AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉದ್ಘಾಟನೆ ವೇಳೆಯೇ ಕುಸಿದು ಬಿದ್ದ ಬೃಹತ್ ಸೇತುವೆ; ವಿಡಿಯೋ ವೈರಲ್

ಸೇತುವೆಯನ್ನು ಉದ್ಘಾಟಿಸಲು ಬಂದಿದ್ದ ಮಹಿಳಾ ಅಧಿಕಾರಿಯು ಸಹಾಯ ಕೋರಿ ಆ ಸೇತುವೆಯಿಂದ ಕೆಳಗೆ ಜಿಗಿಯಲು ಸಿದ್ಧವಾಗಿರುವುದನ್ನು ವೈರಲ್ ಆಗಿರುವ ವಿಡಿಯೋದಲ್ಲಿ ನೋಡಬಹುದು.

Viral Video: ಉದ್ಘಾಟನೆ ವೇಳೆಯೇ ಕುಸಿದು ಬಿದ್ದ ಬೃಹತ್ ಸೇತುವೆ; ವಿಡಿಯೋ ವೈರಲ್
ಕಾಂಗೋದಲ್ಲಿ ಕುಸಿದು ಬಿದ್ದಿರುವ ಸೇತುವೆ
TV9 Web
| Edited By: |

Updated on: Sep 07, 2022 | 1:35 PM

Share

ನವದೆಹಲಿ: ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ (DRC) ಅಧಿಕಾರಿಗಳು ಸೇತುವೆಯನ್ನು ಉದ್ಘಾಟಿಸಲು ಜಮಾಯಿಸಿದ್ದಾಗಲೇ ಆ ಸೇತುವೆ (Bridge) ಕುಸಿದು ಬಿದ್ದಿರುವ ವಿಡಿಯೋ ವೈರಲ್ (Video Viral) ಆಗಿದೆ. ಈ ಅಪಘಾತದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆ ಸೇತುವೆಯ ನಿರ್ಮಾಣದ ಗುಣಮಟ್ಟವನ್ನು ಜನರು ಅಪಹಾಸ್ಯ ಮಾಡುತ್ತಿದ್ದಾರೆ. ಮಳೆಗಾಲದಲ್ಲಿ ಸ್ಥಳೀಯರು ನದಿ ದಾಟಲು ಈ ಕಿರು ಸೇತುವೆಯನ್ನು ನಿರ್ಮಿಸಲಾಗಿತ್ತು. ಈ ಮೊದಲು ಇದ್ದ ಸೇತುವೆ ಮಳೆಗಾಲದಲ್ಲಿ ಒಡೆಯುತ್ತದೆ ಎಂಬ ಕಾರಣಕ್ಕೆ ಹೊಸ ಸೇತುವೆಯನ್ನು ನಿರ್ಮಿಸಲಾಗಿತ್ತು.

ಅಧಿಕೃತ ಕಾರ್ಯಕ್ರಮವೊಂದರಲ್ಲಿ ಈ ಸೇತುವೆಯನ್ನು ಉದ್ಘಾಟನೆ ಮಾಡಲು ಅಧಿಕಾರಿಗಳು ಸೇತುವೆಯ ಮೇಲೆ ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಸೇತುವೆಯ ಒಂದು ತುದಿಯಲ್ಲಿ ಕೆಂಪು ರಿಬ್ಬನ್ ಕಟ್ಟಲಾಗಿತ್ತು. ಆ ರಿಬ್ಬನ್ ಅನ್ನು ಕಟ್ ಮಾಡುವ ಮೂಲಕ ಉದ್ಘಾಟನೆ ಮಾಡಬೇಕಾಗಿತ್ತು. ಆದರೆ, ಅಲ್ಲಿದ್ದ ಸಿಬ್ಬಂದಿ ರಿಬ್ಬನ್ ಕತ್ತರಿಸಲು ಕತ್ತರಿ ತೆಗೆದ ತಕ್ಷಣ ಸೇತುವೆಯು ಅಧಿಕಾರಿಗಳ ಭಾರವನ್ನು ತಡೆಯಲಾಗದೆ ಕುಸಿದು ಬಿದ್ದಿದೆ.

ಇದನ್ನೂ ಓದಿ: Atal Bridge: ಗುಜರಾತ್​​ನಲ್ಲಿ ಮೋದಿಯಿಂದ ಇಂದು ಅಟಲ್ ಸೇತುವೆ ಲೋಕಾರ್ಪಣೆ; ಇದರ ವಿಶೇಷತೆಗಳೇನು ಗೊತ್ತಾ?

ತಕ್ಷಣ ಆ ಸೇತುವೆಯನ್ನು ಉದ್ಘಾಟಿಸಲು ಬಂದಿದ್ದ ಮಹಿಳಾ ಅಧಿಕಾರಿಯು ಸಹಾಯ ಕೋರಿ ಆ ಸೇತುವೆಯಿಂದ ಕೆಳಗೆ ಜಿಗಿಯಲು ಸಿದ್ಧವಾಗಿರುವುದನ್ನು ವೈರಲ್ ಆಗಿರುವ ವಿಡಿಯೋದಲ್ಲಿ ನೋಡಬಹುದು. ತಕ್ಷಣ ಭದ್ರತಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಮಹಿಳಾ ಅಧಿಕಾರಿಯನ್ನು ಕುಸಿಯುತ್ತಿದ್ದ ಸೇತುವೆಯಿಂದ ರಕ್ಷಿಸಿದ್ದಾರೆ.

ಅಧಿಕೃತ ನಿಯೋಗದ ಉಳಿದ ಸದಸ್ಯರು ಕೂಡ ಸೇತುವೆಯಿಂದ ಕೆಳಗೆ ಜೋತಾಡತೊಡಗಿದರು. ಆದರೆ ಅದೃಷ್ಟವಶಾತ್ ಅವರು ನೆಲಕ್ಕೆ ಬೀಳಲಿಲ್ಲ. ಸಿಕ್ಕಿಬಿದ್ದ ಅಧಿಕಾರಿಗಳಿಗೆ ಸಹಾಯ ಮಾಡಲು ಇತರರು ತಕ್ಷಣವೇ ಧಾವಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಉದ್ಘಾಟನೆಗೆ ಸಿದ್ಧವಾಗಿದ್ದ ಸೇತುವೆ ಕುಸಿದು ಎರಡು ತುಂಡಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ