾರೆ.

Published On - 11:29 am, Wed, 19 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us