AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namibia President Death: ನಮೀಬಿಯಾ ಅಧ್ಯಕ್ಷ ಗೇನ್​ಗೋಬ್ ನಿಧನ

ನಮೀಬಿಯಾ ಅಧ್ಯಕ್ಷ ಹೇಗ್ ಗೇನ್​ಗೋಬ್ ಭಾನುವಾರ ಮುಂಜಾನೆ ಕ್ಯಾನ್ಸರ್​ನಿಂದ ನಿಧನರಾಗಿದ್ದಾರೆ. 2014ರಲ್ಲಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ತಾವು ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಚೇತರಿಸಿಕೊಂಡಿರುವುದಾಗಿ ಸಾರ್ವಜನಿಕರಿಗೆ ತಿಳಿಸಿದ್ದರು. ಮುಂದಿನ ವರ್ಷ ಅವರು ಅಧ್ಯಕ್ಷರಾದರು.

Namibia President Death: ನಮೀಬಿಯಾ ಅಧ್ಯಕ್ಷ ಗೇನ್​ಗೋಬ್ ನಿಧನ
ಗೇನ್​ಗೋಬ್
ನಯನಾ ರಾಜೀವ್
|

Updated on:Feb 04, 2024 | 10:38 AM

Share

ನಮೀಬಿಯಾ ಅಧ್ಯಕ್ಷ ಹೇಗ್ ಗೇನ್​ಗೋಬ್(Hage Geingob) ಭಾನುವಾರ ಮುಂಜಾನೆ ಕ್ಯಾನ್ಸರ್​ನಿಂದ ನಿಧನರಾಗಿದ್ದಾರೆ. ಹೇಗ್ ಕಳೆದ ಕೆಲವು ವಾರಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ತಿಂಗಳ ಕೊನೆಯಲ್ಲಿ ಅವರು ಸಾಮಾನ್ಯ ವೈದ್ಯಕೀಯ ತಪಾಸಣೆಯ ನಂತರ ಚಿಕಿತ್ಸೆಗಾಗಿ ಯುನೈಟೆಡ್ ಸ್ಟೇಟ್ಸ್‌ಗೆ ಹೋಗುವುದಾಗಿ ಹೇಳಿದ್ದರು. ಗೇನ್​ಗೋಬ್ ವಿಂಡ್‌ಹೋಕ್‌ನಲ್ಲಿರುವ ಲೇಡಿ ಪೊಹಂಬಾ ಆಸ್ಪತ್ರೆಯಲ್ಲಿ ಹೇಜ್ ಗೀಂಗೊಬ್ ನಿಧನರಾದರು.

2014ರಲ್ಲಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ತಾವು ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಚೇತರಿಸಿಕೊಂಡಿರುವುದಾಗಿ ಸಾರ್ವಜನಿಕರಿಗೆ ತಿಳಿಸಿದ್ದರು. ಮುಂದಿನ ವರ್ಷ ಅವರು ಅಧ್ಯಕ್ಷರಾದರು. ಈ ವರ್ಷದ ಕೊನೆಯಲ್ಲಿ ದಕ್ಷಿಣ ಆಫ್ರಿಕಾ ದೇಶದಲ್ಲಿ ಅಧ್ಯಕ್ಷೀಯ ಮತ್ತು ಸಂಸದೀಯ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಇದರಿಂದ ಸ್ಥಳೀಯ ಜನರು ಹಾಗೂ ಹಲವು ಗಣ್ಯರು ಹೇಗ್ ಸಾವಿಗೆ ಕಂಬನಿ ಮಿಡಿದಿದ್ದಾರೆ.

1990 ರಲ್ಲಿ ಸ್ವಾಪೋ ಪಕ್ಷವು ನಮೀಬಿಯಾದಲ್ಲಿ ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದೆ. ಈಗ ಆ ಪಕ್ಷದ ಅಧ್ಯಕ್ಷರು ನಿಧನರಾದ ಕಾರಣ ಅವರ ಸ್ಥಾನಕ್ಕೆ ನಂದಿ-ನೈತ್ವಾ ಅವರನ್ನು ಆಯ್ಕೆ ಮಾಡಲಾಯಿತು. ಅವರು ಪ್ರಸ್ತುತ ನಮೀಬಿಯಾದ ಉಪ ಪ್ರಧಾನ ಮಂತ್ರಿಯಾಗಿದ್ದು, ಅವರು ಗೆದ್ದರೆ, ಅವರು ದೇಶದ ಮೊದಲ ಮಹಿಳಾ ಅಧ್ಯಕ್ಷರಾಗುತ್ತಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:31 am, Sun, 4 February 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ