AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nanmadol Typhoon: ಜಪಾನ್​ಗೆ ಅಪ್ಪಳಿಸಿದ ಪ್ರಬಲ ಚಂಡಮಾರುತ; ಲಕ್ಷಾಂತರ ಜನರ ಸ್ಥಳಾಂತರ

ನನ್ಮಾಡೋಲ್ ಎಂದು ಹೆಸರಿಸಲಾದ ಈ ಚಂಡಮಾರುತ ಯಕುಶಿಮಾದ ದಕ್ಷಿಣ ದ್ವೀಪದ ಸಮೀಪದಲ್ಲಿ ಇದೆ ಎಂದು ಜಪಾನ್ ಹವಾಮಾನ ಸಂಸ್ಥೆ ಹೇಳಿದೆ.

Nanmadol Typhoon: ಜಪಾನ್​ಗೆ ಅಪ್ಪಳಿಸಿದ ಪ್ರಬಲ ಚಂಡಮಾರುತ; ಲಕ್ಷಾಂತರ ಜನರ ಸ್ಥಳಾಂತರ
ಜಪಾನ್​ನಲ್ಲಿ ಚಂಡಮಾರುತ
TV9 Web
| Edited By: |

Updated on: Sep 18, 2022 | 3:57 PM

Share

ಟೋಕಿಯೊ: ಬಲವಾದ ಗಾಳಿ ಮತ್ತು ಭಾರೀ ಮಳೆಯೊಂದಿಗೆ ದಕ್ಷಿಣ ಜಪಾನ್‌ಗೆ ಇಂದು ಪ್ರಬಲ ಚಂಡಮಾರುತ (Nanmadol Typhoon) ಅಪ್ಪಳಿಸಿದೆ. ಈ ಚಂಡಮಾರುತದಿಂದ ಜಪಾನ್​ನ ಭೂ ಸಾರಿಗೆ ಮತ್ತು ವಾಯು ಸಾರಿಗೆಯ ಮೇಲೂ ಪರಿಣಾಮ ಉಂಟಾಗಿದ್ದು, ಹಲವು ರೈಲು, ಬಸ್​, ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ಲಕ್ಷಾಂತರ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ನನ್ಮಾಡೋಲ್ ಎಂದು ಹೆಸರಿಸಲಾದ ಈ ಚಂಡಮಾರುತ ಯಕುಶಿಮಾದ ದಕ್ಷಿಣ ದ್ವೀಪದ ಸಮೀಪದಲ್ಲಿ ಇದೆ ಎಂದು ಜಪಾನ್ ಹವಾಮಾನ ಸಂಸ್ಥೆ ಹೇಳಿದೆ. ಇದರಿಂದ ಗಂಟೆಗೆ 162 ಕಿಲೋಮೀಟರ್ ವೇಗವಾಗಿ ಗಾಳಿ ಬೀಸುತ್ತಿದೆ. ಇದು ನಿಧಾನವಾಗಿ ಉತ್ತರಕ್ಕೆ ದೇಶದ ಪ್ರಮುಖ ದಕ್ಷಿಣ ದ್ವೀಪವಾದ ಕ್ಯುಶುಗೆ ತೆರಳಿದೆ. ಈ ಚಂಡಮಾರುತದಿಂದ ಕೆಲವೆಡೆ ಭೂಕುಸಿತವೂ ಉಂಟಾಗಿದೆ.

ಇದನ್ನೂ ಓದಿ: Viral Video: ಚಬಾ ಚಂಡಮಾರುತಕ್ಕೆ ಮುಳುಗಿದ ಹಡಗು, ನಾವಿಕರನ್ನು ರಕ್ಷಿಸುವ ರೋಚಕ ವಿಡಿಯೋ ವೈರಲ್

ಪೂರ್ವ ಜಪಾನ್​ನಲ್ಲಿ ಚಂಡಮಾರುತದ ಪ್ರಭಾವದಿಂದ ಸೋಮವಾರ ಮಧ್ಯಾಹ್ನದ ವೇಳೆಗೆ 50 ಸೆಂಟಿಮೀಟರ್‌ಗಳಷ್ಟು (20 ಇಂಚು) ಮಳೆಯಾಗಲಿದೆ. ಇಲ್ಲಿಯವರೆಗೆ ಯಾವುದೇ ದೊಡ್ಡ ಪ್ರಮಾಣದ ಹಾನಿ ಅಥವಾ ಗಾಯಗಳಾಗಿಲ್ಲ. ಕಗೋಶಿಮಾ ಪ್ರಾಂತ್ಯದಲ್ಲಿ, 9,000ಕ್ಕೂ ಹೆಚ್ಚು ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಮಿಯಾಜಾಕಿ ಪ್ರಾಂತ್ಯದಲ್ಲಿ 4,700 ಜನರನ್ನು ಸ್ಥಳಾಂತರಿಸಲಾಗಿದೆ. ವಿದ್ಯುತ್ ತಂತಿಗಳು ಮತ್ತು ಸೌಲಭ್ಯಗಳಿಗೆ ಹಾನಿಯಾದ ಕಾರಣ ಕ್ಯುಶುವಿನಾದ್ಯಂತ 93,000ಕ್ಕೂ ಹೆಚ್ಚು ಮನೆಗಳಿಗೆ ಭಾನುವಾರ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ಮನೆ ಬಳಿಯೇ ಬಾಂಬ್​​ ಸ್ಫೋಟ
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ಮನೆ ಬಳಿಯೇ ಬಾಂಬ್​​ ಸ್ಫೋಟ
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ಡಿಕೆಶಿ​ಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು?
ಡಿಕೆಶಿ​ಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು?
‘ಸೆಟ್​​ನಲ್ಲಿ ಮೋನಿಷಾನ ಮಗಳು ಅಂತ ನಾನು ಯಾವಾಗಲೂ ನೋಡಿಲ್ಲ’; ದುನಿಯಾ ವಿಜಯ್
‘ಸೆಟ್​​ನಲ್ಲಿ ಮೋನಿಷಾನ ಮಗಳು ಅಂತ ನಾನು ಯಾವಾಗಲೂ ನೋಡಿಲ್ಲ’; ದುನಿಯಾ ವಿಜಯ್