AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಮಕ

ನೇಪಾಳದ ಪ್ರತಿಭಟನೆಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಧ್ಯಂತರ ಸರ್ಕಾರದ ನೇತೃತ್ವ ವಹಿಸಲು ಜನರಲ್-ಝಡ್ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ನೇಮಕ ಮಾಡಿದೆ. ನೇಪಾಳ ಸೇನಾ ನಿಯಂತ್ರಣದಲ್ಲಿಯೇ ಇರುವುದರಿಂದ ಮಧ್ಯಂತರ ಸರ್ಕಾರದ ನೇತೃತ್ವ ವಹಿಸಲು ಸುಶೀಲಾ ಕರ್ಕಿ ಅವರನ್ನು ಮಧ್ಯಂತರ ಸರ್ಕಾರದ ನಾಯಕಿಯನ್ನಾಗಿ ನೇಮಿಸಲಾಗಿದೆ.

ನೇಪಾಳದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಮಕ
Sushila Karki
ಸುಷ್ಮಾ ಚಕ್ರೆ
|

Updated on:Sep 10, 2025 | 6:56 PM

Share

ಕಠ್ಮಂಡು, ಸೆಪ್ಟೆಂಬರ್ 10: ನೇಪಾಳದಲ್ಲಿ (Nepal Protest) ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿ ನೇಪಾಳದ ಪ್ರಧಾನಿ ಹಾಗೂ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ಮಧ್ಯಂತರ ಸರ್ಕಾರದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ದೇಶಾದ್ಯಂತ ನಡೆದ ವರ್ಚುವಲ್ ಸಭೆಯಲ್ಲಿ 5,000ಕ್ಕೂ ಹೆಚ್ಚು ಯುವಕರು ಅವರನ್ನು ಬೆಂಬಲಿಸಿದ ನಂತರ, ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ನೇಪಾಳದ ಮುಂದಿನ ಪ್ರಧಾನಿ ಹುದ್ದೆಗೆ ಜನರಲ್ ಝಡ್ ಅವರ ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ.

ಆನ್‌ಲೈನ್ ಚರ್ಚೆಯು ಉನ್ನತ ಹುದ್ದೆಗೆ ಸಂಭಾವ್ಯ ಅಭ್ಯರ್ಥಿಗಳ ಮೇಲೆ ಕೇಂದ್ರೀಕರಿಸಿದೆ. ಕಠ್ಮಂಡು ಮೇಯರ್ ಬಾಲೆನ್ ಶಾ ಅವರನ್ನು ಆರಂಭದಲ್ಲಿ ಸರ್ಕಾರದ ಮುಖ್ಯಸ್ಥ ಹುದ್ದೆಗೆ ನೆಚ್ಚಿನವರೆಂದು ಪರಿಗಣಿಸಲಾಗಿದ್ದರೂ, ಅವರನ್ನು ಸಂಪರ್ಕಿಸಲು ಪದೇ ಪದೇ ಮಾಡಿದ ಪ್ರಯತ್ನಗಳಿಗೆ ಅವರು ಪ್ರತಿಕ್ರಿಯಿಸಲಿಲ್ಲ ಎನ್ನಲಾಗಿದೆ. “ಅವರು ನಮ್ಮ ಕರೆಗಳನ್ನು ಸ್ವೀಕರಿಸದ ಕಾರಣ ನಮ್ಮ ಆಯ್ಕೆಯ ಹೆಸರು ಬದಲಾಯಿತು. ಹೆಚ್ಚಿನ ಬೆಂಬಲ ಸುಶೀಲಾ ಕರ್ಕಿ ಅವರಿಗೆ ಹೋಗಿದೆ” ಎಂದು ಜನರಲ್ ಝಡ್ ಪ್ರತಿನಿಧಿಯೊಬ್ಬರು ನೇಪಾಳಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತದ ಬಾಗಿಲು ತಲುಪಿದ ನೇಪಾಳದ ಗಲಭೆ; ಗಡಿ ಬಂದ್, ವಿಮಾನಗಳ ಮಾರ್ಗ ಬದಲಾವಣೆ, ಉತ್ತರ ಪ್ರದೇಶದಲ್ಲಿ ಕಟ್ಟೆಚ್ಚರ

ಜೆನ್-ಝಡ್ ಚಳವಳಿಯ ನಾಯಕರು ಇಂದು ಬೆಳಿಗ್ಗೆ ವರ್ಚುವಲ್ ಸಭೆಯನ್ನು ನಡೆಸಿದರು, ಅಲ್ಲಿ ಅವರು ಕಠ್ಮಂಡು ಮೇಯರ್ ಬಾಲೆನ್ ಶಾ ಮತ್ತು ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರಿಗೆ 15 ಪ್ರತಿನಿಧಿಗಳನ್ನು ಕಳುಹಿಸುವ ಬಗ್ಗೆ ಚರ್ಚಿಸಿದರು. ನಂತರ ಚಳುವಳಿಯು ಮುಂಬರುವ ಚರ್ಚೆಗಳಿಗೆ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿಯನ್ನು ತಮ್ಮ ಮಧ್ಯಂತರ ನಾಯಕಿಯಾಗಿ ನೇಮಿಸಲು ನಿರ್ಧರಿಸಿತು. ರಾಜಕೀಯ ಪಕ್ಷಗಳೊಂದಿಗೆ ಸಂಯೋಜಿತವಾಗಿರುವ ಯಾವುದೇ ಯುವಕರು ನಾಯಕತ್ವ ಮಾತುಕತೆಗಳಲ್ಲಿ ಭಾಗವಹಿಸಬಾರದು ಎಂದು ಗುಂಪು ಒತ್ತಿಹೇಳಿತು. ಪ್ರಸ್ತುತ ಯಾವುದೇ ಪಕ್ಷದೊಂದಿಗೆ ಸಂಬಂಧವಿಲ್ಲದ ಸುಶೀಲಾ ಕರ್ಕಿಯನ್ನು ಆಯ್ಕೆ ಮಾಡಲಾಯಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:15 pm, Wed, 10 September 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು