AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಾಸ ಮತ ಕಳೆದುಕೊಂಡ ನೇಪಾಳ ಪ್ರಧಾನಿ ಪ್ರಚಂಡ ರಾಜೀನಾಮೆ; ಕೆಪಿ ಶರ್ಮಾ ಓಲಿ ಮುಂದಿನ ಪಿಎಂ

ನೇಪಾಳದ ಪ್ರಧಾನಮಂತ್ರಿ ಪ್ರಚಂಡ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಮಾಜಿ ಪ್ರಧಾನಿಗಳಾದ ಕೆ.ಪಿ ಶರ್ಮಾ ಓಲಿ ಮತ್ತು ಶೇರ್ ಬಹದ್ದೂರ್ ದೇವುಬಾ ಜುಲೈ 1ರಂದು ಮಧ್ಯರಾತ್ರಿ ಸಮ್ಮಿಶ್ರ ಒಪ್ಪಂದವನ್ನು ಮಾಡಿಕೊಂಡರು. ಆದರೆ, ಪ್ರಚಂಡ ರಾಜೀನಾಮೆ ನೀಡಲು ನಿರಾಕರಿಸಿದರು. ಅವರ ಸಿಪಿಎನ್-ಮಾವೋವಾದಿ ಬಹುಮತಕ್ಕೆ ಅಗತ್ಯವಿರುವ ಸಂಖ್ಯೆಯನ್ನು ಹೊಂದಿಲ್ಲದ ಕಾರಣ ಮತ್ತೊಂದು ವಿಶ್ವಾಸ ಮತಕ್ಕೆ ಕರೆ ನೀಡಿದ್ದರು.

ವಿಶ್ವಾಸ ಮತ ಕಳೆದುಕೊಂಡ ನೇಪಾಳ ಪ್ರಧಾನಿ ಪ್ರಚಂಡ ರಾಜೀನಾಮೆ; ಕೆಪಿ ಶರ್ಮಾ ಓಲಿ ಮುಂದಿನ ಪಿಎಂ
ಪ್ರಚಂಡ
ಸುಷ್ಮಾ ಚಕ್ರೆ
|

Updated on: Jul 12, 2024 | 9:01 PM

Share

ಕಠ್ಮಂಡು: ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ ‘ಪ್ರಚಂಡ’ ಅವರು ಇಂದು (ಶುಕ್ರವಾರ) ಸಂಸತ್ತಿನಲ್ಲಿ ತಮ್ಮ ವಿಶ್ವಾಸ ಮತವನ್ನು ಕಳೆದುಕೊಂಡಿದ್ದಾರೆ. ಇದು ಮುಂದಿನ ಪ್ರಧಾನಿಯಾಗಿ ಅಧಿಕಾರಕ್ಕೆ ಮರಳಲು ಕಮ್ಯುನಿಸ್ಟ್ ಪ್ರತಿಸ್ಪರ್ಧಿ ಕೆ.ಪಿ ಶರ್ಮಾ ಓಲಿ ಅವರಿಗೆ ದಾರಿ ಮಾಡಿಕೊಟ್ಟಿತು. ಹೀಗಾಗಿ, ಪ್ರಧಾನಿ ಸ್ಥಾನಕ್ಕೆ ಪ್ರಚಂಡ ಅವರು ರಾಜೀನಾಮೆ ನೀಡಿದ್ದಾರೆ. ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ-ಯುನಿಫೈಡ್ ಮಾರ್ಕ್ಸ್‌ಸ್ಟ್ ಲೆನಿನಿಸ್ಟ್ (CPN-UML) ತನ್ನ ಸರ್ಕಾರಕ್ಕೆ ತನ್ನ ಬೆಂಬಲವನ್ನು ಹಿಂತೆಗೆದುಕೊಂಡ ನಂತರ ಮತ್ತು ನೇಪಾಳಿ ಕಾಂಗ್ರೆಸ್‌ನೊಂದಿಗೆ ತಡರಾತ್ರಿಯ ಸಮ್ಮಿಶ್ರ ಒಪ್ಪಂದವನ್ನು ಮಾಡಿಕೊಂಡ ನಂತರ ಪ್ರಚಂಡ ಅವರು ಐದನೇ ವಿಶ್ವಾಸ ಮತಕ್ಕೆ ಕರೆ ನೀಡಿದರು. ಅದರಲ್ಲಿ ಪ್ರಚಂಡ ಅವರಿಗೆ ಬಹುಮತ ಲಭ್ಯವಾಗಿಲ್ಲ.

275 ಸದಸ್ಯರ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ (HOR) ನಲ್ಲಿ 69 ವರ್ಷದ ಪ್ರಚಂಡ 63 ಮತಗಳನ್ನು ಪಡೆದರು. ಈ ನಿರ್ಣಯದ ವಿರುದ್ಧ 194 ಮತಗಳು ಬಿದ್ದವು. ವಿಶ್ವಾಸಮತ ಗೆಲ್ಲಲು ಕನಿಷ್ಠ 138 ಮತಗಳ ಅಗತ್ಯವಿದೆ. ಪ್ರಚಂಡ ಅವರು ಡಿಸೆಂಬರ್ 25, 2022ರಂದು ಅಧಿಕಾರ ವಹಿಸಿಕೊಂಡಾಗಿನಿಂದ 4 ವಿಶ್ವಾಸ ಮತಗಳನ್ನು ಉಳಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ನ ಕರಾಳ ಘಟ್ಟ; ಸಂವಿಧಾನ ಹತ್ಯಾ ದಿನದ ಕುರಿತು ಪಿಎಂ ಮೋದಿ ಪ್ರತಿಕ್ರಿಯೆ

ದಹಾಲ್‌ನ ಸಿಪಿಎನ್-ಮಾವೋವಾದಿ ಕೇಂದ್ರವು ಸಂಸತ್ತಿನಲ್ಲಿ ಕೇವಲ 32 ಸದಸ್ಯರನ್ನು ಹೊಂದಿದೆ. ನೇಪಾಳಿ ಕಾಂಗ್ರೆಸ್ 89 ಸ್ಥಾನಗಳನ್ನು ಹೊಂದಿದ್ದರೆ, ಸಿಪಿಎನ್-ಯುಎಂಎಲ್ 78 ಸ್ಥಾನಗಳನ್ನು ಹೊಂದಿದೆ. ಅವರ ಒಟ್ಟು 167 ಬಲವು ಕೆಳಮನೆಯಲ್ಲಿ ಬಹುಮತಕ್ಕೆ ಅಗತ್ಯವಿರುವ 138ಕ್ಕಿಂತ ಹೆಚ್ಚು. NC ಅಧ್ಯಕ್ಷ ಶೇರ್ ಬಹದ್ದೂರ್ ದೇವುಬಾ ಈಗಾಗಲೇ ನೇಪಾಳದ ಮುಂದಿನ ಪ್ರಧಾನಿಯಾಗಿ ಓಲಿಯನ್ನು ಅನುಮೋದಿಸಿದ್ದಾರೆ.

ಇದನ್ನೂ ಓದಿ: ಸಂಸತ್​ನಲ್ಲಿ ವಿಶ್ವಾಸ ಮತ ಕಳೆದುಕೊಂಡ ನೇಪಾಳ ಪ್ರಧಾನಿ ಪ್ರಚಂಡ

ಸಂಸತ್ತಿನ ಪ್ರಮುಖ ಪಕ್ಷಗಳಾದ ನೇಪಾಳಿ ಕಾಂಗ್ರೆಸ್, ಸಿಪಿಎನ್-ಯುಎಂಎಲ್ ಮತ್ತು ಜನತಾ ಸಮಾಜವಾದಿ ಪಕ್ಷಗಳು ಇಂದು ಮಂಡನೆಯಾಗಲಿರುವ ವಿಶ್ವಾಸ ನಿರ್ಣಯದ ವಿರುದ್ಧ ನಿಲ್ಲುವಂತೆ ತನ್ನ ಶಾಸಕರಿಗೆ ವಿಪ್ ನೀಡಿವೆ. ಓಲಿ ನೇತೃತ್ವದ CPN-UML ನೇಪಾಳಿ ಕಾಂಗ್ರೆಸ್‌ನೊಂದಿಗೆ ಅಧಿಕಾರ ಹಂಚಿಕೆ ಒಪ್ಪಂದವನ್ನು ಮಾಡಿಕೊಂಡ ನಂತರ ಕಳೆದ ವಾರ ಪ್ರಚಂಡ ನೇತೃತ್ವದ ಸರ್ಕಾರದಿಂದ ಬೆಂಬಲವನ್ನು ಹಿಂತೆಗೆದುಕೊಂಡಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು