Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉದ್ಘಾಟನೆ ವೇಳೆಯೇ ಕುಸಿದು ಬಿದ್ದ ಬೃಹತ್ ಸೇತುವೆ; ವಿಡಿಯೋ ವೈರಲ್

ಸೇತುವೆಯನ್ನು ಉದ್ಘಾಟಿಸಲು ಬಂದಿದ್ದ ಮಹಿಳಾ ಅಧಿಕಾರಿಯು ಸಹಾಯ ಕೋರಿ ಆ ಸೇತುವೆಯಿಂದ ಕೆಳಗೆ ಜಿಗಿಯಲು ಸಿದ್ಧವಾಗಿರುವುದನ್ನು ವೈರಲ್ ಆಗಿರುವ ವಿಡಿಯೋದಲ್ಲಿ ನೋಡಬಹುದು.

Viral Video: ಉದ್ಘಾಟನೆ ವೇಳೆಯೇ ಕುಸಿದು ಬಿದ್ದ ಬೃಹತ್ ಸೇತುವೆ; ವಿಡಿಯೋ ವೈರಲ್
ಕಾಂಗೋದಲ್ಲಿ ಕುಸಿದು ಬಿದ್ದಿರುವ ಸೇತುವೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 07, 2022 | 1:35 PM

ನವದೆಹಲಿ: ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ (DRC) ಅಧಿಕಾರಿಗಳು ಸೇತುವೆಯನ್ನು ಉದ್ಘಾಟಿಸಲು ಜಮಾಯಿಸಿದ್ದಾಗಲೇ ಆ ಸೇತುವೆ (Bridge) ಕುಸಿದು ಬಿದ್ದಿರುವ ವಿಡಿಯೋ ವೈರಲ್ (Video Viral) ಆಗಿದೆ. ಈ ಅಪಘಾತದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆ ಸೇತುವೆಯ ನಿರ್ಮಾಣದ ಗುಣಮಟ್ಟವನ್ನು ಜನರು ಅಪಹಾಸ್ಯ ಮಾಡುತ್ತಿದ್ದಾರೆ. ಮಳೆಗಾಲದಲ್ಲಿ ಸ್ಥಳೀಯರು ನದಿ ದಾಟಲು ಈ ಕಿರು ಸೇತುವೆಯನ್ನು ನಿರ್ಮಿಸಲಾಗಿತ್ತು. ಈ ಮೊದಲು ಇದ್ದ ಸೇತುವೆ ಮಳೆಗಾಲದಲ್ಲಿ ಒಡೆಯುತ್ತದೆ ಎಂಬ ಕಾರಣಕ್ಕೆ ಹೊಸ ಸೇತುವೆಯನ್ನು ನಿರ್ಮಿಸಲಾಗಿತ್ತು.

ಅಧಿಕೃತ ಕಾರ್ಯಕ್ರಮವೊಂದರಲ್ಲಿ ಈ ಸೇತುವೆಯನ್ನು ಉದ್ಘಾಟನೆ ಮಾಡಲು ಅಧಿಕಾರಿಗಳು ಸೇತುವೆಯ ಮೇಲೆ ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಸೇತುವೆಯ ಒಂದು ತುದಿಯಲ್ಲಿ ಕೆಂಪು ರಿಬ್ಬನ್ ಕಟ್ಟಲಾಗಿತ್ತು. ಆ ರಿಬ್ಬನ್ ಅನ್ನು ಕಟ್ ಮಾಡುವ ಮೂಲಕ ಉದ್ಘಾಟನೆ ಮಾಡಬೇಕಾಗಿತ್ತು. ಆದರೆ, ಅಲ್ಲಿದ್ದ ಸಿಬ್ಬಂದಿ ರಿಬ್ಬನ್ ಕತ್ತರಿಸಲು ಕತ್ತರಿ ತೆಗೆದ ತಕ್ಷಣ ಸೇತುವೆಯು ಅಧಿಕಾರಿಗಳ ಭಾರವನ್ನು ತಡೆಯಲಾಗದೆ ಕುಸಿದು ಬಿದ್ದಿದೆ.

ಇದನ್ನೂ ಓದಿ: Atal Bridge: ಗುಜರಾತ್​​ನಲ್ಲಿ ಮೋದಿಯಿಂದ ಇಂದು ಅಟಲ್ ಸೇತುವೆ ಲೋಕಾರ್ಪಣೆ; ಇದರ ವಿಶೇಷತೆಗಳೇನು ಗೊತ್ತಾ?

ತಕ್ಷಣ ಆ ಸೇತುವೆಯನ್ನು ಉದ್ಘಾಟಿಸಲು ಬಂದಿದ್ದ ಮಹಿಳಾ ಅಧಿಕಾರಿಯು ಸಹಾಯ ಕೋರಿ ಆ ಸೇತುವೆಯಿಂದ ಕೆಳಗೆ ಜಿಗಿಯಲು ಸಿದ್ಧವಾಗಿರುವುದನ್ನು ವೈರಲ್ ಆಗಿರುವ ವಿಡಿಯೋದಲ್ಲಿ ನೋಡಬಹುದು. ತಕ್ಷಣ ಭದ್ರತಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಮಹಿಳಾ ಅಧಿಕಾರಿಯನ್ನು ಕುಸಿಯುತ್ತಿದ್ದ ಸೇತುವೆಯಿಂದ ರಕ್ಷಿಸಿದ್ದಾರೆ.

ಅಧಿಕೃತ ನಿಯೋಗದ ಉಳಿದ ಸದಸ್ಯರು ಕೂಡ ಸೇತುವೆಯಿಂದ ಕೆಳಗೆ ಜೋತಾಡತೊಡಗಿದರು. ಆದರೆ ಅದೃಷ್ಟವಶಾತ್ ಅವರು ನೆಲಕ್ಕೆ ಬೀಳಲಿಲ್ಲ. ಸಿಕ್ಕಿಬಿದ್ದ ಅಧಿಕಾರಿಗಳಿಗೆ ಸಹಾಯ ಮಾಡಲು ಇತರರು ತಕ್ಷಣವೇ ಧಾವಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಉದ್ಘಾಟನೆಗೆ ಸಿದ್ಧವಾಗಿದ್ದ ಸೇತುವೆ ಕುಸಿದು ಎರಡು ತುಂಡಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್