AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಶೇಷಗಳ ರಾಶಿಯೊಳಗಿಂದ ಕೇಳಿಬಂತು ಆ ಪುಟ್ಟ ದನಿ, ಜೀವ ಪಣಕ್ಕಿಟ್ಟು ಮುಗ್ಧ ಬಾಲಕಿಯ ರಕ್ಷಿಸಿದ ಪಡೆ

ನೇಪಾಳದ ಭೀಕರ ಪ್ರವಾಹದಲ್ಲಿ ಸಾವಿರಾರು ಜೀವಗಳು ನಲುಗಿರುವಾಗ, ಮಣ್ಣಿನ ರಾಶಿಯಡಿಯಲ್ಲಿ 72 ಗಂಟೆಗಳ ಕಾಲ ಸಿಲುಕಿದ್ದ 6 ವರ್ಷದ ಮನೀಷಾ ಮಗರ್ ಅವರನ್ನು ನೇಪಾಳ ಸಶಸ್ತ್ರ ಪೊಲೀಸ್ ಪಡೆ (APF) ಪವಾಡ ಸದೃಶವಾಗಿ ರಕ್ಷಿಸಿದೆ. ಕೈಗಳಿಂದಲೇ ಮಣ್ಣು ಅಗೆದು ಬಾಲಕಿಯನ್ನು ಹೊರತೆಗೆದ ಯೋಧರ ಸಾಹಸ ಮೆಚ್ಚುಗೆ ಗಳಿಸಿದ್ದು, ಈ ಘಟನೆ ನೇಪಾಳದ ದುರಂತದ ನಡುವೆ ಭರವಸೆಯ ಕಿರಣವಾಗಿ ಮೂಡಿದೆ.

ಅವಶೇಷಗಳ ರಾಶಿಯೊಳಗಿಂದ ಕೇಳಿಬಂತು ಆ ಪುಟ್ಟ ದನಿ, ಜೀವ ಪಣಕ್ಕಿಟ್ಟು ಮುಗ್ಧ ಬಾಲಕಿಯ ರಕ್ಷಿಸಿದ ಪಡೆ
ಪ್ರವಾಹ
ನಯನಾ ರಾಜೀವ್
|

Updated on: Aug 31, 2026 | 9:12 AM

Share

ಕಠ್ಮಂಡು, ಆಗಸ್ಟ್ 31: ನೇಪಾಳ ಪ್ರವಾಹದಲ್ಲಿ ಸಾವಿರಾರು ಮನೆಗಳ ಜತೆಗೆ ನೂರಾರು ಜೀವಗಳು ಕೊಚ್ಚಿಹೋಗಿ, ಕಣ್ಣೀರ ಕಡಲಿನಲ್ಲಿ ಮುಳುಗಿರುವ ನೇಪಾಳದಲ್ಲಿ ಕಗ್ಗತ್ತಲೆಯ ನಡುವೆ ಒಂದು ಪುಟ್ಟ ಬೆಳಕಿನ ಕಿರಣ ಮೂಡಿದೆ. ಭೋಟೆ ಕೋಶಿ ನದಿಯ ಪ್ರವಾಹ(Flood)ಕ್ಕೆ ನೆಲಸಮವಾಗಿದ್ದ ರಸುವಾ ಜಿಲ್ಲೆಯ ತಿಮುರೆ ಗ್ರಾಮದ ದಟ್ಟವಾದ ಮಣ್ಣು ಹಾಗೂ ಕಲ್ಲು-ಬಂಡೆಗಳ ರಾಶಿಯಡಿಯಲ್ಲಿ ಬರೋಬ್ಬರಿ 72 ಗಂಟೆಗಳಿಗೂ ಹೆಚ್ಚು ಕಾಲ ಸಿಲುಕಿದ್ದ 6 ವರ್ಷದ ಬಾಲಕಿ ಮನೀಷಾ ಮಗರ್​ನನ್ನು ರಕ್ಷಿಸಲಾಗಿದೆ.

ಶುಕ್ರವಾರ ಸಂಜೆ ತಿಮುರೆ ಗ್ರಾಮದ ಅವಶೇಷಗಳ ರಾಶಿಯ ನಡುವೆ ಶೋಧ ನಡೆಸುತ್ತಿದ್ದ ನೇಪಾಳದ ಸಶಸ್ತ್ರ ಪೊಲೀಸ್ ಪಡೆ (APF) ಸಿಬ್ಬಂದಿಗೆ ಮಣ್ಣಿನ ಆಳದಿಂದ ಮಗುವಿನ ಮಸುಕಾದ ಅಳು ಮತ್ತು ಕಿರುಚಾಟದ ಧ್ವನಿ ಕೇಳಿಸಿತು.

ಕೈಗಳಿಂದಲೇ ಅಗೆದ ಯೋಧರು: ಸಣ್ಣ ಸುಳಿವೂ ಸಾಕೆಂದು ಬಗೆದ ಯೋಧರು, ಯಾವುದೇ ಯಂತ್ರಗಳ ಸಹಾಯವಿಲ್ಲದೆ ಕೈಗಳು ಮತ್ತು ಸಲಿಕೆಗಳಿಂದ ಎಚ್ಚರಿಕೆಯಿಂದ ಮಣ್ಣು ತೆರವುಗೊಳಿಸಿ, ಆ ಪುಟ್ಟ ಕಂದಮ್ಮನನ್ನು ಜೀವಂತವಾಗಿ ಹೊರತೆಗೆಯುವಲ್ಲಿ ಯಶಸ್ವಿಯಾದರು.

ಗಡಿ ಹೊರಠಾಣೆಯಲ್ಲಿ ಪ್ರಾಥಮಿಕ ಚಿಕಿತ್ಸೆ: ಮಣ್ಣಿನಿಂದ ಹೊರತೆಗೆದಾಗ ಮಗುವಿನ ಉಸಿರಾಟ ಕ್ಷೀಣಿಸುತ್ತಿತ್ತು. ತಕ್ಷಣ ಸಮೀಪದ ಎಪಿಎಫ್ ಔಟ್‌ಪೋಸ್ಟ್‌ನಲ್ಲಿ ಪ್ರಥಮ ಚಿಕಿತ್ಸೆ ನೀಡಿ ಸ್ಥಿತಿ ಹದಗೆಡದಂತೆ ನೋಡಿಕೊಳ್ಳಲಾಯಿತು.

ಮತ್ತಷ್ಟು ಓದಿ: ಹಿಮಬಂಡೆ ಹೊಡೆತಕ್ಕೆ ನೇಪಾಳದ ಶೇ. 10 ಆರ್ಥಿಕತೆ ಧ್ವಂಸ; ಈ ಪುಟ್ಟ ದೇಶದ ಪುನರ್ನಿರ್ಮಾಣಕ್ಕೆ ಬೇಕು 5 ಬಿಲಿಯನ್ ಡಾಲರ್

ಕಠ್ಮಂಡು ಆಸ್ಪತ್ರೆಗೆ ರವಾನೆ: ಪ್ರತಿಕೂಲ ಹವಾಮಾನ, ಮಳೆ ಮತ್ತು ಮಂಜಿನ ಕಾರಣ ಹೆಲಿಕಾಪ್ಟರ್ ಹಾರಾಟ ವಿಳಂಬವಾದರೂ, ಶನಿವಾರ ವಾತಾವರಣ ತಿಳಿಯಾಗುತ್ತಿದ್ದಂತೆ ಸೇನಾ ಹೆಲಿಕಾಪ್ಟರ್ ಮೂಲಕ ಬಾಲಕಿಯನ್ನು ಕಠ್ಮಂಡುವಿನ ಸುಸಜ್ಜಿತ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಯಿತು. ಸದ್ಯ ಆಕೆ ತೀವ್ರ ನಿಗಾ ಘಟಕದಲ್ಲಿ (ICU) ಚೇತರಿಸಿಕೊಳ್ಳುತ್ತಿದ್ದಾಳೆ.

ವೈರಲ್ ಆದ ವೀಡಿಯೊ: ಮಗುವನ್ನು ಮಣ್ಣಿನಡಿಯಿಂದ ಹೊರತೆಗೆಯುವ ಭಾವನಾತ್ಮಕ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಕ್ಷಣಾ ಸಿಬ್ಬಂದಿಯ ಕರ್ತವ್ಯನಿಷ್ಠೆಗೆ ಜಾಗತಿಕ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕುಟುಂಬಸ್ಥರ ಪತ್ತೆಗೆ ಮನವಿ: ಪ್ರವಾಹದಲ್ಲಿ ಬಾಲಕಿಯ ಹೆತ್ತವರು ಕಣ್ಮರೆಯಾಗಿದ್ದು, “ಈ ಮುಗ್ಧ ಮಗು ಮನೀಷಾ ಮಗರ್ ಅವರ ಹೆತ್ತವರು ಅಥವಾ ಸಂಬಂಧಿಕರ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ಅಧಿಕಾರಿಗಳನ್ನು ಸಂಪರ್ಕಿಸಿ” ಎಂದು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಈವರೆಗೆ ಪ್ರವಾಹದಲ್ಲಿ 675ಕ್ಕೂ ಹೆಚ್ಚು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 2,400ಕ್ಕೂ ಅಧಿಕ ಜನರು ಇನ್ನೂ ನಾಪತ್ತೆಯಾಗಿದ್ದಾರೆ.

ಶತಕೋಟಿ ಡಾಲರ್ ಆರ್ಥಿಕ ನಷ್ಟ: ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ಮಾತನಾಡಿ, ಧ್ವಂಸಗೊಂಡ ಹಳ್ಳಿಗಳು, ರಸ್ತೆಗಳು ಮತ್ತು ಜಲವಿದ್ಯುತ್ ಯೋಜನೆಗಳ ಮರುನಿರ್ಮಾಣಕ್ಕೆ ನೂರಾರು ಕೋಟಿ ಡಾಲರ್‌ಗಳ ಅಗತ್ಯವಿದ್ದು, ಅಂತಾರಾಷ್ಟ್ರೀಯ ಸಮುದಾಯದ ನೆರವು ಕೋರಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು