AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Helicopter Crash: ನೇಪಾಳದ ನುವಾಕೋಟ್‌ನಲ್ಲಿ ಹೆಲಿಕಾಪ್ಟರ್ ಪತನ; 5 ಜನ ಸಾವು

ಹೆಲಿಕಾಪ್ಟರ್ ನೇಪಾಳದ ಕಠ್ಮಂಡುವಿನಿಂದ ರಾಸುವಾಗೆ ತೆರಳುತ್ತಿದ್ದಾಗ ನುವಾಕೋಟ್ ಜಿಲ್ಲೆಯ ಸೂರ್ಯ ಚೌರ್ -7ನಲ್ಲಿ ಬೆಟ್ಟಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 5 ಜನರು ಸಾವನ್ನಪ್ಪಿದ್ದಾರೆ.

Nepal Helicopter Crash: ನೇಪಾಳದ ನುವಾಕೋಟ್‌ನಲ್ಲಿ ಹೆಲಿಕಾಪ್ಟರ್ ಪತನ; 5 ಜನ ಸಾವು
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on:Aug 07, 2024 | 4:37 PM

Share

ಕಠ್ಮಂಡು: ಇಂದು (ಬುಧವಾರ) ಮಧ್ಯಾಹ್ನ ನುವಾಕೋಟ್‌ನ ಶಿವಪುರಿ ಪ್ರದೇಶದಲ್ಲಿ ಏರ್ ಡೈನಾಸ್ಟಿಯ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈ ದುರಂತದಲ್ಲಿ ಒಟ್ಟು ಐವರು ಸಾವನ್ನಪ್ಪಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಹೆಲಿಕಾಪ್ಟರ್ ಕಠ್ಮಂಡುವಿನಿಂದ ರಾಸುವಾಗೆ ತೆರಳುತ್ತಿದ್ದಾಗ ನುವಾಕೋಟ್ ಜಿಲ್ಲೆಯ ಸೂರ್ಯ ಚೌರ್ -7ನಲ್ಲಿ ಬೆಟ್ಟಕ್ಕೆ ಡಿಕ್ಕಿ ಹೊಡೆದಿದೆ.

ಈ ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಅಧಿಕಾರಿಗಳು ರಕ್ಷಣಾ ತಂಡವನ್ನು ಸ್ಥಳಕ್ಕೆ ರವಾನಿಸಿದರು. ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಟಿಐಎ) ಮೂಲಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮವು ಹೆಲಿಕಾಪ್ಟರ್ ಮಧ್ಯಾಹ್ನ 1.54ಕ್ಕೆ ಕಠ್ಮಂಡುವಿನಿಂದ ಹೊರಟಿತ್ತು ಎಂದು ಹೇಳಿದೆ. ಸೂರ್ಯ ಚೌರ್ ತಲುಪಿದ ನಂತರ ಹೆಲಿಕಾಪ್ಟರ್ ಅಧಿಕಾರಿಗಳೊಂದಿಗೆ ಸಂಪರ್ಕ ಕಳೆದುಕೊಂಡಿತು.

ಇದನ್ನೂ ಓದಿ: Viral Video: ನದಿಯಂತಾದ ಜೈಪುರ ವಿಮಾನ ನಿಲ್ದಾಣ; ಲಗೇಜ್ ಟ್ರಾಲಿ ಮೇಲೆ ನಿಂತ ಪೈಲಟ್ ವಿಡಿಯೋ ವೈರಲ್

ಹೆಲಿಕಾಪ್ಟರ್ ಕಠ್ಮಂಡುವಿನಿಂದ ಹೊರಟು ಸೈಫ್ರುಬೆನ್ಸಿಗೆ ತೆರಳುತ್ತಿತ್ತು. ಟೇಕಾಫ್ ಆದ ಮೂರು ನಿಮಿಷಗಳ ನಂತರ ಹೆಲಿಕಾಪ್ಟರ್ ಸಂಪರ್ಕ ಕಳೆದುಕೊಂಡಿತು ಎನ್ನಲಾಗಿದೆ. ಈ ಹೆಲಿಕಾಪ್ಟರ್ ಅನ್ನು ಹಿರಿಯ ಕ್ಯಾಪ್ಟನ್ ಅರುಣ್ ಮಲ್ಲಾ ಅವರು ಪೈಲಟ್ ಮಾಡುತ್ತಿದ್ದರು.

ಹೆಲಿಕಾಪ್ಟರ್ ಟೇಕಾಫ್ ಆಗುವಾಗ ಅದರಲ್ಲಿ ನಾಲ್ವರು ಚೀನಾದ ಪ್ರಜೆಗಳು ಮತ್ತು ಪೈಲಟ್ ಸೇರಿದಂತೆ ಒಟ್ಟು 5 ಮಂದಿ ಇದ್ದರು. ಚೀನಾದ ಪ್ರಜೆಗಳು ರಾಸುವಾಗೆ ತೆರಳುತ್ತಿದ್ದರು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ರಾಸುವಾಗೆ ಹಾರುತ್ತಿದ್ದ ನಾಲ್ಕು ಚೀನೀ ಪ್ರಜೆಗಳು ಸೇರಿದಂತೆ ಐದು ವ್ಯಕ್ತಿಗಳು ರಾಸುವಾಗೆ ಹೋಗುವ ಹೆಲಿಕಾಪ್ಟರ್‌ನಲ್ಲಿದ್ದರು.

ಇದನ್ನೂ ಓದಿ: Kolkata Airport: ಭಾರೀ ಮಳೆಗೆ ಕೊಲ್ಕತ್ತಾ ವಿಮಾನ ನಿಲ್ದಾಣದ ರನ್‌ವೇ ಜಲಾವೃತ

ಜುಲೈ 24ರಂದು ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ಪತನಗೊಂಡು 18 ಜನರು ಸಾವನ್ನಪ್ಪಿದ ಬೆನ್ನಲ್ಲೇ ಈ ದುರಂತ ಸಂಭವಿಸಿದೆ. ಕಳಪೆ ನಿರ್ವಹಣೆಯಿಂದಾಗಿ ನೇಪಾಳದಲ್ಲಿ ವಿಮಾನ ಅಪಘಾತಗಳು ಹೆಚ್ಚು ಸಾಮಾನ್ಯವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:34 pm, Wed, 7 August 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!