AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಹ್ಯಾಕಾಶದಲ್ಲಿ ಸಿಲುಕಿರುವ ಸುನಿತಾ ವಿಲಿಯಮ್ಸ್ ಭೂಮಿಗೆ ಮರಳುವುದು ಮುಂದಿನ ವರ್ಷ

ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಆದರೆ, ಸುನೀತಾ ವಿಲಿಯಮ್ಸ್‌ ಹಾಗೂ ಮತ್ತೊಬ್ಬ ಗಗನಯಾತ್ರಿ ಬುಚ್ ವಿಲ್ಮೋರ್ ತಾಂತ್ರಿಕ ದೋಷದಿಂದಾಗಿ ಬಾಹ್ಯಾಕಾಶದಲ್ಲೇ ಸಿಲುಕಿರುವ ವಿಚಾರ ಎಲ್ಲರಿಗೂ ತಿಳಿದೇ ಇದೆ. ಈ ಇಬ್ಬರು ಗಗನಯಾತ್ರಿಗಳು ಮುಂದಿನ ವರ್ಷ ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ಹೇಳಿದೆ.

ಬಾಹ್ಯಾಕಾಶದಲ್ಲಿ ಸಿಲುಕಿರುವ ಸುನಿತಾ ವಿಲಿಯಮ್ಸ್ ಭೂಮಿಗೆ ಮರಳುವುದು ಮುಂದಿನ ವರ್ಷ
ಸುನಿತಾ ವಿಲಿಯಮ್ಸ್​
ನಯನಾ ರಾಜೀವ್
|

Updated on: Aug 25, 2024 | 8:42 AM

Share

ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ನಾಸಾದ ಗಗನಯಾತ್ರಿ ಸುನಿತ್ ವಿಲಿಯಮ್ಸ್​ ಮುಂದಿನ ವರ್ಷ ಭೂಮಿಗೆ ಮರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಸಾದ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್​ ಹಾಗೂ ಬುಚ್ ವಿಲ್ಮೋರ್ ಫ್ಲೋರಿಡಾದ ಕೇಪ್ ಕ್ಯಾನವೆರಲ್ ಬಾಹ್ಯಾಕಾಶ ನಿಲ್ದಾಣದಿಂದ ಸ್ಪೇಸ್ ಲಾಂಚ್ ಕಾಂಪ್ಲೆಕ್ಸ್​41ನಿಂದ ಜೂನ್ 5ರಂದು ಬಾಹ್ಯಾಕಾಶಕ್ಕೆ ಹಾರಿದ್ದರು.

ಜೂನ್ 6 ರಂದು ಇಬ್ಬರೂ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು (ISS) ತಲುಪಿದರು. ಈ ಮಿಷನ್ ಕೇವಲ 8 ದಿನಗಳಾಗಿತ್ತು ಆದರೂ ಇಂದಿಗೂ ಅವರು ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿದ್ದಾರೆ. ನಾಸಾ ಮತ್ತು ಬೋಯಿಂಗ್ ತಂಡಗಳು ತಮ್ಮ ಸುರಕ್ಷಿತ ವಾಪಸಾತಿಗಾಗಿ ನಿರಂತರವಾಗಿ ಪ್ರಯತ್ನಿಸುತ್ತಿವೆ, ಆದರೆ ಇಲ್ಲಿಯವರೆಗೆ ಅವು ವಿಫಲವಾಗಿವೆ.

ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನವನ್ನು ಜೂನ್‌ 5ರಂದು ಆರಂಭಿಸಿದ್ದರು. ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು.

ಕಳೆದ ಕೆಲವು ದಶಕಗಳಲ್ಲಿ ಇಸ್ರೋ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಅಗಾಧ ಪ್ರಗತಿ ಸಾಧಿಸಿದೆ. ಚಂದ್ರಯಾನ ಮತ್ತು ಮಂಗಳಯಾನದಂತಹ ಯಶಸ್ವಿ ಕಾರ್ಯಾಚರಣೆಗಳು ಭಾರತವನ್ನು ಬಾಹ್ಯಾಕಾಶ ಮಹಾಶಕ್ತಿಗಳ ಪಟ್ಟಿಯಲ್ಲಿ ತಂದಿವೆ. ಅಂತಹ ಪರಿಸ್ಥಿತಿಯಲ್ಲಿ, ಸುನೀತಾ ವಿಲಿಯಮ್ಸ್ ಮತ್ತು ಅವರ ಪಾಲುದಾರ ಬುಚ್ ವಿಲ್ಮೋರ್ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿರುವಾಗ, ಇಸ್ರೋ ಅವರಿಗೆ ಏಕೆ ಸಹಾಯ ಮಾಡಬಾರದು ಎನ್ನುವ ಪ್ರಶ್ನೆ ಉದ್ಭವವಾಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಇಸ್ರೋ ಮುಖ್ಯಸ್ಥ ಎಸ್​ ಸೋಮನಾಥನ್, ಅಲ್ಲಿಗೆ ಹೋಗಿ ಅವರನ್ನು ಉಳಿಸಬಲ್ಲ ಯಾವುದೇ ನೌಕೆ ನಮ್ಮ ಬಳಿ ಇಲ್ಲ ಅದು ಸಾಧ್ಯವಿಲ್ಲ, ಅಮೆರಿಕ ಅಥವಾ ರಷ್ಯಾ ಮಾತ್ರ ಇದನ್ನು ಮಾಡಬಹುದು.

US ಸ್ಪೇಸ್‌ಎಕ್ಸ್ ಕ್ರ್ಯೂ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಹೊಂದಿದೆ, ಮತ್ತು ರಷ್ಯಾವು ಸೋಯುಜ್ ಬಾಹ್ಯಾಕಾಶ ನೌಕೆಯನ್ನು ಹೊಂದಿದೆ, ಅದು ವಿಲಿಯಮ್ಸ್ ಮತ್ತು ವಿಲ್ಮೋರ್ ಅವರನ್ನು ಬಾಹ್ಯಾಕಾಶ ನಿಲ್ದಾಣದಿಂದ ಹಿಂತಿರುಗಿಸುತ್ತದೆ. ಇವುಗಳಲ್ಲಿ ಯಾವುದಾದರೂ ಒಂದು ಅವುಗಳನ್ನು ಉಳಿಸಬಹುದು ಎಂಉ ಹೇಳಿದ್ದಾರೆ.

ಇಸ್ರೋ ಪ್ರಸ್ತುತ ಮಾನವ ಬಾಹ್ಯಾಕಾಶ ಕಾರ್ಯಾಚರಣೆಗಳಿಗೆ ಅಗತ್ಯವಾದ ಮೂಲಸೌಕರ್ಯವನ್ನು ಹೊಂದಿಲ್ಲ. ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ತಂತ್ರಜ್ಞಾನ ಭಾರತದಲ್ಲಿಲ್ಲ ಎಂದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ