AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಾಸ ಮತ ಕಳೆದುಕೊಂಡ ನೇಪಾಳ ಪ್ರಧಾನಿ ಪ್ರಚಂಡ ರಾಜೀನಾಮೆ; ಕೆಪಿ ಶರ್ಮಾ ಓಲಿ ಮುಂದಿನ ಪಿಎಂ

ನೇಪಾಳದ ಪ್ರಧಾನಮಂತ್ರಿ ಪ್ರಚಂಡ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಮಾಜಿ ಪ್ರಧಾನಿಗಳಾದ ಕೆ.ಪಿ ಶರ್ಮಾ ಓಲಿ ಮತ್ತು ಶೇರ್ ಬಹದ್ದೂರ್ ದೇವುಬಾ ಜುಲೈ 1ರಂದು ಮಧ್ಯರಾತ್ರಿ ಸಮ್ಮಿಶ್ರ ಒಪ್ಪಂದವನ್ನು ಮಾಡಿಕೊಂಡರು. ಆದರೆ, ಪ್ರಚಂಡ ರಾಜೀನಾಮೆ ನೀಡಲು ನಿರಾಕರಿಸಿದರು. ಅವರ ಸಿಪಿಎನ್-ಮಾವೋವಾದಿ ಬಹುಮತಕ್ಕೆ ಅಗತ್ಯವಿರುವ ಸಂಖ್ಯೆಯನ್ನು ಹೊಂದಿಲ್ಲದ ಕಾರಣ ಮತ್ತೊಂದು ವಿಶ್ವಾಸ ಮತಕ್ಕೆ ಕರೆ ನೀಡಿದ್ದರು.

ವಿಶ್ವಾಸ ಮತ ಕಳೆದುಕೊಂಡ ನೇಪಾಳ ಪ್ರಧಾನಿ ಪ್ರಚಂಡ ರಾಜೀನಾಮೆ; ಕೆಪಿ ಶರ್ಮಾ ಓಲಿ ಮುಂದಿನ ಪಿಎಂ
ಪ್ರಚಂಡ
ಸುಷ್ಮಾ ಚಕ್ರೆ
|

Updated on: Jul 12, 2024 | 9:01 PM

Share

ಕಠ್ಮಂಡು: ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ ‘ಪ್ರಚಂಡ’ ಅವರು ಇಂದು (ಶುಕ್ರವಾರ) ಸಂಸತ್ತಿನಲ್ಲಿ ತಮ್ಮ ವಿಶ್ವಾಸ ಮತವನ್ನು ಕಳೆದುಕೊಂಡಿದ್ದಾರೆ. ಇದು ಮುಂದಿನ ಪ್ರಧಾನಿಯಾಗಿ ಅಧಿಕಾರಕ್ಕೆ ಮರಳಲು ಕಮ್ಯುನಿಸ್ಟ್ ಪ್ರತಿಸ್ಪರ್ಧಿ ಕೆ.ಪಿ ಶರ್ಮಾ ಓಲಿ ಅವರಿಗೆ ದಾರಿ ಮಾಡಿಕೊಟ್ಟಿತು. ಹೀಗಾಗಿ, ಪ್ರಧಾನಿ ಸ್ಥಾನಕ್ಕೆ ಪ್ರಚಂಡ ಅವರು ರಾಜೀನಾಮೆ ನೀಡಿದ್ದಾರೆ. ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ-ಯುನಿಫೈಡ್ ಮಾರ್ಕ್ಸ್‌ಸ್ಟ್ ಲೆನಿನಿಸ್ಟ್ (CPN-UML) ತನ್ನ ಸರ್ಕಾರಕ್ಕೆ ತನ್ನ ಬೆಂಬಲವನ್ನು ಹಿಂತೆಗೆದುಕೊಂಡ ನಂತರ ಮತ್ತು ನೇಪಾಳಿ ಕಾಂಗ್ರೆಸ್‌ನೊಂದಿಗೆ ತಡರಾತ್ರಿಯ ಸಮ್ಮಿಶ್ರ ಒಪ್ಪಂದವನ್ನು ಮಾಡಿಕೊಂಡ ನಂತರ ಪ್ರಚಂಡ ಅವರು ಐದನೇ ವಿಶ್ವಾಸ ಮತಕ್ಕೆ ಕರೆ ನೀಡಿದರು. ಅದರಲ್ಲಿ ಪ್ರಚಂಡ ಅವರಿಗೆ ಬಹುಮತ ಲಭ್ಯವಾಗಿಲ್ಲ.

275 ಸದಸ್ಯರ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ (HOR) ನಲ್ಲಿ 69 ವರ್ಷದ ಪ್ರಚಂಡ 63 ಮತಗಳನ್ನು ಪಡೆದರು. ಈ ನಿರ್ಣಯದ ವಿರುದ್ಧ 194 ಮತಗಳು ಬಿದ್ದವು. ವಿಶ್ವಾಸಮತ ಗೆಲ್ಲಲು ಕನಿಷ್ಠ 138 ಮತಗಳ ಅಗತ್ಯವಿದೆ. ಪ್ರಚಂಡ ಅವರು ಡಿಸೆಂಬರ್ 25, 2022ರಂದು ಅಧಿಕಾರ ವಹಿಸಿಕೊಂಡಾಗಿನಿಂದ 4 ವಿಶ್ವಾಸ ಮತಗಳನ್ನು ಉಳಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ನ ಕರಾಳ ಘಟ್ಟ; ಸಂವಿಧಾನ ಹತ್ಯಾ ದಿನದ ಕುರಿತು ಪಿಎಂ ಮೋದಿ ಪ್ರತಿಕ್ರಿಯೆ

ದಹಾಲ್‌ನ ಸಿಪಿಎನ್-ಮಾವೋವಾದಿ ಕೇಂದ್ರವು ಸಂಸತ್ತಿನಲ್ಲಿ ಕೇವಲ 32 ಸದಸ್ಯರನ್ನು ಹೊಂದಿದೆ. ನೇಪಾಳಿ ಕಾಂಗ್ರೆಸ್ 89 ಸ್ಥಾನಗಳನ್ನು ಹೊಂದಿದ್ದರೆ, ಸಿಪಿಎನ್-ಯುಎಂಎಲ್ 78 ಸ್ಥಾನಗಳನ್ನು ಹೊಂದಿದೆ. ಅವರ ಒಟ್ಟು 167 ಬಲವು ಕೆಳಮನೆಯಲ್ಲಿ ಬಹುಮತಕ್ಕೆ ಅಗತ್ಯವಿರುವ 138ಕ್ಕಿಂತ ಹೆಚ್ಚು. NC ಅಧ್ಯಕ್ಷ ಶೇರ್ ಬಹದ್ದೂರ್ ದೇವುಬಾ ಈಗಾಗಲೇ ನೇಪಾಳದ ಮುಂದಿನ ಪ್ರಧಾನಿಯಾಗಿ ಓಲಿಯನ್ನು ಅನುಮೋದಿಸಿದ್ದಾರೆ.

ಇದನ್ನೂ ಓದಿ: ಸಂಸತ್​ನಲ್ಲಿ ವಿಶ್ವಾಸ ಮತ ಕಳೆದುಕೊಂಡ ನೇಪಾಳ ಪ್ರಧಾನಿ ಪ್ರಚಂಡ

ಸಂಸತ್ತಿನ ಪ್ರಮುಖ ಪಕ್ಷಗಳಾದ ನೇಪಾಳಿ ಕಾಂಗ್ರೆಸ್, ಸಿಪಿಎನ್-ಯುಎಂಎಲ್ ಮತ್ತು ಜನತಾ ಸಮಾಜವಾದಿ ಪಕ್ಷಗಳು ಇಂದು ಮಂಡನೆಯಾಗಲಿರುವ ವಿಶ್ವಾಸ ನಿರ್ಣಯದ ವಿರುದ್ಧ ನಿಲ್ಲುವಂತೆ ತನ್ನ ಶಾಸಕರಿಗೆ ವಿಪ್ ನೀಡಿವೆ. ಓಲಿ ನೇತೃತ್ವದ CPN-UML ನೇಪಾಳಿ ಕಾಂಗ್ರೆಸ್‌ನೊಂದಿಗೆ ಅಧಿಕಾರ ಹಂಚಿಕೆ ಒಪ್ಪಂದವನ್ನು ಮಾಡಿಕೊಂಡ ನಂತರ ಕಳೆದ ವಾರ ಪ್ರಚಂಡ ನೇತೃತ್ವದ ಸರ್ಕಾರದಿಂದ ಬೆಂಬಲವನ್ನು ಹಿಂತೆಗೆದುಕೊಂಡಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್