AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಪಿತೂರಿ ನಡೆದಿಲ್ಲ: ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಪ ತಳ್ಳಿದ ಪಾಕಿಸ್ತಾನ

ಶುಕ್ರವಾರದ ಸಭೆಯಲ್ಲಿ ಟೆಲಿಗ್ರಾಮ್‌ನ ವಿಷಯದ ಬಗ್ಗೆ ಮತ್ತೆ ಚರ್ಚಿಸಲಾಯಿತು ಮತ್ತು ವಿದೇಶಿ ಪಿತೂರಿಯ ಯಾವುದೇ ಪುರಾವೆಗಳಿಲ್ಲ ಎಂದು ತೀರ್ಮಾನಿಸಲಾಯಿತು. "ಯಾವುದೇ ಪಿತೂರಿಯ ಬಗ್ಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಎನ್‌ಎಸ್‌ಸಿಗೆ ಪ್ರಧಾನ ಭದ್ರತಾ ಏಜೆನ್ಸಿಗಳು...

ವಿದೇಶಿ ಪಿತೂರಿ ನಡೆದಿಲ್ಲ: ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಪ ತಳ್ಳಿದ ಪಾಕಿಸ್ತಾನ
ಇಮ್ರಾನ್ ಖಾನ್
TV9 Web
| Edited By: |

Updated on: Apr 22, 2022 | 7:57 PM

Share

ಇಸ್ಲಾಮಾಹಾದ್: ತಮ್ಮ ಸರ್ಕಾರವನ್ನು ಉರುಳಿಸಲು ವಿದೇಶಿ ಪಿತೂರಿ ನಡೆದಿದೆ ಎಂಬ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರ ಆರೋಪವನ್ನು ಪಾಕಿಸ್ತಾನ ಕ್ಯಾಬಿನೆಟ್‌ನ ರಾಷ್ಟ್ರೀಯ ಭದ್ರತಾ ಸಮಿತಿ (National Security Committee)  ಶುಕ್ರವಾರ ತಳ್ಳಿಹಾಕಿದೆ. ಶುಕ್ರವಾರದ ಸಭೆಯು ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ನಡೆದ ಅವಿಶ್ವಾಸ ನಿರ್ಣಯದ ಮೊದಲು, ಇಮ್ರಾನ್ ಖಾನ್​​  ಪದಚ್ಯುತಗೊಂಡರು. ಪ್ರಧಾನಿ ಸ್ಥಾನದಿಂದ ಪದಚ್ಯುತಿಗೊಳಿಸಿದ ಕ್ರಮವು ಪೂರ್ವಯೋಜಿತವಾದುದು. ಇದರ ಹಿಂದೆ ಅಮೆರಿಕದ ಷಡ್ಯಂತ್ರ ಇದೆ ಎಂದು ಖಾನ್ ಆರೋಪಿಸಿದ್ದರು. ಮಾಜಿ ರಾಯಭಾರಿ ಅಮೆರಿಕದ ರಾಯಭಾರಿಯೊಂದಿಗೆ ಮಾತನಾಡಿದ್ದು, ಅಮೆರಿಕ ಇಮ್ರಾನ್ ಖಾನ್ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿಲ್ಲ, ವಿಶೇಷವಾಗಿ ರಷ್ಯಾ- ಉಕ್ರೇನ್ ಯುದ್ಧ ಆರಂಭವಾದ ಹೊತ್ತಲ್ಲಿ ಖಾನ್ ಮಾಸ್ಕೋಗೆ ಭೇಟಿ ನೀಡಿದ್ದರ ಬಗ್ಗೆ ಅಮೆರಿಕ ಖಾನ್ ಮೇಲೆ ಅಸಮಾಧಾನಗೊಂಡಿತ್ತು ಎಂದು ಅವರು ಹೇಳಿದ್ದರು. ಶುಕ್ರವಾರದ ಸಭೆಯಲ್ಲಿ ಟೆಲಿಗ್ರಾಮ್‌ನ ವಿಷಯದ ಬಗ್ಗೆ ಮತ್ತೆ ಚರ್ಚಿಸಲಾಯಿತು ಮತ್ತು ವಿದೇಶಿ ಪಿತೂರಿಯ ಯಾವುದೇ ಪುರಾವೆಗಳಿಲ್ಲ ಎಂದು ತೀರ್ಮಾನಿಸಲಾಯಿತು. “ಯಾವುದೇ ಪಿತೂರಿಯ ಬಗ್ಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಎನ್‌ಎಸ್‌ಸಿಗೆ ಪ್ರಧಾನ ಭದ್ರತಾ ಏಜೆನ್ಸಿಗಳು ಮತ್ತೊಮ್ಮೆ ತಿಳಿಸಿವೆ” ಎಂದು ಹೇಳಿಕೆ ತಿಳಿಸಿದೆ. “ಯಾವುದೇ ವಿದೇಶಿ ಪಿತೂರಿ ನಡೆದಿಲ್ಲ” ಎಂದು ಸಭೆಯು ತೀರ್ಮಾನಿಸಿತು. ಏತನ್ಮಧ್ಯೆ, ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ಇಮ್ರಾನ್ ಖಾನ್ ಅವರ ಸಾರ್ವಜನಿಕ ರ್ಯಾಲಿಗಳಲ್ಲಿ ಬಿಗಿ ಭದ್ರತೆಗೆ ಆದೇಶಿಸಿದ್ದಾರೆ. ಅವರು ಸರ್ಕಾರದಿಂದ ಹೊರಹಾಕಲ್ಪಟ್ಟ ನಂತರ ಅವರು ಭಾಷಣ ಮಾಡುತ್ತಿದ್ದಾರೆ. ವಿದೇಶಿ ಪಿತೂರಿಯ ಹೊರತಾಗಿ, ಇಮ್ರಾನ್ ಖಾನ್​​ಗೆ ಜೀವ ಬೆದರಿಕೆ ಇದೆ ಎಂದು ಪಿಟಿಐ ಪಕ್ಷ ಹೇಳಿತ್ತು.

ಶುಕ್ರವಾರದ ಸಭೆಯಲ್ಲಿ ಪಾಲ್ಗೊಂಡಿದ್ದ ಅಮೆರಿಕದಲ್ಲಿ ಪಾಕಿಸ್ತಾನದ ಮಾಜಿ ರಾಯಭಾರಿ ಅಸದ್ ಮಜೀದ್ ಖಾನ್ ಅವರಿಂದ ಸಂದೇಶ ಸ್ವೀಕರಿಸಿರುವುದಾಗಿ ಇಮ್ರಾನ್ ಖಾನ್ ಹೇಳಿಕೊಂಡಿದ್ದಾರೆ. ಆಗಿನ ರಾಯಭಾರಿಯು ತನ್ನ ಮತ್ತು ದಕ್ಷಿಣ ಮತ್ತು ಮಧ್ಯ ಏಷ್ಯಾ ವ್ಯವಹಾರಗಳ ಯುಎಸ್ ಸಹಾಯಕ ವಿದೇಶಾಂಗ ಕಾರ್ಯದರ್ಶಿ ಡೊನಾಲ್ಡ್ ಲು ನಡುವೆ ನಡೆದ ಆಪಾದಿತ ಸಂಭಾಷಣೆಯ ಬಗ್ಗೆ ಪಾಕಿಸ್ತಾನಕ್ಕೆ ಸಂದೇಶ ಕಳುಹಿಸಿದ್ದರೂ, ಮಜೀದ್ ಅವರ ವಿದಾಯ ಊಟದ ಸಮಯದಲ್ಲಿ ಸಂಭಾಷಣೆ ನಡೆದಿದೆ. ಇದರಲ್ಲಿ ಇಮ್ರಾನ್ ಖಾನ್ ಹೇಳಿಕೊಂಡ ಬೆದರಿಕೆಯ ಧ್ವನಿಯನ್ನು ಹೊತ್ತಿಲ್ಲ.

ಇದನ್ನೂ ಓದಿ: Imran Khan: ನಮ್ಮ ಪಕ್ಷದವರನ್ನು ಪಾಕ್ ವಿರೋಧ ಪಕ್ಷದ ನಾಯಕರಾಗಿ ನಾಮನಿರ್ದೇಶನ ಮಾಡಬೇಡಿ; ಚುನಾವಣಾ ಆಯೋಗಕ್ಕೆ ಇಮ್ರಾನ್ ಖಾನ್ ಪತ್ರ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ