AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಹೆದರುವುದಿಲ್ಲ; ಭಾರತದೊಂದಿಗಿನ ಬಾಂಧವ್ಯದ ಬಗ್ಗೆ ಚೀನಾಕ್ಕೆ ತೈವಾನ್ ತಿರುಗೇಟು

ಪ್ರಧಾನಿ ಮೋದಿ ಅವರ ವಿಜಯಕ್ಕೆ ತೈವಾನ್ ಅಭಿನಂದನೆ ಸಲ್ಲಿಸಿದ ನಂತರ, ಚೀನಾದ ವಿದೇಶಾಂಗ ಸಚಿವಾಲಯ ಉಭಯ ದೇಶಗಳ ನಡುವಿನ ಸಂದೇಶಗಳ ವಿನಿಮಯವನ್ನು ಟೀಕಿಸಿದೆ.

ಮೋದಿ ಹೆದರುವುದಿಲ್ಲ; ಭಾರತದೊಂದಿಗಿನ ಬಾಂಧವ್ಯದ ಬಗ್ಗೆ ಚೀನಾಕ್ಕೆ ತೈವಾನ್ ತಿರುಗೇಟು
ಟಿಯೆನ್ ಚುಂಗ್-ಕ್ವಾಂಗ್
ಸುಷ್ಮಾ ಚಕ್ರೆ
|

Updated on:Jun 18, 2024 | 5:27 PM

Share

ನವದೆಹಲಿ: ದ್ವೀಪ ರಾಷ್ಟ್ರ ತೈವಾನ್ (Taiwan) ಮತ್ತು ಭಾರತದ (India) ನಡುವಿನ ಸಂದೇಶಗಳ ವಿನಿಮಯದ ಬಗ್ಗೆ ಟೀಕೆಗೆ ತೈವಾನ್ ಇಂದು (ಮಂಗಳವಾರ) ಚೀನಾಗೆ (China) ತಿರುಗೇಟು ನೀಡಿದೆ. ಚೀನಾದ ಟೀಕೆಗಳಿಗೆ ತಮ್ಮ ಅಧ್ಯಕ್ಷರಾಗಲೀ ಅಥವಾ ಭಾರತದ ಪ್ರಧಾನಿ ನರೇಂದ್ರ ಮೋದಿಯಾಗಲೀ (PM Narendra Modi) ಹೆದರುವುದಿಲ್ಲ ಎಂದು ತೈವಾನ್ ಉಪ ವಿದೇಶಾಂಗ ಸಚಿವ ಟಿಯೆನ್ ಚುಂಗ್-ಕ್ವಾಂಗ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ತೈವಾನ್ ಅಧ್ಯಕ್ಷ ಲಾಯ್ ಚಿಂಗ್ ಟೆ ನಡುವಿನ ಸಂದೇಶಗಳ ವಿನಿಮಯದ ಬಗ್ಗೆ ಚೀನಾದ ವಿದೇಶಾಂಗ ಸಚಿವಾಲಯ ಆಕ್ಷೇಪ ವ್ಯಕ್ತಪಡಿಸಿದ ನಂತರ ತೈವಾನ್ ಈ ಟೀಕೆ ಮಾಡಿದೆ. 2024ರಲ್ಲಿ ಭಾರತದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಅವರು ಗೆದ್ದಿದ್ದಕ್ಕಾಗಿ ನರೇಂದ್ರ ಮೋದಿಯನ್ನು ಅಭಿನಂದಿಸಿದ್ದರು.

ಭಾರತ ಮತ್ತು ತೈವಾನ್ ನಡುವಿನ ಸಂಬಂಧವನ್ನು ಬಲಪಡಿಸುವ ಚೀನಾದ ಟೀಕೆಗಳ ಬಗ್ಗೆ ಕೇಳಿದಾಗ, ಉಪ ವಿದೇಶಾಂಗ ಸಚಿವರು, “ಮೋದಿಯವರು ಮತ್ತು ನಮ್ಮ ಅಧ್ಯಕ್ಷರು ಭಯಪಡುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಧನ್ಯವಾದ ಮೋದಿ!; ತಮ್ಮ ಗೆಲುವನ್ನು ಪ್ರಧಾನಿಗೆ ಅರ್ಪಿಸಿದ ಎನ್​ಸಿಪಿ ನಾಯಕ ಶರದ್ ಪವಾರ್

ಕಳೆದ ತಿಂಗಳು ಚುನಾಯಿತರಾದ ತೈವಾನ್ ಅಧ್ಯಕ್ಷ ಲೈ ಚಿಂಗ್ ಟೆ ಅವರು ಜೂನ್ 7ರಂದು ಎಕ್ಸ್ ಪೋಸ್ಟ್‌ನಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯ ವಿಜಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದ್ದರು. “ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಗೆಲುವಿಗಾಗಿ ನನ್ನ ಪ್ರಾಮಾಣಿಕ ಅಭಿನಂದನೆಗಳು. ವೇಗವಾಗಿ ಬೆಳೆಯುತ್ತಿರುವ ತೈವಾನ್-ಭಾರತದ ಪಾಲುದಾರಿಕೆಯನ್ನು ಹೆಚ್ಚಿಸಲು ನಾವು ಎದುರು ನೋಡುತ್ತಿದ್ದೇವೆ. ಇಂಡೋಪೆಸಿಫಿಕ್‌ನಲ್ಲಿ ಶಾಂತಿ ಮತ್ತು ಸಮೃದ್ಧಿಗೆ ಕೊಡುಗೆ ನೀಡಲು ವ್ಯಾಪಾರ, ತಂತ್ರಜ್ಞಾನ ಮತ್ತು ಇತರ ಕ್ಷೇತ್ರಗಳಲ್ಲಿ ನಮ್ಮ ಸಹಯೋಗವನ್ನು ವಿಸ್ತರಿಸುತ್ತೇವೆ” ಎಂದು ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದರು.

ಈ ಸಂದೇಶಕ್ಕೆ ಪ್ರತ್ಯುತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ, “ನಿಮ್ಮ ಆತ್ಮೀಯ ಸಂದೇಶಕ್ಕಾಗಿ ಲೈ ಚಿಂಗ್ ಟೆ ಅವರಿಗೆ ಧನ್ಯವಾದಗಳು. ನಾವು ಪರಸ್ಪರ ಲಾಭದಾಯಕ ಆರ್ಥಿಕ ಮತ್ತು ತಾಂತ್ರಿಕ ಪಾಲುದಾರಿಕೆಗಾಗಿ ಕೆಲಸ ಮಾಡುವಾಗ ನಾನು ನಿಕಟ ಸಂಬಂಧಗಳನ್ನು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದರು.

ಸಂದೇಶಗಳ ವಿನಿಮಯದ ನಂತರ, ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚಿಂಗ್ ಟೆ ನಡುವಿನ ಸಂವಾದಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ತೈವಾನ್‌ನೊಂದಿಗಿನ ಭಾರತದ ಸಂವಹನವನ್ನು ಟೀಕಿಸಿದ ಅವರು, ಭಾರತವು ಈ ಬಗ್ಗೆ ಗಂಭೀರವಾದ ರಾಜಕೀಯ ಬದ್ಧತೆಗಳನ್ನು ಮಾಡಿದೆ. ತೈವಾನ್ ಅಧಿಕಾರಿಗಳ ರಾಜಕೀಯ ಲೆಕ್ಕಾಚಾರಗಳನ್ನು ಗುರುತಿಸಬೇಕು, ಎಚ್ಚರದಿಂದಿರಬೇಕು ಮತ್ತು ವಿರೋಧಿಸಬೇಕು ಎಂದಿದ್ದರು.

ಇದನ್ನೂ ಓದಿ: PM Modi Varanasi visit: ವಾರಣಾಸಿಯಲ್ಲಿ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಮೋದಿ ಆಗಮನ

ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿಗೆ ದೇಶದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ತೈವಾನ್ ಅಧ್ಯಕ್ಷ ಲೈ ಚಿಂಗ್ ಟೆ ಅವರೊಂದಿಗೆ ಮಾತನಾಡಿದರು. ಲೈ ಚಿಂಗ್ ಟೆ ಅವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಯವರನ್ನು ಅಭಿನಂದಿಸಿದ್ದಾರೆ. ಆದರೆ, ತೈವಾನ್ ಮತ್ತು ಭಾರತ ರಾಷ್ಟ್ರಗಳ ಮುಖ್ಯಸ್ಥರ ನಡುವಿನ ಸಂಭಾಷಣೆಯು ಚೀನಾದೊಂದಿಗೆ ಸರಿಯಾಗಿಲ್ಲ.

ಪ್ರಧಾನಿ ಮೋದಿಯವರನ್ನು ಅಭಿನಂದಿಸಿರುವ ತೈವಾನ್ ಅಧ್ಯಕ್ಷ ಲೈ ಚಿಂಗ್ ಟೆ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದು, ‘ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ವಿಜಯಕ್ಕಾಗಿ ನನ್ನ ಹೃತ್ಪೂರ್ವಕ ಅಭಿನಂದನೆಗಳು. ವೇಗವಾಗಿ ಬೆಳೆಯುತ್ತಿರುವ ತೈವಾನ್-ಭಾರತ ಪಾಲುದಾರಿಕೆಯನ್ನು ಮತ್ತಷ್ಟು ಕೊಂಡೊಯ್ಯಲು ನಾವು ಉತ್ಸುಕರಾಗಿದ್ದೇವೆ. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಮತ್ತು ಸಮೃದ್ಧಿಗೆ ಕೊಡುಗೆ ನೀಡಲು ವ್ಯಾಪಾರ, ತಂತ್ರಜ್ಞಾನ ಮತ್ತು ಇತರ ಕ್ಷೇತ್ರಗಳಲ್ಲಿ ನಮ್ಮ ಸಹಕಾರವನ್ನು ವಿಸ್ತರಿಸಲು ಉತ್ಸುಕರಾಗಿದ್ದೇವೆ ಎಂದಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Tue, 18 June 24

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ