AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nanmadol Typhoon: ಜಪಾನ್​ಗೆ ಅಪ್ಪಳಿಸಿದ ಪ್ರಬಲ ಚಂಡಮಾರುತ; ಲಕ್ಷಾಂತರ ಜನರ ಸ್ಥಳಾಂತರ

ನನ್ಮಾಡೋಲ್ ಎಂದು ಹೆಸರಿಸಲಾದ ಈ ಚಂಡಮಾರುತ ಯಕುಶಿಮಾದ ದಕ್ಷಿಣ ದ್ವೀಪದ ಸಮೀಪದಲ್ಲಿ ಇದೆ ಎಂದು ಜಪಾನ್ ಹವಾಮಾನ ಸಂಸ್ಥೆ ಹೇಳಿದೆ.

Nanmadol Typhoon: ಜಪಾನ್​ಗೆ ಅಪ್ಪಳಿಸಿದ ಪ್ರಬಲ ಚಂಡಮಾರುತ; ಲಕ್ಷಾಂತರ ಜನರ ಸ್ಥಳಾಂತರ
ಜಪಾನ್​ನಲ್ಲಿ ಚಂಡಮಾರುತ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 18, 2022 | 3:57 PM

Share

ಟೋಕಿಯೊ: ಬಲವಾದ ಗಾಳಿ ಮತ್ತು ಭಾರೀ ಮಳೆಯೊಂದಿಗೆ ದಕ್ಷಿಣ ಜಪಾನ್‌ಗೆ ಇಂದು ಪ್ರಬಲ ಚಂಡಮಾರುತ (Nanmadol Typhoon) ಅಪ್ಪಳಿಸಿದೆ. ಈ ಚಂಡಮಾರುತದಿಂದ ಜಪಾನ್​ನ ಭೂ ಸಾರಿಗೆ ಮತ್ತು ವಾಯು ಸಾರಿಗೆಯ ಮೇಲೂ ಪರಿಣಾಮ ಉಂಟಾಗಿದ್ದು, ಹಲವು ರೈಲು, ಬಸ್​, ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ಲಕ್ಷಾಂತರ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ನನ್ಮಾಡೋಲ್ ಎಂದು ಹೆಸರಿಸಲಾದ ಈ ಚಂಡಮಾರುತ ಯಕುಶಿಮಾದ ದಕ್ಷಿಣ ದ್ವೀಪದ ಸಮೀಪದಲ್ಲಿ ಇದೆ ಎಂದು ಜಪಾನ್ ಹವಾಮಾನ ಸಂಸ್ಥೆ ಹೇಳಿದೆ. ಇದರಿಂದ ಗಂಟೆಗೆ 162 ಕಿಲೋಮೀಟರ್ ವೇಗವಾಗಿ ಗಾಳಿ ಬೀಸುತ್ತಿದೆ. ಇದು ನಿಧಾನವಾಗಿ ಉತ್ತರಕ್ಕೆ ದೇಶದ ಪ್ರಮುಖ ದಕ್ಷಿಣ ದ್ವೀಪವಾದ ಕ್ಯುಶುಗೆ ತೆರಳಿದೆ. ಈ ಚಂಡಮಾರುತದಿಂದ ಕೆಲವೆಡೆ ಭೂಕುಸಿತವೂ ಉಂಟಾಗಿದೆ.

ಇದನ್ನೂ ಓದಿ: Viral Video: ಚಬಾ ಚಂಡಮಾರುತಕ್ಕೆ ಮುಳುಗಿದ ಹಡಗು, ನಾವಿಕರನ್ನು ರಕ್ಷಿಸುವ ರೋಚಕ ವಿಡಿಯೋ ವೈರಲ್

ಪೂರ್ವ ಜಪಾನ್​ನಲ್ಲಿ ಚಂಡಮಾರುತದ ಪ್ರಭಾವದಿಂದ ಸೋಮವಾರ ಮಧ್ಯಾಹ್ನದ ವೇಳೆಗೆ 50 ಸೆಂಟಿಮೀಟರ್‌ಗಳಷ್ಟು (20 ಇಂಚು) ಮಳೆಯಾಗಲಿದೆ. ಇಲ್ಲಿಯವರೆಗೆ ಯಾವುದೇ ದೊಡ್ಡ ಪ್ರಮಾಣದ ಹಾನಿ ಅಥವಾ ಗಾಯಗಳಾಗಿಲ್ಲ. ಕಗೋಶಿಮಾ ಪ್ರಾಂತ್ಯದಲ್ಲಿ, 9,000ಕ್ಕೂ ಹೆಚ್ಚು ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಮಿಯಾಜಾಕಿ ಪ್ರಾಂತ್ಯದಲ್ಲಿ 4,700 ಜನರನ್ನು ಸ್ಥಳಾಂತರಿಸಲಾಗಿದೆ. ವಿದ್ಯುತ್ ತಂತಿಗಳು ಮತ್ತು ಸೌಲಭ್ಯಗಳಿಗೆ ಹಾನಿಯಾದ ಕಾರಣ ಕ್ಯುಶುವಿನಾದ್ಯಂತ 93,000ಕ್ಕೂ ಹೆಚ್ಚು ಮನೆಗಳಿಗೆ ಭಾನುವಾರ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?