AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: 4 ಮಂದಿ ಭಾರತೀಯರೂ ಸೇರಿ 22 ಪ್ರಯಾಣಿಕರಿದ್ದ ನೇಪಾಳದ ವಿಮಾನ ನಾಪತ್ತೆ

ನಾಲ್ವರು ಭಾರತೀಯರೂ ಸೇರಿದಂತೆ ಒಟ್ಟು 22 ಮಂದಿ ಇದ್ದ ನೇಪಾಳದ ವಿಮಾನವೊಂದು ವಿಮಾನ ನಿಯಂತ್ರಣ ಕೇಂದ್ರದ ಸಂಪರ್ಕ ಕಳೆದುಕೊಂಡಿದೆ.

Breaking News: 4 ಮಂದಿ ಭಾರತೀಯರೂ ಸೇರಿ 22 ಪ್ರಯಾಣಿಕರಿದ್ದ ನೇಪಾಳದ ವಿಮಾನ ನಾಪತ್ತೆ
ನಾಪತ್ತೆಯಾಗಿರುವ ವಿಮಾನದ ಮಾದರಿ
TV9 Web
| Edited By: |

Updated on:May 29, 2022 | 12:46 PM

Share

ಕಠ್ಮಂಡು: ನೇಪಾಳದ ಖಾಸಗಿ ವಿಮಾನಯಾನ ಸಂಸ್ಥೆ ನಿರ್ವಹಿಸುತ್ತಿದ್ದ ವಿಮಾನವೊಂದು ಭಾನುವಾರ ಮುಂಜಾನೆ ಕಣ್ಮರೆಯಾಗಿದೆ. ಈ ವಿಮಾನದಲ್ಲಿ ನಾಲ್ವರು ಭಾರತೀಯರೂ ಸೇರಿದಂತೆ 22 ಪ್ರಯಾಣಿಕರಿದ್ದರು ಎಂದು ನೇಪಾಳದ ತಾರಾ ಏರ್ ವಿಮಾನಯಾನ ಸಂಸ್ಥೆಯ ಸಿಬ್ಬಂದಿ ನೀಡಿರುವ ಮಾಹಿತಿ ಉಲ್ಲೇಖಿಸಿ ಹಲವು ಮಾಧ್ಯಮಗಳು ವರದಿ ಮಾಡಿವೆ.

ತಾರಾ ಏರ್ ಸಂಸ್ಥೆಯ 9 NAET ಮಾದರಿಯ ಎರಡು ಎಂಜಿನ್​ನ ವಿಮಾನವು ಪ್ರವಾಸಿ ತಾಣ ಪೊಖ್ರಾದಿಂದ ಜೊಮ್​ಸೊಮ್ ಎಂಬಲ್ಲಿಗೆ ತೆರಳುತ್ತಿತ್ತು. ಮುಂಜಾನೆ 9:55ಕ್ಕೆ ವಿಮಾನವು ನಿಯಂತ್ರಣ ಕಚೇರಿಯೊಂದಿಗೆ ಸಂಪರ್ಕ ಕಳೆದುಕೊಂಡಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ನಾಪತ್ತೆಯಾದ ವಿಮಾನ ಪತ್ತೆಗೆ ನೇಪಾಳ ಸರ್ಕಾರವು ಹೆಲಿಕಾಪ್ಟರ್​ಗಳನ್ನು ನಿಯೋಜಿಸಿದೆ.

‘ಮುಂಜಾನೆ ಜೊಮ್​ಸೊಮ್ ಆಗಸದಲ್ಲಿ ವಿಮಾನವು ಕಂಡು ಬಂದಿತ್ತು. ನಂತರ ಧವಳಗಿರಿ ಶಿಖರದ ಕಡೆಗೆ ಹೊರಳಿಕೊಂಡಿತು. ಅನಂತರ ವಿಮಾನ ನಿಯಂತ್ರಣ ಕಚೇರಿಯೊಂದಿಗೆ ಸಂಪರ್ಕ ಕಡಿತುಕೊಂಡಿತು’ ಎಂದು ಜಿಲ್ಲಾಧಿಕಾರಿ ನೇತ್ರಪ್ರಸಾದ್ ಶರ್ಮಾ ಮಾಹಿತಿ ನೀಡಿದ್ದಾರೆ. ವಿಮಾನದಲ್ಲಿ ನಾಲ್ವರು ಭಾರತೀಯರು, ಮೂವರು ಜಪಾನೀಯರು ಇದ್ದರು. ಇತರೆಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ನೇಪಾಳೀಯರು ಎಂದು ಸರ್ಕಾರಿ ದೂರದರ್ಶನ ವರದಿ ಮಾಡಿದೆ.

ವಿಶ್ವದ ಅತ್ಯಂತ ಸುಂದರ ಮತ್ತು ಎತ್ತರದ ಗಿರಿಶಿಖರಗಳ ತಾಣವಾಗಿರುವ ನೇಪಾಳಕ್ಕೆ ಪ್ರವಾಸೋದ್ಯಮವೇ ಪ್ರಮುಖ ಆದಾಯ ಮೂಲವಾಗಿದೆ. ಹಠಾತ್ತನೆ ಬದಲಾಗುವ ಹವಾಮಾನ ಮತ್ತು ಅತ್ಯಂತ ದುರ್ಗಮ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ರನ್​ವೇಗಳ ಕಾರಣದಿಂದ ವೈಮಾನಿಕ ಅಪಘಾತಗಳು ಹೆಚ್ಚಾಗುತ್ತಿವೆ. ಸಣ್ಣ ವಿಮಾನಗಳು ಮತ್ತು ಹೆಲಿಕಾಪ್ಟರ್​ಗಳು ಹೆಚ್ಚಿನ ಸಂಖ್ಯೆಯಲ್ಲಿ ನೇಪಾಳದಲ್ಲಿ ಕಾರ್ಯನಿರ್ವಹಿಸುತ್ತಿವೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಲಿಂಕ್: Nepal plane missing

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:45 am, Sun, 29 May 22

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ