AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Earthquake: ನೇಪಾಳದಲ್ಲಿ ಸಂಭವಿಸಿದ 5.9 ತೀವ್ರತೆಯ ಪ್ರಭಲ ಭೂಕಂಪಕ್ಕೆ ಓರ್ವ ಬಲಿ

ನೇಪಾಳದಲ್ಲಿ ಸಂಭವಿಸಿದ 5.9 ತೀವ್ರತೆಯ ಪ್ರಭಲ ಭೂಕಂಪದಲ್ಲಿ ಓರ್ವ ಪ್ರಾಣ ಕಳೆದುಕೊಂಡಿದ್ದಾರೆ.  ಪಶ್ಚಿಮ ನೇಪಾಳದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಈ ಪ್ರದೇಶದಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Nepal Earthquake: ನೇಪಾಳದಲ್ಲಿ ಸಂಭವಿಸಿದ 5.9 ತೀವ್ರತೆಯ ಪ್ರಭಲ ಭೂಕಂಪಕ್ಕೆ ಓರ್ವ ಬಲಿ
ಭೂಕಂಪImage Credit source: The Hindu
ನಯನಾ ರಾಜೀವ್
|

Updated on: Jan 25, 2023 | 12:23 PM

Share

ನೇಪಾಳದಲ್ಲಿ ಸಂಭವಿಸಿದ 5.9 ತೀವ್ರತೆಯ ಪ್ರಭಲ ಭೂಕಂಪದಲ್ಲಿ ಓರ್ವ ಪ್ರಾಣ ಕಳೆದುಕೊಂಡಿದ್ದಾರೆ.  ಪಶ್ಚಿಮ ನೇಪಾಳದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಈ ಪ್ರದೇಶದಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುದುರ್ಪಶ್ಚಿಮ್ ಪ್ರಾಂತ್ಯದ ಬಾಜುರಾ ಜಿಲ್ಲೆಯ ಮೇಲಾ ಪ್ರದೇಶದಲ್ಲಿ ಭೂಕಂಪವು ಸ್ಥಳೀಯ ಕಾಲಮಾನ ಮಧ್ಯಾಹ್ನ 2:43 ಕ್ಕೆ ಈ ಪ್ರದೇಶವನ್ನು ಅಪ್ಪಳಿಸಿತು ಎಂದು ಭೂಕಂಪ ಮಾಪನ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥ ಲೋಕ ಬಿಜಯ ಅಧಿಕಾರಿ ತಿಳಿಸಿದ್ದಾರೆ.

ಗೌಮುಲ್ ಗ್ರಾಮಾಂತರ ಪುರಸಭೆ-2ರಲ್ಲಿ 35 ವರ್ಷದ ಮಹಿಳೆಯೊಬ್ಬರು ಸಮೀಪದ ಕಾಡಿನಲ್ಲಿ ಹುಲ್ಲು ಕಡಿಯುತ್ತಿದ್ದಾಗ ಬಂಡೆಯೊಂದು ಬಡಿದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Delhi Earthquake: ದೆಹಲಿಯಲ್ಲಿ ಪ್ರಬಲ ಭೂಕಂಪ

ಪ್ರಾಂತೀಯ ಪೊಲೀಸ್ ಮುಖ್ಯಸ್ಥರ ಪ್ರಕಾರ, ಭೂಕಂಪವು ಬಜುರಾ ಮತ್ತು ಬಜಾಂಗ್ ಜಿಲ್ಲೆಗಳಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿದೆ.

ಕಠ್ಮಂಡುವಿನಿಂದ ಪಶ್ಚಿಮಕ್ಕೆ 450 ಕಿಮೀ ದೂರದಲ್ಲಿರುವ ಬಾಜುರಾ ಜಿಲ್ಲೆಯ ಬಾಡಿಮಲಿಕಾ ಪುರಸಭೆಯ ವಾರ್ಡ್ ಸಂಖ್ಯೆ 7 ರಲ್ಲಿ ಎರಡು ಮನೆಗಳು ಮತ್ತು ವಾರ್ಡ್ ಸಂಖ್ಯೆ 9 ರಲ್ಲಿ ಇತರ ಎರಡು ಮನೆಗಳು ನಾಶವಾಗಿವೆ. ಪುರಸಭೆಯ ದೇವಸ್ಥಾನವೊಂದರಲ್ಲೂ ಬಿರುಕು ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೂಕಂಪದಿಂದ ಉಂಟಾದ ಭೂಕುಸಿತದಿಂದಾಗಿ 40 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ, ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಶ್ಚಿಮ ನೇಪಾಳದ ವಿಶಾಲ ಪ್ರದೇಶಗಳಲ್ಲಿ 5.9 ತೀವ್ರತೆಯ ಭೂಕಂಪದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥೆ ಮೋನಿಕಾ ದಹಲ್ ಹೇಳಿದ್ದಾರೆ. ಇದು ನೆರೆಯ ಭಾರತದ ಕೆಲವು ಭಾಗಗಳಲ್ಲಿಯೂ ಕಂಡುಬಂದಿದೆ.

ಪಶ್ಚಿಮ ನೇಪಾಳವು ಸೌಮ್ಯದಿಂದ ಮಧ್ಯಮ ತೀವ್ರತೆಯ ಭೂಕಂಪಗಳಿಂದ ಆಗಾಗ ಹಾನಿಗೊಳಗಾಗುತ್ತದೆ. ಡಿಸೆಂಬರ್ 2022 ರಲ್ಲಿ, ಮೂರು ಕಂಪನಗಳು ಪಶ್ಚಿಮ ನೇಪಾಳವನ್ನು ಅಲುಗಾಡಿಸಿತ್ತು. ಏಪ್ರಿಲ್ 2015 ರಲ್ಲಿ, ನೇಪಾಳದಲ್ಲಿ 7.8 ತೀವ್ರತೆಯ ವಿನಾಶಕಾರಿ ಭೂಕಂಪವು ಸುಮಾರು 9,000 ಜನರನ್ನು ಕೊಂದಿತ್ತು ಮತ್ತು ಸುಮಾರು 22,000 ಜನರು ಗಾಯಗೊಂಡಿದ್ದರು, ಇದು 800,000 ಮನೆಗಳು ಮತ್ತು ಶಾಲಾ ಕಟ್ಟಡಗಳನ್ನು ಹಾನಿಗೊಳಿಸಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ