Nepal Air Crash: ಯೇತಿ ಏರ್‌ಲೈನ್ಸ್ ವಿಮಾನ ಪತನಕ್ಕೆ ಎಂಜಿನ್ ಸಮಸ್ಯೆ ಕಾರಣ: ವರದಿ

ಕಠ್ಮಂಡುವಿನಿಂದ ಪೋಖರಾ ಕಡೆಗೆ ತೆರಳುತ್ತಿದ್ದ ಯೇತಿ ಏರ್‌ಲೈನ್ಸ್ (Yeti Airlines)ಗೆ ಸೇರಿದ ವಿಮಾನ ಜನವರಿ ತಿಂಗಳಲ್ಲಿ ಪತಗೊಂಡಿತ್ತು. ಇದಕ್ಕೆ ಕಾರಣ ಯಾಂತ್ರಿಕ ಸಮಸ್ಯೆ ಎಂದು ವರದಿಯಾಗಿದೆ.

Nepal Air Crash: ಯೇತಿ ಏರ್‌ಲೈನ್ಸ್ ವಿಮಾನ ಪತನಕ್ಕೆ ಎಂಜಿನ್ ಸಮಸ್ಯೆ ಕಾರಣ: ವರದಿ
ಯೇತಿ ಏರ್​ಲೈನ್ಸ್​ಗೆ ಸೇರಿದ ವಿಮಾನ ಅಪಘಾತ
Follow us
| Edited By: Rakesh Nayak Manchi

Updated on:Feb 06, 2023 | 7:45 PM

ಕಠ್ಮಂಡು: ನೇಪಾಳದ ಕಠ್ಮಂಡುವಿನಿಂದ ಪೋಖರಾ ಕಡೆಗೆ ತೆರಳುತ್ತಿದ್ದ ಯೇತಿ ಏರ್‌ಲೈನ್ಸ್ (Yeti Airlines)ಗೆ ಸೇರಿದ ವಿಮಾನ ಪತನ (Nepal Air Crash)ಕ್ಕೆ ಎಂಜಿನ್ ಸಮಸ್ಯೆ (ಯಾಂತ್ರಿಕ ದೋಷ) ಎಂದು ವರದಿಯಾಗಿದೆ. ನೇಪಾಳದ ಪೋಖರಾದಲ್ಲಿ ಜನವರಿ 15ರಂದು ಬೆಳಿಗ್ಗೆ ಎರಡು ಎಂಜಿನ್‌ನ ಎಟಿಆರ್ 72 ವಿಮಾನ ಭೀಕರ ಅಪಘಾತಕ್ಕೀಡಾಗಿತ್ತು. ಸುಮಾರು 68 ಪ್ರಯಾಣಿಕರು ಹಾಗೂ ನಾಲ್ವರು ಸಿಬ್ಬಂದಿ ಹೊತ್ತು ಸಾಗುತ್ತಿದ್ದ ಈ ವಿಮಾನ ದುರಂತಕ್ಕೀಡಾಗಿ ಅದರಲ್ಲಿದ್ದ ಅಷ್ಟೂ ಮಂದಿ ಸಾವನ್ನಪ್ಪಿದ್ದರು. ಇದರಲ್ಲಿ ಐವರು ಭಾರತೀಯರಾಗಿದ್ದಾರೆ. 53 ನೇಪಾಳಿಗಳು, 5 ಭಾರತೀಯರು, 4 ರಷ್ಯನ್ನರು, ಒಬ್ಬ ಐರಿಶ್, 2 ಕೊರಿಯನ್ನರು, 1 ಅರ್ಜೆಂಟೀನಾದ ಪ್ರಜೆ ಮತ್ತು ಒಬ್ಬ ಫ್ರೆಂಚ್ ಪ್ರಜೆ ವಿಮಾನದಲ್ಲಿದ್ದರು ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿತ್ತು.

ಪೊಖರಾಗೆ ತೆರಳಬೇಕಿದ್ದ ವಿಮಾನ ಬೆಳಗ್ಗೆ 10:33ಕ್ಕೆ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿತ್ತು. ಇದಾದ ಸುಮಾರು 20 ನಿಮಿಷಕ್ಕೆ ವಿಮಾನ ಅಪಘಾತಕ್ಕೀಡಾಗಿತ್ತು. ನಾಗರಿಕ ವಿಮಾನಯಾನ ಪ್ರಾಧಿಕಾರದ ಪ್ರಕಾರ, ಲ್ಯಾಂಡಿಂಗ್ ಮೊದಲು ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ, ತಾಂತ್ರಿಕ ದೋಷದಿಂದ ಅಪಘಾತ ಸಂಭವಿಸಿದೆ ಎಂದು ನೇಪಾಳ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದರು. ಮಾತ್ರವಲ್ಲದೆ ವಿಮಾನ ದುರಂತದ ಕುರಿತು ತನಿಖೆ ನಡೆಸಲು 5 ಸದಸ್ಯರ ತನಿಖಾ ಆಯೋಗವನ್ನು ರಚಿಸಲಾಗಿತ್ತು.

ಇದನ್ನೂ ಓದಿ: Nepal Plane Crash: ನೇಪಾಳ ವಿಮಾನ ದುರಂತದಲ್ಲಿ ಎಲ್ಲಾ ಪ್ರಯಾಣಿಕರ ಸಾವು, 5 ಸದಸ್ಯರ ತನಿಖಾ ಆಯೋಗ ರಚನೆ

ಈ ದುರಂತದಲ್ಲಿ ಭಾರತೀಯ ಪ್ರಜೆಗಳಾದ ಅಭಿಷೇಕ್ ಕುಶ್ವಾಹ, ಬಿಶಾಲ್ ಶರ್ಮಾ, ಅನಿಲ್ ಕುಮಾರ್ ರಾಜ್‌ಭರ್, ಸೋನು ಜೈಸ್ವಾಲ್ ಮತ್ತು ಸಂಜಯ ಜೈಸ್ವಾಲ್ ಮೃತಪಟ್ಟಿದ್ದಾರೆ. ಇದು ಅತ್ಯಂತ ದುರದೃಷ್ಟಕರ ಘಟನೆ ಎಂದು ಭಾರತದ ನೇಪಾಳ ರಾಯಭಾರಿ ಶಂಕರ್ ಪಿ ಶರ್ಮಾ ಸಂತಾಪ ಸೂಚಿಸಿದ್ದರು. ನೇಪಾಳ ಪ್ರಧಾನಿ ಹಾಗೂ ಭಾರತದ ನಾಗರಿಕ ವಿಮಾನಯಾನ ಸಚಿವರು ಘಟನೆ ಸಂಬಂಧ ಸಂತಾಪ ವ್ಯಕ್ತಪಡಿಸಿದ್ದರು.

ಸಿರಿಯಮ್ ಫ್ಲೀಟ್ಸ್ ಡೇಟಾ, ವಿಮಾನದ ಫ್ಲೀಟ್, ಉಪಕರಣಗಳು ಮತ್ತು ಅದರ ವೆಚ್ಚವನ್ನು ಟ್ರ್ಯಾಕ್ ಮಾಡಲಾಗಿದೆ, ನದಿಯ ಕಂದರಕ್ಕೆ ಅಪ್ಪಳಿಸಿದ ಯೇತಿ ಏರ್‌ಲೈನ್ಸ್‌ನ 9N-ANC ATR-72 ವಿಮಾನವು ಈ ಹಿಂದೆ 2007ರಲ್ಲಿ ವಿಜಯ್ ಮಲ್ಯ ಕಿಂಗ್‌ಫಿಶರ್ ಏರ್‌ಲೈನ್ಸ್ ಒಡೆತನದಲ್ಲಿತ್ತು ಎಂದು ಹೇಳಲಾಗಿದೆ. ಆರು ವರ್ಷಗಳ ನಂತರ, ಈ ವಿಮಾನವನ್ನು 2019 ರಲ್ಲಿ ನೇಪಾಳದ ಯೇತಿ ಏರ್‌ಲೈನ್ಸ್‌ಗೆ ಮಾರಾಟ ಮಾಡುವ ಮೊದಲು ಥೈಲ್ಯಾಂಡ್‌ನ ನೋಕ್ ಏರ್ ಖರೀದಿಸಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:45 pm, Mon, 6 February 23

ತಾಜಾ ಸುದ್ದಿ
ಕರ್ನಾಟಕ ಬಂದ್ ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಕಾಮ್ಸ್ ಅಧ್ಯಕ್ಷ
ಕರ್ನಾಟಕ ಬಂದ್ ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಕಾಮ್ಸ್ ಅಧ್ಯಕ್ಷ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ