AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nanmadol Typhoon: ಜಪಾನ್​ಗೆ ಅಪ್ಪಳಿಸಿದ ಪ್ರಬಲ ಚಂಡಮಾರುತ; ಲಕ್ಷಾಂತರ ಜನರ ಸ್ಥಳಾಂತರ

ನನ್ಮಾಡೋಲ್ ಎಂದು ಹೆಸರಿಸಲಾದ ಈ ಚಂಡಮಾರುತ ಯಕುಶಿಮಾದ ದಕ್ಷಿಣ ದ್ವೀಪದ ಸಮೀಪದಲ್ಲಿ ಇದೆ ಎಂದು ಜಪಾನ್ ಹವಾಮಾನ ಸಂಸ್ಥೆ ಹೇಳಿದೆ.

Nanmadol Typhoon: ಜಪಾನ್​ಗೆ ಅಪ್ಪಳಿಸಿದ ಪ್ರಬಲ ಚಂಡಮಾರುತ; ಲಕ್ಷಾಂತರ ಜನರ ಸ್ಥಳಾಂತರ
ಜಪಾನ್​ನಲ್ಲಿ ಚಂಡಮಾರುತ
TV9 Web
| Edited By: |

Updated on: Sep 18, 2022 | 3:57 PM

Share

ಟೋಕಿಯೊ: ಬಲವಾದ ಗಾಳಿ ಮತ್ತು ಭಾರೀ ಮಳೆಯೊಂದಿಗೆ ದಕ್ಷಿಣ ಜಪಾನ್‌ಗೆ ಇಂದು ಪ್ರಬಲ ಚಂಡಮಾರುತ (Nanmadol Typhoon) ಅಪ್ಪಳಿಸಿದೆ. ಈ ಚಂಡಮಾರುತದಿಂದ ಜಪಾನ್​ನ ಭೂ ಸಾರಿಗೆ ಮತ್ತು ವಾಯು ಸಾರಿಗೆಯ ಮೇಲೂ ಪರಿಣಾಮ ಉಂಟಾಗಿದ್ದು, ಹಲವು ರೈಲು, ಬಸ್​, ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ಲಕ್ಷಾಂತರ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ನನ್ಮಾಡೋಲ್ ಎಂದು ಹೆಸರಿಸಲಾದ ಈ ಚಂಡಮಾರುತ ಯಕುಶಿಮಾದ ದಕ್ಷಿಣ ದ್ವೀಪದ ಸಮೀಪದಲ್ಲಿ ಇದೆ ಎಂದು ಜಪಾನ್ ಹವಾಮಾನ ಸಂಸ್ಥೆ ಹೇಳಿದೆ. ಇದರಿಂದ ಗಂಟೆಗೆ 162 ಕಿಲೋಮೀಟರ್ ವೇಗವಾಗಿ ಗಾಳಿ ಬೀಸುತ್ತಿದೆ. ಇದು ನಿಧಾನವಾಗಿ ಉತ್ತರಕ್ಕೆ ದೇಶದ ಪ್ರಮುಖ ದಕ್ಷಿಣ ದ್ವೀಪವಾದ ಕ್ಯುಶುಗೆ ತೆರಳಿದೆ. ಈ ಚಂಡಮಾರುತದಿಂದ ಕೆಲವೆಡೆ ಭೂಕುಸಿತವೂ ಉಂಟಾಗಿದೆ.

ಇದನ್ನೂ ಓದಿ: Viral Video: ಚಬಾ ಚಂಡಮಾರುತಕ್ಕೆ ಮುಳುಗಿದ ಹಡಗು, ನಾವಿಕರನ್ನು ರಕ್ಷಿಸುವ ರೋಚಕ ವಿಡಿಯೋ ವೈರಲ್

ಪೂರ್ವ ಜಪಾನ್​ನಲ್ಲಿ ಚಂಡಮಾರುತದ ಪ್ರಭಾವದಿಂದ ಸೋಮವಾರ ಮಧ್ಯಾಹ್ನದ ವೇಳೆಗೆ 50 ಸೆಂಟಿಮೀಟರ್‌ಗಳಷ್ಟು (20 ಇಂಚು) ಮಳೆಯಾಗಲಿದೆ. ಇಲ್ಲಿಯವರೆಗೆ ಯಾವುದೇ ದೊಡ್ಡ ಪ್ರಮಾಣದ ಹಾನಿ ಅಥವಾ ಗಾಯಗಳಾಗಿಲ್ಲ. ಕಗೋಶಿಮಾ ಪ್ರಾಂತ್ಯದಲ್ಲಿ, 9,000ಕ್ಕೂ ಹೆಚ್ಚು ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಮಿಯಾಜಾಕಿ ಪ್ರಾಂತ್ಯದಲ್ಲಿ 4,700 ಜನರನ್ನು ಸ್ಥಳಾಂತರಿಸಲಾಗಿದೆ. ವಿದ್ಯುತ್ ತಂತಿಗಳು ಮತ್ತು ಸೌಲಭ್ಯಗಳಿಗೆ ಹಾನಿಯಾದ ಕಾರಣ ಕ್ಯುಶುವಿನಾದ್ಯಂತ 93,000ಕ್ಕೂ ಹೆಚ್ಚು ಮನೆಗಳಿಗೆ ಭಾನುವಾರ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್