Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Earthquake: ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ, ಸಾವಿನ ಸಂಖ್ಯೆ 129ಕ್ಕೆ ಏರಿಕೆ

ನೇಪಾಳದಲ್ಲಿ ಶುಕ್ರವಾರ ರಾತ್ರಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 129ಕ್ಕೆ ಏರಿಕೆಯಾಗಿದೆ. ಭೂಕಂಪದ ಕೇಂದ್ರ ಬಿಂದು ನೇಪಾಳದ ಜಜರ್ಕೋಟ್ ಜಿಲ್ಲೆಯ ಲಾಮಿಡಾಂಡಾ ಪ್ರದೇಶದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳ ಹೇಳಿದ್ದಾರೆ. ದೆಹಲಿ-ಎನ್‌ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ.

Nepal Earthquake: ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ, ಸಾವಿನ ಸಂಖ್ಯೆ 129ಕ್ಕೆ ಏರಿಕೆ
ನೇಪಾಳದಲ್ಲಿ ಭೂಕಂಪ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Rakesh Nayak Manchi

Updated on:Nov 04, 2023 | 8:03 AM

ಕಠ್ಮಂಡು, ನ.4: ನೇಪಾಳದ ಕಠ್ಮಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ ಭೂಕಂಪ (Nepal Earthqauke) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 129ಕ್ಕೆ ಏರಿಕೆಯಾಗಿದ್ದು, 500 ಮಂದಿ ಗಾಯಗೊಂಡಿದ್ದಾರೆ. ದೆಹಲಿ-ಎನ್‌ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ. ಭೂಕಂಪನದ ರಾಷ್ಟ್ರೀಯ ಕೇಂದ್ರ (NCS) ಪ್ರಕಾರ, ಭೂಕಂಪವು ಶುಕ್ರವಾರ ರಾತ್ರಿ 11:32 ಕ್ಕೆ 10 ಕಿಮೀ ಆಳದಲ್ಲಿ ಸಂಭವಿಸಿದೆ.

ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳ ಪ್ರಕಾರ, ಭೂಕಂಪದ ಕೇಂದ್ರಬಿಂದು ನೇಪಾಳದ ಜಜರ್ಕೋಟ್ ಜಿಲ್ಲೆಯ ಲಾಮಿಡಾಂಡಾ ಪ್ರದೇಶದಲ್ಲಿದೆ. ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಸಂಭವಿಸಿದ ಸರಣಿ ಭೂಕಂಪಗಳ ಬೆನ್ನಲ್ಲೇ ಶುಕ್ರವಾರ ಭೂಕಂಪ ಸಂಭವಿಸಿದೆ.

ಇದನ್ನೂ ಓದಿ: Nepal Earthquake: ನೇಪಾಳದ ಕಠ್ಮಂಡುವಿನಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

ಜಾಜರಕೋಟ್​​​​​​ನಲ್ಲಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಜಾಜರಕೋಟ್​​​​​​ ಡೆಪ್ಯುಟಿ ಮೇಯರ್ ಕೂಡ ಮೃತಪಟ್ಟಿದ್ದಾರೆ. ಪಶ್ಚಿಮ ರುಕುಂ ಜಿಲ್ಲೆಯಲ್ಲಿ 36 ಜನ, ಜಾಜರಕೋಟ್​ನಲ್ಲಿ 34 ಜನ ಸಾವನ್ನಪ್ಪಿದ್ದು, ಒಟ್ಟಾರೆಯಾಗಿ 129 ಮಂದಿಯನ್ನು ಭೂಕಂಪವು ಬಲಿ ಪಡೆದುಕೊಂಡಿದೆ.

ಕೆಲವು ದಿನಗಳ ಹಿಂದೆ, ಅಕ್ಟೋಬರ್ 22 ರಂದು ನೇಪಾಳದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪದ ಕೇಂದ್ರಬಿಂದು ಧಾಡಿಂಗ್‌ನಲ್ಲಿದ್ದು, ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿಯೂ ಭೂಕಂಪದ ಕಂಪನದ ಅನುಭವವಾಗಿತ್ತು. ಅಕ್ಟೋಬರ್ 15 ರಂದು, ಹರಿಯಾಣದಲ್ಲಿ 3.1 ತೀವ್ರತೆಯ ಭೂಕಂಪನದ ನಡುಕ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಅನುಭವವಾಗಿತ್ತು.

ಅಕ್ಟೋಬರ್ 3 ರಂದು ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಬಲವಾದ ಕಂಪನಗಳು ಸಂಭವಿಸಿದ್ದವು. ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆ ದಾಖಲಾಗಿತ್ತು.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:37 am, Sat, 4 November 23

ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ