AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಾಸಮತ ಕಳೆದುಕೊಂಡ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ

K P Sharma Oli: ಒಲಿ ಅವರು ತಮ್ಮ ರಾಜೀನಾಮೆಯನ್ನು ಅಧ್ಯಕ್ಷ ಬಿಧ್ಯಾ ದೇವಿ ಭಂಡಾರಿ ಅವರಿಗೆ ಸಲ್ಲಿಸಲಿದ್ದು, ಒಂದು ವಾರದೊಳಗೆ ಹೊಸ ಸರ್ಕಾರ ರಚನೆಯ ಬಗ್ಗೆ ಪರಿಶೋಧಿಸಲು ಸಂಸತ್ತನ್ನು ಕೇಳಲಿದ್ದಾರೆ.

ವಿಶ್ವಾಸಮತ ಕಳೆದುಕೊಂಡ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ
ಕೆ.ಪಿ.ಶರ್ಮಾ ಒಲಿ
ರಶ್ಮಿ ಕಲ್ಲಕಟ್ಟ
|

Updated on: May 10, 2021 | 7:28 PM

Share

ಕಠ್ಮಂಡು: ರಾಜಕೀಯ ಬಿಕ್ಕಟ್ಟು ಎದುರಿಸುತ್ತಿರುವ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರು ಸಂಸತ್‌ನಲ್ಲಿ ಸೋಮವಾರ ವಿಶ್ವಾಸಮತ ಕಳೆದುಕೊಂಡಿದ್ದಾರೆ. ಒಲಿ ಅವರ ಪರ 93 ಮತಗಳು ಲಭಿಸಿದ್ದು 124 ಮತಗಳು ವಿರೋಧದ್ದಾಗಿದೆ. 271 ಸದಸ್ಯರಿರುವ ಸದನದಲ್ಲಿ ಕೇವಲ 232 ಸದಸ್ಯರು ಇದ್ದರು. ಸೆಪ್ಟೆಂಬರ್ 2015 ರಲ್ಲಿ ಘೋಷಿಸಿದ ಹೊಸ ಸಂವಿಧಾನದಡಿಯಲ್ಲಿ ಚುನಾಯಿತರಾದ ಮೊದಲ ಸರ್ಕಾರವು ಯಶಸ್ವಿಯಾಗಿ ಕೋರಿದ ಮೊದಲ ವಿಶ್ವಾಸ ಮತ ಇದಾಗಿದೆ. ಒಲಿ ಸರ್ಕಾರ ಸಂಸತ್ ನಲ್ಲಿ ಸೋಲು ಅನುಭವಿಸಿದ್ದು 38 ತಿಂಗಳುಳ ಆಡಳಿತದಿಂದ ಅವರು ನಿರ್ಗಮಿಸಿದ್ದಾರೆ.

ಆಡಳಿತ ಪಕ್ಷದ ಭಿನ್ನಮತೀಯ ಸದಸ್ಯರು ಪಕ್ಷದ ವಿಪ್ ಧಿಕ್ಕರಿಸಿ ಮತದಾನದಿಂದ ದೂರವಿದ್ದು, ಇದರಿಂದಾಗಿ ಅವರು ಸದನದ ಸದಸ್ಯತ್ವವನ್ನು ಕಳೆದುಕೊಳ್ಳಬಹುದು.

ಒಲಿ ಅವರು ತಮ್ಮ ರಾಜೀನಾಮೆಯನ್ನು ಅಧ್ಯಕ್ಷ ಬಿಧ್ಯಾ ದೇವಿ ಭಂಡಾರಿ ಅವರಿಗೆ ಸಲ್ಲಿಸಲಿದ್ದು, ಒಂದು ವಾರದೊಳಗೆ ಹೊಸ ಸರ್ಕಾರ ರಚನೆಯ ಬಗ್ಗೆ ಪರಿಶೋಧಿಸಲು ಸಂಸತ್ತನ್ನು ಕೇಳಲಿದ್ದಾರೆ.  ವಿಶ್ವಾಸಮತಕ್ಕೆ ಮುನ್ನ ಸದನದಲ್ಲಿ ಮಾತನಾಡಿದ ಒಲಿ ದೇಶದ ಅಭಿವೃದ್ಧಿ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ದಣಿವರಿಯಿಲ್ಲದೆ ಕೆಲಸ ಮಾಡಿದ ಸರ್ಕಾರವನ್ನು ‘ಸಂಕುಚಿತ ಮತ್ತು ಪಕ್ಷಪಾತದ’ ಹಿತಾಸಕ್ತಿಗಳಿಗೆ ಗುರಿಯಾಗಿಸಲಾಗುತ್ತಿರುವುದು ದುರದೃಷ್ಟಕರ ಎಂದು ಹೇಳಿದರು. ಯಾರೊಬ್ಬರ ವಿರುದ್ಧವೂ ಸುಳ್ಳು ಆರೋಪ ಹೊರಿಸಬೇಡಿ ಎಂದು ಅವರು ಪ್ರತಿಪಕ್ಷಗಳಿಗೆ ಕೇಳಿದರು.

ದೇಶದಲ್ಲಿ ಕೊವಿಡ್ ಪ್ರಕರಣಗಳು ಮತ್ತು ಸಾವುನೋವುಗಳ ಹೆಚ್ಚಳಕ್ಕೆ ಕಾರಣವಾದ ಕೊರೊನಾವೈರಸ್ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಒಲಿ ವಿಫಲರಾಗಿದ್ದಾರೆ ಎಂದು ಪ್ರತಿಪಕ್ಷದ ಪ್ರಮುಖ ನಾಯಕರಾದ ಶೇರ್ ಬಹದ್ದೂರ್ ಡಿಯುಬಾ (ನೇಪಾಳಿ ಕಾಂಗ್ರೆಸ್) ಮತ್ತು ಪುಷ್ಪಾ ಕಮಲ್ ದಹಲ್ ಪ್ರಚಂಡ (ಮಾವೋವಾದಿಗಳು) ದೂಷಿದ್ದಾರೆ. ಭ್ರಷ್ಟಾಚಾರ ಮತ್ತು ‘ಹಗರಣಗಳು’ ಭಾರತದಿಂದ ಲಸಿಕೆಗಳನ್ನು ಸಕಾಲಿಕವಾಗಿ ವಿತರಿಸುವುದನ್ನು ನಿರ್ಬಂಧಿಸಿವೆ ಎಂದು ಆರೋಪಿಸಿ ಅವರು ಕೊವಿಡ್ -19 ಸಂತ್ರಸ್ತರ ಜೀವನದೊಂದಿಗೆ ಆಟವಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Yash: ನೇಪಾಳದಲ್ಲೂ ಯಶ್​ ಹವಾ! ದೇಶ-ಭಾಷೆ ಮೀರಿದ ಅಭಿಮಾನಕ್ಕೆ ಇಲ್ಲಿದೆ ಲೇಟೆಸ್ಟ್​​ ಉದಾಹರಣೆ

(Nepal Prime Minister K P Sharma Oli loses vote of confidence in Parliament)

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ