AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉದ್ಘಾಟನೆ ವೇಳೆಯೇ ಕುಸಿದು ಬಿದ್ದ ಬೃಹತ್ ಸೇತುವೆ; ವಿಡಿಯೋ ವೈರಲ್

ಸೇತುವೆಯನ್ನು ಉದ್ಘಾಟಿಸಲು ಬಂದಿದ್ದ ಮಹಿಳಾ ಅಧಿಕಾರಿಯು ಸಹಾಯ ಕೋರಿ ಆ ಸೇತುವೆಯಿಂದ ಕೆಳಗೆ ಜಿಗಿಯಲು ಸಿದ್ಧವಾಗಿರುವುದನ್ನು ವೈರಲ್ ಆಗಿರುವ ವಿಡಿಯೋದಲ್ಲಿ ನೋಡಬಹುದು.

Viral Video: ಉದ್ಘಾಟನೆ ವೇಳೆಯೇ ಕುಸಿದು ಬಿದ್ದ ಬೃಹತ್ ಸೇತುವೆ; ವಿಡಿಯೋ ವೈರಲ್
ಕಾಂಗೋದಲ್ಲಿ ಕುಸಿದು ಬಿದ್ದಿರುವ ಸೇತುವೆ
TV9 Web
| Edited By: |

Updated on: Sep 07, 2022 | 1:35 PM

Share

ನವದೆಹಲಿ: ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ (DRC) ಅಧಿಕಾರಿಗಳು ಸೇತುವೆಯನ್ನು ಉದ್ಘಾಟಿಸಲು ಜಮಾಯಿಸಿದ್ದಾಗಲೇ ಆ ಸೇತುವೆ (Bridge) ಕುಸಿದು ಬಿದ್ದಿರುವ ವಿಡಿಯೋ ವೈರಲ್ (Video Viral) ಆಗಿದೆ. ಈ ಅಪಘಾತದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆ ಸೇತುವೆಯ ನಿರ್ಮಾಣದ ಗುಣಮಟ್ಟವನ್ನು ಜನರು ಅಪಹಾಸ್ಯ ಮಾಡುತ್ತಿದ್ದಾರೆ. ಮಳೆಗಾಲದಲ್ಲಿ ಸ್ಥಳೀಯರು ನದಿ ದಾಟಲು ಈ ಕಿರು ಸೇತುವೆಯನ್ನು ನಿರ್ಮಿಸಲಾಗಿತ್ತು. ಈ ಮೊದಲು ಇದ್ದ ಸೇತುವೆ ಮಳೆಗಾಲದಲ್ಲಿ ಒಡೆಯುತ್ತದೆ ಎಂಬ ಕಾರಣಕ್ಕೆ ಹೊಸ ಸೇತುವೆಯನ್ನು ನಿರ್ಮಿಸಲಾಗಿತ್ತು.

ಅಧಿಕೃತ ಕಾರ್ಯಕ್ರಮವೊಂದರಲ್ಲಿ ಈ ಸೇತುವೆಯನ್ನು ಉದ್ಘಾಟನೆ ಮಾಡಲು ಅಧಿಕಾರಿಗಳು ಸೇತುವೆಯ ಮೇಲೆ ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಸೇತುವೆಯ ಒಂದು ತುದಿಯಲ್ಲಿ ಕೆಂಪು ರಿಬ್ಬನ್ ಕಟ್ಟಲಾಗಿತ್ತು. ಆ ರಿಬ್ಬನ್ ಅನ್ನು ಕಟ್ ಮಾಡುವ ಮೂಲಕ ಉದ್ಘಾಟನೆ ಮಾಡಬೇಕಾಗಿತ್ತು. ಆದರೆ, ಅಲ್ಲಿದ್ದ ಸಿಬ್ಬಂದಿ ರಿಬ್ಬನ್ ಕತ್ತರಿಸಲು ಕತ್ತರಿ ತೆಗೆದ ತಕ್ಷಣ ಸೇತುವೆಯು ಅಧಿಕಾರಿಗಳ ಭಾರವನ್ನು ತಡೆಯಲಾಗದೆ ಕುಸಿದು ಬಿದ್ದಿದೆ.

ಇದನ್ನೂ ಓದಿ: Atal Bridge: ಗುಜರಾತ್​​ನಲ್ಲಿ ಮೋದಿಯಿಂದ ಇಂದು ಅಟಲ್ ಸೇತುವೆ ಲೋಕಾರ್ಪಣೆ; ಇದರ ವಿಶೇಷತೆಗಳೇನು ಗೊತ್ತಾ?

ತಕ್ಷಣ ಆ ಸೇತುವೆಯನ್ನು ಉದ್ಘಾಟಿಸಲು ಬಂದಿದ್ದ ಮಹಿಳಾ ಅಧಿಕಾರಿಯು ಸಹಾಯ ಕೋರಿ ಆ ಸೇತುವೆಯಿಂದ ಕೆಳಗೆ ಜಿಗಿಯಲು ಸಿದ್ಧವಾಗಿರುವುದನ್ನು ವೈರಲ್ ಆಗಿರುವ ವಿಡಿಯೋದಲ್ಲಿ ನೋಡಬಹುದು. ತಕ್ಷಣ ಭದ್ರತಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಮಹಿಳಾ ಅಧಿಕಾರಿಯನ್ನು ಕುಸಿಯುತ್ತಿದ್ದ ಸೇತುವೆಯಿಂದ ರಕ್ಷಿಸಿದ್ದಾರೆ.

ಅಧಿಕೃತ ನಿಯೋಗದ ಉಳಿದ ಸದಸ್ಯರು ಕೂಡ ಸೇತುವೆಯಿಂದ ಕೆಳಗೆ ಜೋತಾಡತೊಡಗಿದರು. ಆದರೆ ಅದೃಷ್ಟವಶಾತ್ ಅವರು ನೆಲಕ್ಕೆ ಬೀಳಲಿಲ್ಲ. ಸಿಕ್ಕಿಬಿದ್ದ ಅಧಿಕಾರಿಗಳಿಗೆ ಸಹಾಯ ಮಾಡಲು ಇತರರು ತಕ್ಷಣವೇ ಧಾವಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಉದ್ಘಾಟನೆಗೆ ಸಿದ್ಧವಾಗಿದ್ದ ಸೇತುವೆ ಕುಸಿದು ಎರಡು ತುಂಡಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ