AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: 4 ಮಂದಿ ಭಾರತೀಯರೂ ಸೇರಿ 22 ಪ್ರಯಾಣಿಕರಿದ್ದ ನೇಪಾಳದ ವಿಮಾನ ನಾಪತ್ತೆ

ನಾಲ್ವರು ಭಾರತೀಯರೂ ಸೇರಿದಂತೆ ಒಟ್ಟು 22 ಮಂದಿ ಇದ್ದ ನೇಪಾಳದ ವಿಮಾನವೊಂದು ವಿಮಾನ ನಿಯಂತ್ರಣ ಕೇಂದ್ರದ ಸಂಪರ್ಕ ಕಳೆದುಕೊಂಡಿದೆ.

Breaking News: 4 ಮಂದಿ ಭಾರತೀಯರೂ ಸೇರಿ 22 ಪ್ರಯಾಣಿಕರಿದ್ದ ನೇಪಾಳದ ವಿಮಾನ ನಾಪತ್ತೆ
ನಾಪತ್ತೆಯಾಗಿರುವ ವಿಮಾನದ ಮಾದರಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:May 29, 2022 | 12:46 PM

Share

ಕಠ್ಮಂಡು: ನೇಪಾಳದ ಖಾಸಗಿ ವಿಮಾನಯಾನ ಸಂಸ್ಥೆ ನಿರ್ವಹಿಸುತ್ತಿದ್ದ ವಿಮಾನವೊಂದು ಭಾನುವಾರ ಮುಂಜಾನೆ ಕಣ್ಮರೆಯಾಗಿದೆ. ಈ ವಿಮಾನದಲ್ಲಿ ನಾಲ್ವರು ಭಾರತೀಯರೂ ಸೇರಿದಂತೆ 22 ಪ್ರಯಾಣಿಕರಿದ್ದರು ಎಂದು ನೇಪಾಳದ ತಾರಾ ಏರ್ ವಿಮಾನಯಾನ ಸಂಸ್ಥೆಯ ಸಿಬ್ಬಂದಿ ನೀಡಿರುವ ಮಾಹಿತಿ ಉಲ್ಲೇಖಿಸಿ ಹಲವು ಮಾಧ್ಯಮಗಳು ವರದಿ ಮಾಡಿವೆ.

ತಾರಾ ಏರ್ ಸಂಸ್ಥೆಯ 9 NAET ಮಾದರಿಯ ಎರಡು ಎಂಜಿನ್​ನ ವಿಮಾನವು ಪ್ರವಾಸಿ ತಾಣ ಪೊಖ್ರಾದಿಂದ ಜೊಮ್​ಸೊಮ್ ಎಂಬಲ್ಲಿಗೆ ತೆರಳುತ್ತಿತ್ತು. ಮುಂಜಾನೆ 9:55ಕ್ಕೆ ವಿಮಾನವು ನಿಯಂತ್ರಣ ಕಚೇರಿಯೊಂದಿಗೆ ಸಂಪರ್ಕ ಕಳೆದುಕೊಂಡಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ನಾಪತ್ತೆಯಾದ ವಿಮಾನ ಪತ್ತೆಗೆ ನೇಪಾಳ ಸರ್ಕಾರವು ಹೆಲಿಕಾಪ್ಟರ್​ಗಳನ್ನು ನಿಯೋಜಿಸಿದೆ.

‘ಮುಂಜಾನೆ ಜೊಮ್​ಸೊಮ್ ಆಗಸದಲ್ಲಿ ವಿಮಾನವು ಕಂಡು ಬಂದಿತ್ತು. ನಂತರ ಧವಳಗಿರಿ ಶಿಖರದ ಕಡೆಗೆ ಹೊರಳಿಕೊಂಡಿತು. ಅನಂತರ ವಿಮಾನ ನಿಯಂತ್ರಣ ಕಚೇರಿಯೊಂದಿಗೆ ಸಂಪರ್ಕ ಕಡಿತುಕೊಂಡಿತು’ ಎಂದು ಜಿಲ್ಲಾಧಿಕಾರಿ ನೇತ್ರಪ್ರಸಾದ್ ಶರ್ಮಾ ಮಾಹಿತಿ ನೀಡಿದ್ದಾರೆ. ವಿಮಾನದಲ್ಲಿ ನಾಲ್ವರು ಭಾರತೀಯರು, ಮೂವರು ಜಪಾನೀಯರು ಇದ್ದರು. ಇತರೆಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ನೇಪಾಳೀಯರು ಎಂದು ಸರ್ಕಾರಿ ದೂರದರ್ಶನ ವರದಿ ಮಾಡಿದೆ.

ವಿಶ್ವದ ಅತ್ಯಂತ ಸುಂದರ ಮತ್ತು ಎತ್ತರದ ಗಿರಿಶಿಖರಗಳ ತಾಣವಾಗಿರುವ ನೇಪಾಳಕ್ಕೆ ಪ್ರವಾಸೋದ್ಯಮವೇ ಪ್ರಮುಖ ಆದಾಯ ಮೂಲವಾಗಿದೆ. ಹಠಾತ್ತನೆ ಬದಲಾಗುವ ಹವಾಮಾನ ಮತ್ತು ಅತ್ಯಂತ ದುರ್ಗಮ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ರನ್​ವೇಗಳ ಕಾರಣದಿಂದ ವೈಮಾನಿಕ ಅಪಘಾತಗಳು ಹೆಚ್ಚಾಗುತ್ತಿವೆ. ಸಣ್ಣ ವಿಮಾನಗಳು ಮತ್ತು ಹೆಲಿಕಾಪ್ಟರ್​ಗಳು ಹೆಚ್ಚಿನ ಸಂಖ್ಯೆಯಲ್ಲಿ ನೇಪಾಳದಲ್ಲಿ ಕಾರ್ಯನಿರ್ವಹಿಸುತ್ತಿವೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಲಿಂಕ್: Nepal plane missing

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:45 am, Sun, 29 May 22

‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ