AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1968ರ ಬಳಿಕ ಗಯಾನಾಗೆ ಭಾರತದ ಪ್ರಧಾನಿಯೊಬ್ಬರ ಭೇಟಿ ಇದೇ ಮೊದಲು

ಪ್ರಧಾನಿ ನರೇಂದ್ರ ಮೋದಿ ಅವರು 2024 ರ ನವೆಂಬರ್ 19 ರಿಂದ 21 ರವರೆಗೆ ಗಯಾನಾ ಗಣರಾಜ್ಯಕ್ಕೆ ಐತಿಹಾಸಿಕ ಭೇಟಿ ನೀಡಲಿದ್ದಾರೆ. 1968ರ ನಂತರ ದಕ್ಷಿಣ ಅಮೆರಿಕದ ಗಯಾನಾಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲು.

1968ರ ಬಳಿಕ ಗಯಾನಾಗೆ ಭಾರತದ ಪ್ರಧಾನಿಯೊಬ್ಬರ ಭೇಟಿ  ಇದೇ ಮೊದಲು
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Nov 19, 2024 | 12:16 PM

Share

ಪ್ರಧಾನಿ ನರೇಂದ್ರ ಮೋದಿ ಅವರು 2024 ರ ನವೆಂಬರ್ 19 ರಿಂದ 21 ರವರೆಗೆ ಗಯಾನಾ ಗಣರಾಜ್ಯಕ್ಕೆ ಐತಿಹಾಸಿಕ ಭೇಟಿ ನೀಡಲಿದ್ದಾರೆ. 1968ರ ನಂತರ ದಕ್ಷಿಣ ಅಮೆರಿಕದ ಗಯಾನಾಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲು.

56 ವರ್ಷಗಳ ನಂತರ ಭಾರತದ ಪ್ರಧಾನಿ ಗಯಾನಾಗೆ ಹೋಗುತ್ತಿದ್ದಾರೆ. ಈ ಭೇಟಿಯು ಎರಡು ದೇಶಗಳ ನಡುವಿನ ಬಲವಾದ ಮತ್ತು ಬಾಂಧವ್ಯವನ್ನು ಪ್ರತಿಬಿಂಬಿಸುತ್ತದೆ. ಈ ಭೇಟಿಯು ಗಯಾನಾದೊಂದಿಗೆ ಬಾಂಧವ್ಯವನ್ನು ಗಾಢವಾಗಿಸಲು ಮತ್ತು ಕೆರಿಬಿಯನ್ ಸಮುದಾಯದಲ್ಲಿ (CARICOM) ತನ್ನ ಪ್ರಭಾವವನ್ನು ವಿಸ್ತರಿಸುವ ಭಾರತದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಪ್ರಧಾನಿ ಮೋದಿ ಅವರು ಅಧ್ಯಕ್ಷ ಅಲಿ ಅವರೊಂದಿಗೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ.

ಇಂಧನ, ರಕ್ಷಣೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರದ ಕುರಿತು ಚರ್ಚಿಸಲಾಗುವುದು. ಜಾರ್ಜ್‌ಟೌನ್‌ನಲ್ಲಿ ನಡೆಯಲಿರುವ ಎರಡನೇ ಭಾರತ-ಕ್ಯಾರಿಕಾಮ್ ಶೃಂಗಸಭೆ ಇದಾಗಿದೆ. ಈ ಹಿಂದೆ, 2023 ರಲ್ಲಿ ಭಾರತದಲ್ಲಿ ನಡೆದ 17 ನೇ ಪ್ರವಾಸಿ ಭಾರತೀಯ ದಿವಸ್‌ನಲ್ಲಿ ಸಭೆಯನ್ನು ನಡೆಸಲಾಗಿತ್ತು.

ಮತ್ತಷ್ಟು ಓದಿ: ವಿಡಿಯೋ: ಪಿಎಂ ಮೋದಿ ಹಂಚಿಕೊಂಡ ಬ್ರೆಜಿಲ್​ನ ಜಿ-20 ಶೃಂಗಸಭೆಯ ಮೊದಲ ದಿನದ ಝಲಕ್​ ಇಲ್ಲಿದೆ

ಇದೇ ಸಭೆಯಲ್ಲಿ ಅಧ್ಯಕ್ಷ ಅಲಿ ಅವರಿಗೆ ಪ್ರವಾಸಿ ಭಾರತೀಯ ಸಮ್ಮಾನ್ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯು ಅನಿವಾಸಿ ಭಾರತೀಯರು ಮತ್ತು ಭಾರತ ಮೂಲದ ಜನರಿಗೆ ಭಾರತವು ನೀಡುವ ಅತ್ಯುನ್ನತ ಗೌರವವಾಗಿದೆ. ಗಯಾನಾ ಸಂಸತ್ತಿನ ರಾಷ್ಟ್ರೀಯ ಅಸೆಂಬ್ಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಇದು ಉಭಯ ದೇಶಗಳ ನಡುವಿನ ಪ್ರಜಾಸತ್ತಾತ್ಮಕ ಬಾಂಧವ್ಯ ಎಷ್ಟು ಗಟ್ಟಿಯಾಗಿದೆ ಎಂಬುದನ್ನು ತೋರಿಸುತ್ತದೆ.

ಇತ್ತೀಚಿನ ವರ್ಷಗಳಲ್ಲಿ, ಪ್ರಾದೇಶಿಕ ಭದ್ರತಾ ಸಹಕಾರವನ್ನು ಬಲಪಡಿಸಲು ಗಯಾನಾದ ರಕ್ಷಣಾ ಸಾಮರ್ಥ್ಯಗಳಿಗೆ ಭಾರತವು ಗಮನಾರ್ಹ ಕೊಡುಗೆಗಳನ್ನು ನೀಡಿದೆ. ದೇಶದ ವೈಮಾನಿಕ ಕಣ್ಗಾವಲು ಮತ್ತು ವಿಪತ್ತು ಪ್ರತಿಕ್ರಿಯೆ ಸಾಮರ್ಥ್ಯಗಳನ್ನು ಹೆಚ್ಚಿಸಲು ಭಾರತವು ಎರಡು ಡಾರ್ನಿಯರ್-228 ವಿಮಾನಗಳನ್ನು ಗಯಾನಾ ರಕ್ಷಣಾ ಪಡೆಗೆ 23.37 ಮಿಲಿಯನ್ ಡಾಲರ್​ ಸಾಲದ ರೂಪದಲ್ಲಿ ಒದಗಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ