AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳದಲ್ಲಿ ಹಠಾತ್ ರಾಜಕೀಯ ಬೆಳವಣಿಗೆ: ಸಂಸತ್ತು ವಿಸರ್ಜಿಸಿ ಚುನಾವಣೆ ಘೋಷಿಸಿದ ರಾಷ್ಟ್ರಪತಿ

ನೇಪಾಳ ರಾಜಕೀಯದಲ್ಲಿ ನಡೆದ ಹಠಾತ್ ಬೆಳವಣಿಗೆಯಲ್ಲಿ ರಾಷ್ಟ್ರಪತಿ ಬಿದ್ಯಾ ದೇವಿ ಭಂಡಾರಿ ಸಂಸತ್ತು ವಿಸರ್ಜಿಸಿದ್ದಾರೆ. ಇಂದು ಬೆಳಿಗ್ಗೆ ಸಂಪುಟ ಸಭೆ ಕರೆದಿದ್ದ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಸಂಸತ್ ವಿಸರ್ಜಿಸುವಂತೆ ರಾಷ್ಟ್ರಪತಿ ಬಿದ್ಯಾ ದೇವಿ ಭಂಡಾರಿಯವರಿಗೆ ಶಿಫಾರಸು ಮಾಡಿದ್ದರು.

ನೇಪಾಳದಲ್ಲಿ ಹಠಾತ್ ರಾಜಕೀಯ ಬೆಳವಣಿಗೆ: ಸಂಸತ್ತು ವಿಸರ್ಜಿಸಿ ಚುನಾವಣೆ ಘೋಷಿಸಿದ ರಾಷ್ಟ್ರಪತಿ
ಕೆ.ಪಿ.ಶರ್ಮಾ ಓಲಿ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 20, 2020 | 4:58 PM

ಕಠ್ಮಂಡು: ನೇಪಾಳ ರಾಜಕೀಯದಲ್ಲಿ ನಡೆದ ಹಠಾತ್ ಬೆಳವಣಿಗೆಯಲ್ಲಿ ರಾಷ್ಟ್ರಪತಿ ಬಿದ್ಯಾ ದೇವಿ ಭಂಡಾರಿ ನೇಪಾಳದ ಸಂಸತ್​ನ್ನು ವಿಸರ್ಜಿಸಿದ್ದಾರೆ. ಇಂದು ಬೆಳಿಗ್ಗೆ ಸಚಿವ ಸಂಪುಟ ಸಭೆ ಕರೆದಿದ್ದ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಸಂಸತ್​ ರದ್ದುಗೊಳಿಸುವ ನಿರ್ಣಯ ಕೈಗೊಂಡು, ರಾಷ್ಟ್ರಪತಿ ಬಿದ್ಯಾ ದೇವಿ ಭಂಡಾರಿಯವರಿಗೆ ಈ ಕುರಿತು ಶಿಫಾರಸು ಮಾಡಿದ್ದರು.

ಪ್ರಧಾನಿ ಕೆ.ಪಿ.ಶರ್ಮಾ ಓಲಿ ಅವರ ನಿರ್ಣಯವನ್ನು ನೇಪಾಳದ ಪ್ರತಿಪಕ್ಷಗಳು ವಿರೋಧಿಸಿವೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ಆಡಳಿತಾರೂಢ ನೇಪಾಳ ಕಮ್ಯುನಿಸ್ಟ್ ಪಕ್ಷದ ಮೇಲೆ ವಿಪಕ್ಷಗಳು ಹರಿಹಾಯ್ದಿವೆ. ಏಕಾಏಕಿ ಸಂಸತ್ ರದ್ದುಗೊಳಿಸುವ ತುರ್ತು ನಿರ್ಣಯದ ಕುರಿತು ಪ್ರಬಲ ಅಸಮಾಧಾನ ವ್ಯಕ್ತಪಡಿಸಿವೆ.

ಸಂಸತ್ ರದ್ದು, ಮುಂದೇನು? ರಾಷ್ಟ್ರಪತಿ ಬಿದ್ಯಾ ದೇವಿ ಭಂಡಾರಿಯವರು ಈಗಾಗಲೇ ಸಂಸತ್​ನ್ನು ರದ್ಧುಗೊಳಿಸುವುದರಿಂದ ನೇಪಾಳ ಸಾರ್ವತ್ರಿಕ ಚುನಾವಣೆ ಎದುರಿಸಲಿದೆ. 2021ರ ಎಪ್ರಿಲ್ 30ರಿಂದ ಮೇ10ರೊಳಗಾಗಿ ಚುನಾವಣೆ ನಡೆಸುವಂತೆ ರಾಷ್ಟ್ರಪತಿ ತಿಳಿಸಿದ್ದಾರೆ. ಸಂಸತ್​ನಲ್ಲಿ ಕೆ.ಪಿ.ಶರ್ಮಾ ಓಲಿ ಅವರಿಗೆ ಬಹುಮತ ಪಡೆಯುವ ವಿಶ್ವಾಸವಿರಲಿಲ್ಲ ಎಂದು ನೇಪಾಳದ ದಿನಪತ್ರಿಕೆಯೊಂದು ವರದಿ ಮಾಡಿದೆ.

ಪ್ರಧಾನಿ ಕೆ.ಪಿ.ಶರ್ಮಾ ಪಕ್ಷದೊಳಗಿನ ಶೀತಲ ಸಮರದಿಂದ ಒತ್ತಡಕ್ಕೆ ಸಿಲುಕಿದ್ದರು. ಕಳೆದ ಮಂಗಳವಾರ ಹೊರಡಿಸಿದ್ದ ಕಾನ್​ಸ್ಟಿಟ್ಯೂಷನಲ್ ಕೌನ್ಸಿಲ್ ಆಕ್ಟ್ ಸುಗ್ರೀವಾಜ್ಞೆಯನ್ನು ರದ್ದುಗೊಳಿಸುವಂತೆ ನೇಪಾಳ ಕಮ್ಯುನಿಸ್ಟ್ ಪಕ್ಷದ ಕೆಲ ಪ್ರಮುಖ ನಾಯಕರೇ ಒತ್ತಡ ಹಾಕಿದ್ದರು. ಕಾರ್ಯಾಂಗ ಮತ್ತು ನ್ಯಾಯಾಂಗದಲ್ಲಿ ನೇಪಾಳದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗ ನೇಮಕಾತಿಯಲ್ಲಿ ಈ ಕಾಯ್ದೆ ಮಹತ್ವದ ಬದಲಾವಣೆಗಳನ್ನು ತರುವ ಉದ್ದೇಶ ಹೊಂದಿತ್ತು.

ಕೆ.ಪಿ.ಶರ್ಮಾ ಈ ಅಧಿಸೂಚನೆಯನ್ನು ಹೊರಡಿಸಿದ ಒಂದು ಗಂಟೆಯೊಳಗೆ ರಾಷ್ಟ್ರಪತಿ ಬಿದ್ಯಾ ದೇವಿ ಭಂಡಾರಿ ಅವರ ಸಹಿಯೂ ದೊರೆತಿತ್ತು. ಆದರೆ ಸಂಸತ್​ನಲ್ಲಿ ಹೊಸ ಕಾಯ್ದೆಯು ಅಂಗೀಕಾರವಾಗುವ ಸಾಧ್ಯತೆ ಕ್ಷೀಣವಾಗಿತ್ತು. ಮಾಜಿ ಪ್ರಧಾನಿಗಳಾದ ಪ್ರಚಂಡ, ಪುಷ್ಪಾ ಕಮಲ್ ದಹಲ್ ಮತ್ತು ಮಾಧವ್ ನೇಪಾಳ್ ಅವರ ತೀವ್ರ ವಿರೋಧದ ಸುಳಿಯಲ್ಲೂ ಕೆ.ಪಿ.ಶರ್ಮಾ ಸಿಲುಕಿದ್ದರು.

ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು