ಮೋದಿ ಹೆದರುವುದಿಲ್ಲ; ಭಾರತದೊಂದಿಗಿನ ಬಾಂಧವ್ಯದ ಬಗ್ಗೆ ಚೀನಾಕ್ಕೆ ತೈವಾನ್ ತಿರುಗೇಟು

ಪ್ರಧಾನಿ ಮೋದಿ ಅವರ ವಿಜಯಕ್ಕೆ ತೈವಾನ್ ಅಭಿನಂದನೆ ಸಲ್ಲಿಸಿದ ನಂತರ, ಚೀನಾದ ವಿದೇಶಾಂಗ ಸಚಿವಾಲಯ ಉಭಯ ದೇಶಗಳ ನಡುವಿನ ಸಂದೇಶಗಳ ವಿನಿಮಯವನ್ನು ಟೀಕಿಸಿದೆ.

ಮೋದಿ ಹೆದರುವುದಿಲ್ಲ; ಭಾರತದೊಂದಿಗಿನ ಬಾಂಧವ್ಯದ ಬಗ್ಗೆ ಚೀನಾಕ್ಕೆ ತೈವಾನ್ ತಿರುಗೇಟು
ಟಿಯೆನ್ ಚುಂಗ್-ಕ್ವಾಂಗ್
Follow us
|

Updated on:Jun 18, 2024 | 5:27 PM

ನವದೆಹಲಿ: ದ್ವೀಪ ರಾಷ್ಟ್ರ ತೈವಾನ್ (Taiwan) ಮತ್ತು ಭಾರತದ (India) ನಡುವಿನ ಸಂದೇಶಗಳ ವಿನಿಮಯದ ಬಗ್ಗೆ ಟೀಕೆಗೆ ತೈವಾನ್ ಇಂದು (ಮಂಗಳವಾರ) ಚೀನಾಗೆ (China) ತಿರುಗೇಟು ನೀಡಿದೆ. ಚೀನಾದ ಟೀಕೆಗಳಿಗೆ ತಮ್ಮ ಅಧ್ಯಕ್ಷರಾಗಲೀ ಅಥವಾ ಭಾರತದ ಪ್ರಧಾನಿ ನರೇಂದ್ರ ಮೋದಿಯಾಗಲೀ (PM Narendra Modi) ಹೆದರುವುದಿಲ್ಲ ಎಂದು ತೈವಾನ್ ಉಪ ವಿದೇಶಾಂಗ ಸಚಿವ ಟಿಯೆನ್ ಚುಂಗ್-ಕ್ವಾಂಗ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ತೈವಾನ್ ಅಧ್ಯಕ್ಷ ಲಾಯ್ ಚಿಂಗ್ ಟೆ ನಡುವಿನ ಸಂದೇಶಗಳ ವಿನಿಮಯದ ಬಗ್ಗೆ ಚೀನಾದ ವಿದೇಶಾಂಗ ಸಚಿವಾಲಯ ಆಕ್ಷೇಪ ವ್ಯಕ್ತಪಡಿಸಿದ ನಂತರ ತೈವಾನ್ ಈ ಟೀಕೆ ಮಾಡಿದೆ. 2024ರಲ್ಲಿ ಭಾರತದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಅವರು ಗೆದ್ದಿದ್ದಕ್ಕಾಗಿ ನರೇಂದ್ರ ಮೋದಿಯನ್ನು ಅಭಿನಂದಿಸಿದ್ದರು.

ಭಾರತ ಮತ್ತು ತೈವಾನ್ ನಡುವಿನ ಸಂಬಂಧವನ್ನು ಬಲಪಡಿಸುವ ಚೀನಾದ ಟೀಕೆಗಳ ಬಗ್ಗೆ ಕೇಳಿದಾಗ, ಉಪ ವಿದೇಶಾಂಗ ಸಚಿವರು, “ಮೋದಿಯವರು ಮತ್ತು ನಮ್ಮ ಅಧ್ಯಕ್ಷರು ಭಯಪಡುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಧನ್ಯವಾದ ಮೋದಿ!; ತಮ್ಮ ಗೆಲುವನ್ನು ಪ್ರಧಾನಿಗೆ ಅರ್ಪಿಸಿದ ಎನ್​ಸಿಪಿ ನಾಯಕ ಶರದ್ ಪವಾರ್

ಕಳೆದ ತಿಂಗಳು ಚುನಾಯಿತರಾದ ತೈವಾನ್ ಅಧ್ಯಕ್ಷ ಲೈ ಚಿಂಗ್ ಟೆ ಅವರು ಜೂನ್ 7ರಂದು ಎಕ್ಸ್ ಪೋಸ್ಟ್‌ನಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯ ವಿಜಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದ್ದರು. “ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಗೆಲುವಿಗಾಗಿ ನನ್ನ ಪ್ರಾಮಾಣಿಕ ಅಭಿನಂದನೆಗಳು. ವೇಗವಾಗಿ ಬೆಳೆಯುತ್ತಿರುವ ತೈವಾನ್-ಭಾರತದ ಪಾಲುದಾರಿಕೆಯನ್ನು ಹೆಚ್ಚಿಸಲು ನಾವು ಎದುರು ನೋಡುತ್ತಿದ್ದೇವೆ. ಇಂಡೋಪೆಸಿಫಿಕ್‌ನಲ್ಲಿ ಶಾಂತಿ ಮತ್ತು ಸಮೃದ್ಧಿಗೆ ಕೊಡುಗೆ ನೀಡಲು ವ್ಯಾಪಾರ, ತಂತ್ರಜ್ಞಾನ ಮತ್ತು ಇತರ ಕ್ಷೇತ್ರಗಳಲ್ಲಿ ನಮ್ಮ ಸಹಯೋಗವನ್ನು ವಿಸ್ತರಿಸುತ್ತೇವೆ” ಎಂದು ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದರು.

ಈ ಸಂದೇಶಕ್ಕೆ ಪ್ರತ್ಯುತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ, “ನಿಮ್ಮ ಆತ್ಮೀಯ ಸಂದೇಶಕ್ಕಾಗಿ ಲೈ ಚಿಂಗ್ ಟೆ ಅವರಿಗೆ ಧನ್ಯವಾದಗಳು. ನಾವು ಪರಸ್ಪರ ಲಾಭದಾಯಕ ಆರ್ಥಿಕ ಮತ್ತು ತಾಂತ್ರಿಕ ಪಾಲುದಾರಿಕೆಗಾಗಿ ಕೆಲಸ ಮಾಡುವಾಗ ನಾನು ನಿಕಟ ಸಂಬಂಧಗಳನ್ನು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದರು.

ಸಂದೇಶಗಳ ವಿನಿಮಯದ ನಂತರ, ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚಿಂಗ್ ಟೆ ನಡುವಿನ ಸಂವಾದಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ತೈವಾನ್‌ನೊಂದಿಗಿನ ಭಾರತದ ಸಂವಹನವನ್ನು ಟೀಕಿಸಿದ ಅವರು, ಭಾರತವು ಈ ಬಗ್ಗೆ ಗಂಭೀರವಾದ ರಾಜಕೀಯ ಬದ್ಧತೆಗಳನ್ನು ಮಾಡಿದೆ. ತೈವಾನ್ ಅಧಿಕಾರಿಗಳ ರಾಜಕೀಯ ಲೆಕ್ಕಾಚಾರಗಳನ್ನು ಗುರುತಿಸಬೇಕು, ಎಚ್ಚರದಿಂದಿರಬೇಕು ಮತ್ತು ವಿರೋಧಿಸಬೇಕು ಎಂದಿದ್ದರು.

ಇದನ್ನೂ ಓದಿ: PM Modi Varanasi visit: ವಾರಣಾಸಿಯಲ್ಲಿ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಮೋದಿ ಆಗಮನ

ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿಗೆ ದೇಶದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ತೈವಾನ್ ಅಧ್ಯಕ್ಷ ಲೈ ಚಿಂಗ್ ಟೆ ಅವರೊಂದಿಗೆ ಮಾತನಾಡಿದರು. ಲೈ ಚಿಂಗ್ ಟೆ ಅವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಯವರನ್ನು ಅಭಿನಂದಿಸಿದ್ದಾರೆ. ಆದರೆ, ತೈವಾನ್ ಮತ್ತು ಭಾರತ ರಾಷ್ಟ್ರಗಳ ಮುಖ್ಯಸ್ಥರ ನಡುವಿನ ಸಂಭಾಷಣೆಯು ಚೀನಾದೊಂದಿಗೆ ಸರಿಯಾಗಿಲ್ಲ.

ಪ್ರಧಾನಿ ಮೋದಿಯವರನ್ನು ಅಭಿನಂದಿಸಿರುವ ತೈವಾನ್ ಅಧ್ಯಕ್ಷ ಲೈ ಚಿಂಗ್ ಟೆ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದು, ‘ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ವಿಜಯಕ್ಕಾಗಿ ನನ್ನ ಹೃತ್ಪೂರ್ವಕ ಅಭಿನಂದನೆಗಳು. ವೇಗವಾಗಿ ಬೆಳೆಯುತ್ತಿರುವ ತೈವಾನ್-ಭಾರತ ಪಾಲುದಾರಿಕೆಯನ್ನು ಮತ್ತಷ್ಟು ಕೊಂಡೊಯ್ಯಲು ನಾವು ಉತ್ಸುಕರಾಗಿದ್ದೇವೆ. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಮತ್ತು ಸಮೃದ್ಧಿಗೆ ಕೊಡುಗೆ ನೀಡಲು ವ್ಯಾಪಾರ, ತಂತ್ರಜ್ಞಾನ ಮತ್ತು ಇತರ ಕ್ಷೇತ್ರಗಳಲ್ಲಿ ನಮ್ಮ ಸಹಕಾರವನ್ನು ವಿಸ್ತರಿಸಲು ಉತ್ಸುಕರಾಗಿದ್ದೇವೆ ಎಂದಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Tue, 18 June 24

ತಾಜಾ ಸುದ್ದಿ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್