AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Earthquake: ನೇಪಾಳದಲ್ಲಿ ಅವಳಿ ಭೂಕಂಪ: ಹಿಮಾಲಯದಲ್ಲಿ ಕಂಪನದ ಅನುಭವ

ಭಾರತದ ನೆರೆ ರಾಷ್ಟ್ರ ನೇಪಾಳ(Nepal)ದಲ್ಲಿ ಅವಳಿ ಭೂಕಂಪ(Earthquake) ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.8 ಹಾಗೂ 5.9 ತೀವ್ರತೆ ದಾಖಲಾಗಿದೆ.

Nepal Earthquake: ನೇಪಾಳದಲ್ಲಿ ಅವಳಿ ಭೂಕಂಪ: ಹಿಮಾಲಯದಲ್ಲಿ ಕಂಪನದ ಅನುಭವ
ಭೂಕಂಪ
Follow us
ನಯನಾ ರಾಜೀವ್
|

Updated on:Apr 28, 2023 | 9:30 AM

ಭಾರತದ ನೆರೆ ರಾಷ್ಟ್ರ ನೇಪಾಳ(Nepal)ದಲ್ಲಿ ಅವಳಿ ಭೂಕಂಪ(Earthquake) ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.8 ಹಾಗೂ 5.9 ತೀವ್ರತೆ ದಾಖಲಾಗಿದೆ. ನೇಪಾಳ ರಾಜಧಾನಿ ಕಠ್ಮಂಡುವಿನ ವಾಯುವ್ಯದಲ್ಲಿ 800 ಕಿಮೀ ದೂರದಲ್ಲಿ ಇರುವ ಬಜೂರಾ ಜಿಲ್ಲೆಯ ದಹಾಕೋಟ್‌ದಲ್ಲಿ ಭೂಕಂಪನದ ಕೇಂದ್ರಬಿಂದು ದಾಖಲಾಗಿದೆ. ಮೊದಲ ಭೂಕಂಪವು ರಾತ್ರಿ 11.58ಕ್ಕೆ ಅಪ್ಪಳಿಸಿತ್ತು, ಮತ್ತೊಂದು ಮಧ್ಯರಾತ್ರಿ 1.30ರ ವೇಳೆಗೆ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಬಜೂರಾದ ಜಿಲ್ಲಾ ಪೊಲೀಸ್ ಕಚೇರಿ ಪ್ರಕಾರ, ಭೂಕಂಪನದ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ಭೂಮಿ ನಡುಗಿದ್ದು, ಸ್ಥಳೀಯರು ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಪಶ್ಚಿಮ ನೇಪಾಳದಲ್ಲಿನ ಬಜೂರಾ ನೆರೆಹೊರೆಯ ಜಿಲ್ಲೆಗಳಲ್ಲೂ ಭೂಮಿ ನಡುಗಿದ ಅನುಭವ ಜನರಿಗೆ ಆಗಿದೆ. ನಾವು ಭೂಕಂಪದ ಪರಿಣಾಮವನ್ನು ಖಚಿತಪಡಿಸುತ್ತಿದ್ದೇವೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮತ್ತಷ್ಟು ಓದಿ: Fiji Earthquake: ಫಿಜಿಯಲ್ಲಿ ಕಂಪಿಸಿದ ಭೂಮಿ: 6.3 ತೀವ್ರತೆ ದಾಖಲು

2015ರಲ್ಲಿ ವಿನಾಶಕಾರಿ ಅವಳಿ ಭೂಕಂಪ ಭೂಕಂಪ ಸೂಕ್ಷ್ಮ ಪ್ರದೇಶವೆಂದು ನೇಪಾಳವನ್ನು ಗುರುತಿಸಲಾಗಿದೆ. ಏಪ್ರಿಲ್ 2015ರಲ್ಲಿ ನೇಪಾಳದಲ್ಲಿ ಇದೇ ರೀತಿ 7.8 ಮತ್ತು 8.1 ತೀವ್ರತೆಯ ಅವಳಿ ಭೂಕಂಪಗಳು ಸಂಭವಿಸಿದ್ದವು. ದಶಕಗಳಲ್ಲಿಯೇ ಅತ್ಯಂತ ವಿನಾಶಕಾರಿ ದುರಂತವಾಗಿದ್ದ ಅದರಲ್ಲಿ 8,964 ಜನರು ಸಾವನ್ನಪ್ಪಿದ್ದರೆ, 21,952 ಜನರು ಗಾಯಗೊಂಡಿದ್ದರು. ಪ್ರಬಲ ಭೂಕಂಪಗಳಿಂದ ನೇಪಾಳದ ಹಲವು ಜಿಲ್ಲೆಗಳಲ್ಲಿ ಸಾವಿರಾರು ಮನೆಗಳು ನೆಲಸಮವಾಗಿದ್ದವು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:30 am, Fri, 28 April 23

ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು