AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namibia President Death: ನಮೀಬಿಯಾ ಅಧ್ಯಕ್ಷ ಗೇನ್​ಗೋಬ್ ನಿಧನ

ನಮೀಬಿಯಾ ಅಧ್ಯಕ್ಷ ಹೇಗ್ ಗೇನ್​ಗೋಬ್ ಭಾನುವಾರ ಮುಂಜಾನೆ ಕ್ಯಾನ್ಸರ್​ನಿಂದ ನಿಧನರಾಗಿದ್ದಾರೆ. 2014ರಲ್ಲಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ತಾವು ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಚೇತರಿಸಿಕೊಂಡಿರುವುದಾಗಿ ಸಾರ್ವಜನಿಕರಿಗೆ ತಿಳಿಸಿದ್ದರು. ಮುಂದಿನ ವರ್ಷ ಅವರು ಅಧ್ಯಕ್ಷರಾದರು.

Namibia President Death: ನಮೀಬಿಯಾ ಅಧ್ಯಕ್ಷ ಗೇನ್​ಗೋಬ್ ನಿಧನ
ಗೇನ್​ಗೋಬ್
ನಯನಾ ರಾಜೀವ್
|

Updated on:Feb 04, 2024 | 10:38 AM

Share

ನಮೀಬಿಯಾ ಅಧ್ಯಕ್ಷ ಹೇಗ್ ಗೇನ್​ಗೋಬ್(Hage Geingob) ಭಾನುವಾರ ಮುಂಜಾನೆ ಕ್ಯಾನ್ಸರ್​ನಿಂದ ನಿಧನರಾಗಿದ್ದಾರೆ. ಹೇಗ್ ಕಳೆದ ಕೆಲವು ವಾರಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ತಿಂಗಳ ಕೊನೆಯಲ್ಲಿ ಅವರು ಸಾಮಾನ್ಯ ವೈದ್ಯಕೀಯ ತಪಾಸಣೆಯ ನಂತರ ಚಿಕಿತ್ಸೆಗಾಗಿ ಯುನೈಟೆಡ್ ಸ್ಟೇಟ್ಸ್‌ಗೆ ಹೋಗುವುದಾಗಿ ಹೇಳಿದ್ದರು. ಗೇನ್​ಗೋಬ್ ವಿಂಡ್‌ಹೋಕ್‌ನಲ್ಲಿರುವ ಲೇಡಿ ಪೊಹಂಬಾ ಆಸ್ಪತ್ರೆಯಲ್ಲಿ ಹೇಜ್ ಗೀಂಗೊಬ್ ನಿಧನರಾದರು.

2014ರಲ್ಲಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ತಾವು ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಚೇತರಿಸಿಕೊಂಡಿರುವುದಾಗಿ ಸಾರ್ವಜನಿಕರಿಗೆ ತಿಳಿಸಿದ್ದರು. ಮುಂದಿನ ವರ್ಷ ಅವರು ಅಧ್ಯಕ್ಷರಾದರು. ಈ ವರ್ಷದ ಕೊನೆಯಲ್ಲಿ ದಕ್ಷಿಣ ಆಫ್ರಿಕಾ ದೇಶದಲ್ಲಿ ಅಧ್ಯಕ್ಷೀಯ ಮತ್ತು ಸಂಸದೀಯ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಇದರಿಂದ ಸ್ಥಳೀಯ ಜನರು ಹಾಗೂ ಹಲವು ಗಣ್ಯರು ಹೇಗ್ ಸಾವಿಗೆ ಕಂಬನಿ ಮಿಡಿದಿದ್ದಾರೆ.

1990 ರಲ್ಲಿ ಸ್ವಾಪೋ ಪಕ್ಷವು ನಮೀಬಿಯಾದಲ್ಲಿ ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದೆ. ಈಗ ಆ ಪಕ್ಷದ ಅಧ್ಯಕ್ಷರು ನಿಧನರಾದ ಕಾರಣ ಅವರ ಸ್ಥಾನಕ್ಕೆ ನಂದಿ-ನೈತ್ವಾ ಅವರನ್ನು ಆಯ್ಕೆ ಮಾಡಲಾಯಿತು. ಅವರು ಪ್ರಸ್ತುತ ನಮೀಬಿಯಾದ ಉಪ ಪ್ರಧಾನ ಮಂತ್ರಿಯಾಗಿದ್ದು, ಅವರು ಗೆದ್ದರೆ, ಅವರು ದೇಶದ ಮೊದಲ ಮಹಿಳಾ ಅಧ್ಯಕ್ಷರಾಗುತ್ತಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:31 am, Sun, 4 February 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್