ಇಸ್ರೇಲ್​ನಲ್ಲಿ ಇನ್ನಾದ್ರೂ ರಚನೆಯಾಗುತ್ತಾ ಸರ್ಕಾರ? ಗಂಝ್ ನಡೆಯೇನು?

ಜೆರುಸಲೆಂ: ಸರ್ಕಾರ ರಚಿಸುವ ಸಂಬಂಧ ಹಿಂದಿನ ಪ್ರಧಾನಿ ಬೆಂಝಮಿನ್ ನೆತನ್ಯಾಹು, ಬ್ಲ್ಯೂ ಅಂಡ್ ವೈಟ್ ಪಕ್ಷದ ಮುಖ್ಯಸ್ಥ ಬೆನ್ನಿ ಗಂಝ್ ಭಾನುವಾರ ಭೇಟಿಯಾಗಿದ್ದಾರೆ. ಸರ್ಕಾರ ರಚಿಸುವ ಉದ್ದೇಶದಿಂದ ಉಭಯ ನಾಯಕರೂ ಭೇಟಿಯಾಗಿದ್ದಾರೆ. ಆದ್ರೆ ಯಾವುದೇ ಸ್ಪಷ್ಟ ಚಿತ್ರಣ ಮೂಡದ ಹಿನ್ನೆಲೆಯಲ್ಲಿ ಉಭಯ ನಾಯಕರು ಮತ್ತೊಮ್ಮೆ ಭೇಟಿಯಾಗಲಿದ್ದಾರೆ ಎಂದು ಎರಡೂ ಪಕ್ಷಗಳ ವಕ್ತಾರರು ತಿಳಿಸಿದ್ದಾರೆ. ಇಸ್ರೇಲ್​ನ ರಾಜ್ಯಭಾರ ಹೊರುವಂತಹ ಬಲಿಷ್ಠ ಸರ್ಕಾರ ಬೇಕಾಗಿದೆ. ಅದಕ್ಕಾಗಿ ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ. ಸೆ. 17ರಂದು ಹೊರಬಿದ್ದ […]

ಇಸ್ರೇಲ್​ನಲ್ಲಿ ಇನ್ನಾದ್ರೂ ರಚನೆಯಾಗುತ್ತಾ ಸರ್ಕಾರ? ಗಂಝ್ ನಡೆಯೇನು?
ಸಾಧು ಶ್ರೀನಾಥ್​

Updated on: Oct 28, 2019 | 12:57 PM

ಜೆರುಸಲೆಂ: ಸರ್ಕಾರ ರಚಿಸುವ ಸಂಬಂಧ ಹಿಂದಿನ ಪ್ರಧಾನಿ ಬೆಂಝಮಿನ್ ನೆತನ್ಯಾಹು, ಬ್ಲ್ಯೂ ಅಂಡ್ ವೈಟ್ ಪಕ್ಷದ ಮುಖ್ಯಸ್ಥ ಬೆನ್ನಿ ಗಂಝ್ ಭಾನುವಾರ ಭೇಟಿಯಾಗಿದ್ದಾರೆ.

ಸರ್ಕಾರ ರಚಿಸುವ ಉದ್ದೇಶದಿಂದ ಉಭಯ ನಾಯಕರೂ ಭೇಟಿಯಾಗಿದ್ದಾರೆ. ಆದ್ರೆ ಯಾವುದೇ ಸ್ಪಷ್ಟ ಚಿತ್ರಣ ಮೂಡದ ಹಿನ್ನೆಲೆಯಲ್ಲಿ ಉಭಯ ನಾಯಕರು ಮತ್ತೊಮ್ಮೆ ಭೇಟಿಯಾಗಲಿದ್ದಾರೆ ಎಂದು ಎರಡೂ ಪಕ್ಷಗಳ ವಕ್ತಾರರು ತಿಳಿಸಿದ್ದಾರೆ.

ಇಸ್ರೇಲ್​ನ ರಾಜ್ಯಭಾರ ಹೊರುವಂತಹ ಬಲಿಷ್ಠ ಸರ್ಕಾರ ಬೇಕಾಗಿದೆ. ಅದಕ್ಕಾಗಿ ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ಸೆ. 17ರಂದು ಹೊರಬಿದ್ದ ಸಾರ್ವತ್ರಿಕ ಚುನಾವಣಾ ಫಲಿತಾಂಶ ಅತಂತ್ರವಾಗಿತ್ತು. ಹೀಗಾಗಿ ಇಸ್ರೇಲ್ ಅಧ್ಯಕ್ಷ ರುವೆನ್​ ರವ್ಲೀನ್ ಅವರು ಸರ್ಕಾರ ರಚಿಸಲು ನೆತನ್ಯಾಹುಗೆ 28 ದಿನ ಕಾಲಾವಕಾಶ ನೀಡಿದ್ದರು. ಆದ್ರೆ ಕಡಿಮೆ ಸಂಖ್ಯಾಬಲದಿಂದಾಗಿ ಚುಕ್ಕಾಣಿ ಹಿಡಿಯುವಲ್ಲಿ ನೆತನ್ಯಾಹು ಸಫಲರಾಗಲಿಲ್ಲ.

ಮ್ಯಾಜಿಕ್​ ನಂಬರ್​ 61:
120 ಸದಸ್ಯರಿರುವ ಇಸ್ರೇಲ್​ ಸಂಸತ್​ನಲ್ಲಿ ಅಧಿಕಾರಕ್ಕೇರಲು 61 ಸದಸ್ಯರ ಬೆಂಬಲ ಅಗತ್ಯ. ಆದ್ರೆ ಯಾವ ಪಕ್ಷದ ಬಳಿಯೂ ಅಷ್ಟೊಂದು ಸಂಖ್ಯಾಬಲವಿಲ್ಲ. ಕಳೆದ ಚುನಾವಣೆಯಲ್ಲಿ ಬ್ಲ್ಯೂ ಅಂಡ್ ವೈಟ್ ಪಕ್ಷ 33 ಸ್ಥಾನಗಳಲ್ಲಿ ಗೆದ್ದಿದ್ದರೆ, ನೆತನ್ಯಾಹು ಪಕ್ಷ 32 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. 55 ಸದಸ್ಯರ ಬೆಂಬಲ ಇದೆ ಎಂದು ನೆತನ್ಯಾಹು ಹೇಳಿದ್ದರು. ಹೀಗಾಗಿ ಸರ್ಕಾರ ರಚನೆಯ ಮೊದಲ ಆಯ್ಕೆ ನೆತನ್ಯಾಹುಗೆ ನೀಡಲಾಗಿತ್ತು.

ಆದ್ರೆ ಸರ್ಕಾರ ರಚನೆ ನಿಟ್ಟಿನಲ್ಲಿ ನೆತನ್ಯಾಹು, ಬೆನ್ನಿ ಗಂಝ್ ಬೆಂಬಲ ಗಳಿಸಲು ಯತ್ನಿಸಿದರಾದರೂ ಇದುವರೆಗೂ ಆ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಜೊತೆಗೆ ಬೆನ್ನಿ ಗಂಝ್, ನೆತನ್ಯಾಹು ಜೊತೆ ಕೈಜೋಡಿಸಲು ಸುತರಾಂ ಒಪ್ಪಿರಲಿಲ್ಲ.

Published On - 12:36 pm, Mon, 28 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us