AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​ನಲ್ಲಿ ಇನ್ನಾದ್ರೂ ರಚನೆಯಾಗುತ್ತಾ ಸರ್ಕಾರ? ಗಂಝ್ ನಡೆಯೇನು?

ಜೆರುಸಲೆಂ: ಸರ್ಕಾರ ರಚಿಸುವ ಸಂಬಂಧ ಹಿಂದಿನ ಪ್ರಧಾನಿ ಬೆಂಝಮಿನ್ ನೆತನ್ಯಾಹು, ಬ್ಲ್ಯೂ ಅಂಡ್ ವೈಟ್ ಪಕ್ಷದ ಮುಖ್ಯಸ್ಥ ಬೆನ್ನಿ ಗಂಝ್ ಭಾನುವಾರ ಭೇಟಿಯಾಗಿದ್ದಾರೆ. ಸರ್ಕಾರ ರಚಿಸುವ ಉದ್ದೇಶದಿಂದ ಉಭಯ ನಾಯಕರೂ ಭೇಟಿಯಾಗಿದ್ದಾರೆ. ಆದ್ರೆ ಯಾವುದೇ ಸ್ಪಷ್ಟ ಚಿತ್ರಣ ಮೂಡದ ಹಿನ್ನೆಲೆಯಲ್ಲಿ ಉಭಯ ನಾಯಕರು ಮತ್ತೊಮ್ಮೆ ಭೇಟಿಯಾಗಲಿದ್ದಾರೆ ಎಂದು ಎರಡೂ ಪಕ್ಷಗಳ ವಕ್ತಾರರು ತಿಳಿಸಿದ್ದಾರೆ. ಇಸ್ರೇಲ್​ನ ರಾಜ್ಯಭಾರ ಹೊರುವಂತಹ ಬಲಿಷ್ಠ ಸರ್ಕಾರ ಬೇಕಾಗಿದೆ. ಅದಕ್ಕಾಗಿ ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ. ಸೆ. 17ರಂದು ಹೊರಬಿದ್ದ […]

ಇಸ್ರೇಲ್​ನಲ್ಲಿ ಇನ್ನಾದ್ರೂ ರಚನೆಯಾಗುತ್ತಾ ಸರ್ಕಾರ? ಗಂಝ್ ನಡೆಯೇನು?
ಸಾಧು ಶ್ರೀನಾಥ್​
|

Updated on:Oct 28, 2019 | 12:57 PM

Share

ಜೆರುಸಲೆಂ: ಸರ್ಕಾರ ರಚಿಸುವ ಸಂಬಂಧ ಹಿಂದಿನ ಪ್ರಧಾನಿ ಬೆಂಝಮಿನ್ ನೆತನ್ಯಾಹು, ಬ್ಲ್ಯೂ ಅಂಡ್ ವೈಟ್ ಪಕ್ಷದ ಮುಖ್ಯಸ್ಥ ಬೆನ್ನಿ ಗಂಝ್ ಭಾನುವಾರ ಭೇಟಿಯಾಗಿದ್ದಾರೆ.

ಸರ್ಕಾರ ರಚಿಸುವ ಉದ್ದೇಶದಿಂದ ಉಭಯ ನಾಯಕರೂ ಭೇಟಿಯಾಗಿದ್ದಾರೆ. ಆದ್ರೆ ಯಾವುದೇ ಸ್ಪಷ್ಟ ಚಿತ್ರಣ ಮೂಡದ ಹಿನ್ನೆಲೆಯಲ್ಲಿ ಉಭಯ ನಾಯಕರು ಮತ್ತೊಮ್ಮೆ ಭೇಟಿಯಾಗಲಿದ್ದಾರೆ ಎಂದು ಎರಡೂ ಪಕ್ಷಗಳ ವಕ್ತಾರರು ತಿಳಿಸಿದ್ದಾರೆ.

ಇಸ್ರೇಲ್​ನ ರಾಜ್ಯಭಾರ ಹೊರುವಂತಹ ಬಲಿಷ್ಠ ಸರ್ಕಾರ ಬೇಕಾಗಿದೆ. ಅದಕ್ಕಾಗಿ ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ಸೆ. 17ರಂದು ಹೊರಬಿದ್ದ ಸಾರ್ವತ್ರಿಕ ಚುನಾವಣಾ ಫಲಿತಾಂಶ ಅತಂತ್ರವಾಗಿತ್ತು. ಹೀಗಾಗಿ ಇಸ್ರೇಲ್ ಅಧ್ಯಕ್ಷ ರುವೆನ್​ ರವ್ಲೀನ್ ಅವರು ಸರ್ಕಾರ ರಚಿಸಲು ನೆತನ್ಯಾಹುಗೆ 28 ದಿನ ಕಾಲಾವಕಾಶ ನೀಡಿದ್ದರು. ಆದ್ರೆ ಕಡಿಮೆ ಸಂಖ್ಯಾಬಲದಿಂದಾಗಿ ಚುಕ್ಕಾಣಿ ಹಿಡಿಯುವಲ್ಲಿ ನೆತನ್ಯಾಹು ಸಫಲರಾಗಲಿಲ್ಲ.

ಮ್ಯಾಜಿಕ್​ ನಂಬರ್​ 61: 120 ಸದಸ್ಯರಿರುವ ಇಸ್ರೇಲ್​ ಸಂಸತ್​ನಲ್ಲಿ ಅಧಿಕಾರಕ್ಕೇರಲು 61 ಸದಸ್ಯರ ಬೆಂಬಲ ಅಗತ್ಯ. ಆದ್ರೆ ಯಾವ ಪಕ್ಷದ ಬಳಿಯೂ ಅಷ್ಟೊಂದು ಸಂಖ್ಯಾಬಲವಿಲ್ಲ. ಕಳೆದ ಚುನಾವಣೆಯಲ್ಲಿ ಬ್ಲ್ಯೂ ಅಂಡ್ ವೈಟ್ ಪಕ್ಷ 33 ಸ್ಥಾನಗಳಲ್ಲಿ ಗೆದ್ದಿದ್ದರೆ, ನೆತನ್ಯಾಹು ಪಕ್ಷ 32 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. 55 ಸದಸ್ಯರ ಬೆಂಬಲ ಇದೆ ಎಂದು ನೆತನ್ಯಾಹು ಹೇಳಿದ್ದರು. ಹೀಗಾಗಿ ಸರ್ಕಾರ ರಚನೆಯ ಮೊದಲ ಆಯ್ಕೆ ನೆತನ್ಯಾಹುಗೆ ನೀಡಲಾಗಿತ್ತು.

ಆದ್ರೆ ಸರ್ಕಾರ ರಚನೆ ನಿಟ್ಟಿನಲ್ಲಿ ನೆತನ್ಯಾಹು, ಬೆನ್ನಿ ಗಂಝ್ ಬೆಂಬಲ ಗಳಿಸಲು ಯತ್ನಿಸಿದರಾದರೂ ಇದುವರೆಗೂ ಆ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಜೊತೆಗೆ ಬೆನ್ನಿ ಗಂಝ್, ನೆತನ್ಯಾಹು ಜೊತೆ ಕೈಜೋಡಿಸಲು ಸುತರಾಂ ಒಪ್ಪಿರಲಿಲ್ಲ.

Published On - 12:36 pm, Mon, 28 October 19

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್