AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NASA: ಚಂದ್ರನ ಮೇಲೆ ಮನೆ ಕಟ್ಟಲು ನಾಸಾದಿಂದ ಕಂಟ್ರಾಕ್ಟ್; 6,964 ಕೋಟಿ ರೂ. ವೆಚ್ಚದಲ್ಲಿ ಸಿದ್ಧವಾಗಲಿದೆ ಅಚ್ಚರಿಯ ಲೋಕ

NASA: ಅಮೆರಿಕಾದ ನಾಸಾದಿಂದ (NASA) ಚಂದ್ರಲೋಕದಲ್ಲಿ ಮನೆ ಕಟ್ಟಲು 6,964 ಕೋಟಿ ರೂ.ಗೆ ನಾರ್ತ್​ರೋಪ್ ಗ್ರುಮ್ಮನ್ ಕಾರ್ಪ್ ಕಂಪನಿಗೆ ಗುತ್ತಿಗೆ ನೀಡಲಾಗಿದೆ.

NASA: ಚಂದ್ರನ ಮೇಲೆ ಮನೆ ಕಟ್ಟಲು ನಾಸಾದಿಂದ ಕಂಟ್ರಾಕ್ಟ್; 6,964 ಕೋಟಿ ರೂ. ವೆಚ್ಚದಲ್ಲಿ ಸಿದ್ಧವಾಗಲಿದೆ ಅಚ್ಚರಿಯ ಲೋಕ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 10, 2021 | 4:27 PM

Share

ವಿಜ್ಞಾನ ಜಗತ್ತಿನಲ್ಲಿ ಸಾಕಷ್ಟು ಆವಿಷ್ಕಾರಗಳು ನಡೆಯುತ್ತಿವೆ. ಆಗಸದಲ್ಲಿ ಕಾಣುವ ಚಂದ್ರನ ಮೇಲೊಂದು ಮನೆ ಕಟ್ಟಬೇಕೆಂಬುದು ಇಲ್ಲಿಯವರೆಗೂ ಉಪಮೆಯಷ್ಟೇ ಆಗಿತ್ತು. ಆದರೆ, ಇನ್ನುಮುಂದೆ ಅದು ಅಸಾಧ್ಯವೇನಲ್ಲ. ಏಕೆಂದರೆ, ನಾಸಾದಿಂದ (NASA) ಚಂದ್ರಲೋಕದಲ್ಲಿ ಮನೆ ಕಟ್ಟಲು ಕಾಂಟ್ರಾಕ್ಟ್​ ನೀಡಲಾಗಿದ್ದು, 6,964 ಕೋಟಿ ರೂ.ಗೆ ನಾರ್ತ್​ರೋಪ್ ಗ್ರುಮ್ಮನ್ ಕಾರ್ಪ್ (NOC.N) ಕಂಪನಿಗೆ ಗುತ್ತಿಗೆ ನೀಡಲಾಗಿದೆ. ಅಮೆರಿಕದ ಬಾಹ್ಯಾಕಾಶ ಏಜೆನ್ಸಿಯಾಗಿರುವ ನಾಸಾದ ವಿಜ್ಞಾನಿಗಳಿಗೆ ಚಂದ್ರನ ಮೇಲೆ ವಾಸ್ತವ್ಯ ಹೂಡಲು ಸಹಕಾರಿಯಾಗುವಂತೆ ವಸತಿ ವ್ಯವಸ್ಥೆಯನ್ನು ಪ್ಲಾನ್ ಮಾಡುವ ಜವಾಬ್ದಾರಿಯನ್ನು ಈ ಕಂಪನಿ ಹೊತ್ತಿದೆ.

ನಾಸಾದ ಗಗನಯಾತ್ರಿಗಳು ಚಂದ್ರನ ಮೇಲೆಯೇ ವಾಸ್ತವ್ಯ ಹೂಡಿ, ಸಂಶೋಧನೆ ನಡೆಸಲು ಅನುಕೂಲವಾಗಬೇಕೆಂಬ ಕಾರಣಕ್ಕೆ ನಾಸಾ ಈ ಗುತ್ತಿಗೆ ನೀಡಿದೆ. ಚಂದ್ರಲೋಕದಲ್ಲಿ ಮನುಷ್ಯ ವಾಸಿಸಲು ಯೋಗ್ಯವಾದ ವಾತಾವರಣವಿದೆ ಎಂಬುದನ್ನು ಈಗಾಗಲೇ ಪತ್ತೆಹಚ್ಚಲಾಗಿದೆ. ಹೀಗಾಗಿ ನಾರ್ತ್​ರೋಪ್ ಕಂಪನಿ ಚಂದ್ರನ ಮೇಲೆ ವಾಸಕ್ಕೆ ಯೋಗ್ಯವಾದ ಸಣ್ಣದಾದ ಮನೆಯ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.

ಕೇವಲ ಅಮೆರಿಕ ಮಾತ್ರವಲ್ಲ ಚೀನಾ ದೇಶ ಕೂಡ ಚಂದ್ರನ ದಕ್ಷಿಣ ಭಾಗದಲ್ಲಿ ಮನೆ ನಿರ್ಮಿಸಲು ಯೋಜನೆ ರೂಪಿಸುತ್ತಿದೆ. 2030ರ ವೇಳೆಗೆ ಗುರು ಗ್ರಹದ ಮೇಲೆ ರೊಬೋಟಿಕ್ ದಂಡಯಾತ್ರೆ ನಡೆಸಲು ಚೀನಾ ಚಿಂತನೆ ನಡೆಸಿದೆ. ಜಗತ್ತಿನಾದ್ಯಂತ ವೈಜ್ಞಾನಿಕ ಜಗತ್ತಿನಲ್ಲಿ ಹೊಸ ರೀತಿಯ ಸಂಶೋಧನೆಗಳು ನಡೆಯುತ್ತಿವೆ. ಇದಕ್ಕೆ ನಾಸಾ ಕೂಡ ಕೈಜೋಡಿಸಿದ್ದು, ವಿಜ್ಞಾನ ಜಗತ್ತಿನ ಸಂಶೋಧನೆಗೆ ಗೇಟ್​ವೇ ನಿರ್ಮಿಸಲು ನಾಸಾ ಮತ್ತು ನಾಸಾದ ಕಮರ್ಷಿಯಲ್ ಹಾಗೂ ಇಂಟರ್​ನ್ಯಾಷನಲ್ ಪಾರ್ಟನರ್​ಗಳು ಮುಂದಾಗಿದ್ದಾರೆ.

ಚಂದ್ರನ ಬಗ್ಗೆ ಸಂಶೋಧನೆ ನಡೆಸಲು ಜಗತ್ತಿನ 8 ದೇಶಗಳು ಈಗಾಗಲೇ ನಾಸಾದ ಜೊತೆಗೆ ಅಂತಾರಾಷ್ಟ್ರೀಯ ಒಪ್ಪಂದಕ್ಕೆ ಸಹಿ ಹಾಕಿವೆ. ಚಂದ್ರನ ಮೇಲೆ ದೀರ್ಘಾವಧಿಗೆ ಮನೆಗಳನ್ನು ನಿರ್ಮಿಸಲು ಅಗತ್ಯವಿರುವ ಕಾನೂನು ಮತ್ತು ಯೋಜನೆಯನ್ನು ರೂಪಿಸುವುದು ಈ ಒಪ್ಪಂದದ ಉದ್ದೇಶವಾಗಿದೆ. ಇದೀಗ ನಾಸಾದಿಂದ ಚಂದ್ರನ ಮೇಲೆ ಮನೆಯನ್ನು ನಿರ್ಮಿಸಲು ಕಂಟ್ರಾಕ್ಟ್ ಕೂಡ ನೀಡಲಾಗಿದೆ.

ಇದನ್ನೂ ಓದಿ: ಚಂದ್ರನತ್ತ ಪುನಃ NASA ಚಿತ್ತ: ಗಗನಯಾತ್ರಿ ತಂಡಕ್ಕೆ ಭಾರತೀಯ ಮೂಲದ ವ್ಯಕ್ತಿ ಆಯ್ಕೆ

ಇದನ್ನೂ ಓದಿ: Perseverance Rover | ಮಂಗಳನ ಅಂಗಳದಲ್ಲಿ ಇಳಿದ 24 ಗಂಟೆಗಳಲ್ಲೇ ಚಿತ್ರ ಕಳಿಸಲು ಶುರು ಮಾಡಿದ NASA ನೌಕೆ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ