AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದನ ವಿರಾಮ ಸಾಧ್ಯವಿಲ್ಲ: ಹಮಾಸ್​ ಉಗ್ರರನ್ನು ಹತ್ತಿಕ್ಕುವವರೆಗೂ ಯುದ್ಧ ನಿಲ್ಲುವುದಿಲ್ಲ: ಬೆಂಜಮಿನ್

ಇಸ್ರೇಲ್​ ಹಾಗೂ ಹಮಾಸ್ ನಡುವೆ ಕಳೆದ ಒಂದು ತಿಂಗಳಿಂದ ಸಂಘರ್ಷ ನಡೆಯುತ್ತಿದೆ. ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್​ ಮೇಲೆ ರಾಕೆಟ್ ದಾಳಿ ನಡೆಸಿದ್ದರು. ಅದಾದ ಬಳಿಕ ಇಸ್ರೇಲ್​ ಕೂಡ ಗಾಜಾದ ಮೇಲೆ ನಿರಂತರ ದಾಳಿ ನಡೆಸುತ್ತಿದೆ. ಅಲ್ಲೂ ಹತ್ತು ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಕದನ ವಿರಾಮ ಸಾಧ್ಯವಿಲ್ಲ: ಹಮಾಸ್​ ಉಗ್ರರನ್ನು ಹತ್ತಿಕ್ಕುವವರೆಗೂ ಯುದ್ಧ ನಿಲ್ಲುವುದಿಲ್ಲ: ಬೆಂಜಮಿನ್
ಬೆಂಜಮಿನ್
ನಯನಾ ರಾಜೀವ್
|

Updated on: Nov 12, 2023 | 10:10 AM

Share

ಇಸ್ರೇಲ್(Israel)​ ಹಾಗೂ ಹಮಾಸ್(Hamas) ನಡುವೆ ಕಳೆದ ಒಂದು ತಿಂಗಳಿಂದ ಸಂಘರ್ಷ ನಡೆಯುತ್ತಿದೆ. ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್​ ಮೇಲೆ ರಾಕೆಟ್ ದಾಳಿ ನಡೆಸಿದ್ದರು. ಅದಾದ ಬಳಿಕ ಇಸ್ರೇಲ್​ ಕೂಡ ಗಾಜಾದ ಮೇಲೆ ನಿರಂತರ ದಾಳಿ ನಡೆಸುತ್ತಿದೆ. ಅಲ್ಲೂ ಹತ್ತು ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇದೀಗ ಹಲವು ದೇಶಗಳು ಕದನ ವಿರಾಮ ಘೋಷಿಸುವಂತೆ ಇಸ್ರೇಲ್​ಗೆ ಸಲಹೆ ನೀಡುತ್ತಿದ್ದಾರೆ, ಆದರೆ ಇಸ್ರೇಲ್ ಮಾತ್ರ ಸಲಹೆಗಳನ್ನು ತಿರಸ್ಕರಿಸಿದ್ದು, ಯಾವುದೇ ಕಾರಣಕ್ಕೂ ಯುದ್ಧ ನಿಲ್ಲಿಸುವ ಮಾತಿಲ್ಲ, ಹಮಾಸ್​ ಉಗ್ರರನ್ನು ಹತ್ತಿಕ್ಕುವವರೆಗೂ ಬಿಡುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಪುನರುಚ್ಚರಿಸಿದ್ದಾರೆ.

ಯುದ್ಧವನ್ನು ನಾವು ಪ್ರಾರಂಭ ಮಾಡಿಲ್ಲ ಆದರೆ ಅಂತ್ಯ ನಮ್ಮಿಂದಲೇ ಆಗುತ್ತದೆ ಎಂದು ಈ ಮೊದಲೇ ನೇತನ್ಯಾಹು ಹೇಳಿಕೆ ನೀಡಿದ್ದರು. ನೇತನ್ಯಾಹು ಅವರು, ಗಾಜಾವನ್ನು ಹಮಾಸ್​ ಮುಕ್ತಗೊಳಿಸುವುದು ಹಾಗೂ ಇಸ್ರೇಲ್​ನಲ್ಲಿ ಭದ್ರತಾ ನಿಯಂತ್ರಣವನ್ನು ಉಳಿಸಿಕೊಳ್ಳಲು ಒತ್ತಾಯಿಸಿದ್ದಾರೆ. ಉಗ್ರಗಾಮಿಗಳನ್ನು ಭೇಟೆಯಾಡಲು ಇಸ್ರೇಲಿ ಪಡೆಗಳು ಗಾಜಾವನ್ನು ಮುಕ್ತವಾಗಿ ಪ್ರವೇಶಿಸಲು ಶಕ್ತವಾಗಿರಬೇಕು ಎಂದು ಹೇಳಿದ್ದಾರೆ.

ಹಮಾಸ್, ಉತ್ತರ ಗಾಜಾ ಪಟ್ಟಿಯ ಮೇಲಿನ ನಿಯಂತ್ರಣವನ್ನು ಕಳೆದುಕೊಂಡಿದೆ. ಅಲ್ಲಿ ಅಡಗಿಕೊಳ್ಳಲು ಸ್ಥಳವಿಲ್ಲ. ನಾವು ಗೆಲ್ಲುವವರೆಗೆ ಹೋರಾಟ ಮುಂದುವರೆಸುತ್ತೇವೆ ಎಂದರು.

ಮತ್ತಷ್ಟು ಓದಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜನ್ಮ ಜಾತಕ ವಿಶ್ಲೇಷಣೆ ಏನು ಹೇಳುತ್ತದೆ?

ಹಮಾಸ್ ಉಗ್ರರು ಅಪಹರಿಸಿರುವ ಆರು ಮಮದಿ ಅಮೆರಿಕನ್ನರು ಸೇರಿದಂತೆ 12ಕ್ಕೂ ಹೆಚ್ಚು ಒತ್ತೆಯಾಳುಗಳ ಬಿಡುಗಡೆಗೆ ಮಾತುಕತೆ ನಡೆಯುತ್ತಿದೆ. ಈ ನಡುವೆ ಕದನ ವಿರಾಮದ ಬಗ್ಗೆ ಮಾತನಾಡಿರುವ ನೇತನ್ಯಾಹು, ನಾವು ಎಲ್ಲಾ ಮೂಲಗಳಿಂದ ಕೇಳುತ್ತಿರುವ ಎಲ್ಲಾ ರೀತಿಯ ಸುಳ್ಳು ವದಂತಿಗಳನ್ನು ಕೊನೆಗೊಳಿಸುತ್ತಿದ್ದೇವೆ, ಒತ್ತೆಯಾಳುಗಳನ್ನು ಬಿಡುಗಡೆ ಮಾಡದೆ ಕದನ ವಿರಾಮ ಘೋಷಿಸುವುದಿಲ್ಲ ಎಂದು ಹೇಳಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್