AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​ನಲ್ಲಿ ಇನ್ನಾದ್ರೂ ರಚನೆಯಾಗುತ್ತಾ ಸರ್ಕಾರ? ಗಂಝ್ ನಡೆಯೇನು?

ಜೆರುಸಲೆಂ: ಸರ್ಕಾರ ರಚಿಸುವ ಸಂಬಂಧ ಹಿಂದಿನ ಪ್ರಧಾನಿ ಬೆಂಝಮಿನ್ ನೆತನ್ಯಾಹು, ಬ್ಲ್ಯೂ ಅಂಡ್ ವೈಟ್ ಪಕ್ಷದ ಮುಖ್ಯಸ್ಥ ಬೆನ್ನಿ ಗಂಝ್ ಭಾನುವಾರ ಭೇಟಿಯಾಗಿದ್ದಾರೆ. ಸರ್ಕಾರ ರಚಿಸುವ ಉದ್ದೇಶದಿಂದ ಉಭಯ ನಾಯಕರೂ ಭೇಟಿಯಾಗಿದ್ದಾರೆ. ಆದ್ರೆ ಯಾವುದೇ ಸ್ಪಷ್ಟ ಚಿತ್ರಣ ಮೂಡದ ಹಿನ್ನೆಲೆಯಲ್ಲಿ ಉಭಯ ನಾಯಕರು ಮತ್ತೊಮ್ಮೆ ಭೇಟಿಯಾಗಲಿದ್ದಾರೆ ಎಂದು ಎರಡೂ ಪಕ್ಷಗಳ ವಕ್ತಾರರು ತಿಳಿಸಿದ್ದಾರೆ. ಇಸ್ರೇಲ್​ನ ರಾಜ್ಯಭಾರ ಹೊರುವಂತಹ ಬಲಿಷ್ಠ ಸರ್ಕಾರ ಬೇಕಾಗಿದೆ. ಅದಕ್ಕಾಗಿ ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ. ಸೆ. 17ರಂದು ಹೊರಬಿದ್ದ […]

ಇಸ್ರೇಲ್​ನಲ್ಲಿ ಇನ್ನಾದ್ರೂ ರಚನೆಯಾಗುತ್ತಾ ಸರ್ಕಾರ? ಗಂಝ್ ನಡೆಯೇನು?
ಸಾಧು ಶ್ರೀನಾಥ್​
|

Updated on:Oct 28, 2019 | 12:57 PM

Share

ಜೆರುಸಲೆಂ: ಸರ್ಕಾರ ರಚಿಸುವ ಸಂಬಂಧ ಹಿಂದಿನ ಪ್ರಧಾನಿ ಬೆಂಝಮಿನ್ ನೆತನ್ಯಾಹು, ಬ್ಲ್ಯೂ ಅಂಡ್ ವೈಟ್ ಪಕ್ಷದ ಮುಖ್ಯಸ್ಥ ಬೆನ್ನಿ ಗಂಝ್ ಭಾನುವಾರ ಭೇಟಿಯಾಗಿದ್ದಾರೆ.

ಸರ್ಕಾರ ರಚಿಸುವ ಉದ್ದೇಶದಿಂದ ಉಭಯ ನಾಯಕರೂ ಭೇಟಿಯಾಗಿದ್ದಾರೆ. ಆದ್ರೆ ಯಾವುದೇ ಸ್ಪಷ್ಟ ಚಿತ್ರಣ ಮೂಡದ ಹಿನ್ನೆಲೆಯಲ್ಲಿ ಉಭಯ ನಾಯಕರು ಮತ್ತೊಮ್ಮೆ ಭೇಟಿಯಾಗಲಿದ್ದಾರೆ ಎಂದು ಎರಡೂ ಪಕ್ಷಗಳ ವಕ್ತಾರರು ತಿಳಿಸಿದ್ದಾರೆ.

ಇಸ್ರೇಲ್​ನ ರಾಜ್ಯಭಾರ ಹೊರುವಂತಹ ಬಲಿಷ್ಠ ಸರ್ಕಾರ ಬೇಕಾಗಿದೆ. ಅದಕ್ಕಾಗಿ ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ಸೆ. 17ರಂದು ಹೊರಬಿದ್ದ ಸಾರ್ವತ್ರಿಕ ಚುನಾವಣಾ ಫಲಿತಾಂಶ ಅತಂತ್ರವಾಗಿತ್ತು. ಹೀಗಾಗಿ ಇಸ್ರೇಲ್ ಅಧ್ಯಕ್ಷ ರುವೆನ್​ ರವ್ಲೀನ್ ಅವರು ಸರ್ಕಾರ ರಚಿಸಲು ನೆತನ್ಯಾಹುಗೆ 28 ದಿನ ಕಾಲಾವಕಾಶ ನೀಡಿದ್ದರು. ಆದ್ರೆ ಕಡಿಮೆ ಸಂಖ್ಯಾಬಲದಿಂದಾಗಿ ಚುಕ್ಕಾಣಿ ಹಿಡಿಯುವಲ್ಲಿ ನೆತನ್ಯಾಹು ಸಫಲರಾಗಲಿಲ್ಲ.

ಮ್ಯಾಜಿಕ್​ ನಂಬರ್​ 61: 120 ಸದಸ್ಯರಿರುವ ಇಸ್ರೇಲ್​ ಸಂಸತ್​ನಲ್ಲಿ ಅಧಿಕಾರಕ್ಕೇರಲು 61 ಸದಸ್ಯರ ಬೆಂಬಲ ಅಗತ್ಯ. ಆದ್ರೆ ಯಾವ ಪಕ್ಷದ ಬಳಿಯೂ ಅಷ್ಟೊಂದು ಸಂಖ್ಯಾಬಲವಿಲ್ಲ. ಕಳೆದ ಚುನಾವಣೆಯಲ್ಲಿ ಬ್ಲ್ಯೂ ಅಂಡ್ ವೈಟ್ ಪಕ್ಷ 33 ಸ್ಥಾನಗಳಲ್ಲಿ ಗೆದ್ದಿದ್ದರೆ, ನೆತನ್ಯಾಹು ಪಕ್ಷ 32 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. 55 ಸದಸ್ಯರ ಬೆಂಬಲ ಇದೆ ಎಂದು ನೆತನ್ಯಾಹು ಹೇಳಿದ್ದರು. ಹೀಗಾಗಿ ಸರ್ಕಾರ ರಚನೆಯ ಮೊದಲ ಆಯ್ಕೆ ನೆತನ್ಯಾಹುಗೆ ನೀಡಲಾಗಿತ್ತು.

ಆದ್ರೆ ಸರ್ಕಾರ ರಚನೆ ನಿಟ್ಟಿನಲ್ಲಿ ನೆತನ್ಯಾಹು, ಬೆನ್ನಿ ಗಂಝ್ ಬೆಂಬಲ ಗಳಿಸಲು ಯತ್ನಿಸಿದರಾದರೂ ಇದುವರೆಗೂ ಆ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಜೊತೆಗೆ ಬೆನ್ನಿ ಗಂಝ್, ನೆತನ್ಯಾಹು ಜೊತೆ ಕೈಜೋಡಿಸಲು ಸುತರಾಂ ಒಪ್ಪಿರಲಿಲ್ಲ.

Published On - 12:36 pm, Mon, 28 October 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!