AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

China Map Controversy: ಭಾರತ ಹೊರತುಪಡಿಸಿ ಚೀನಾದ ಹೊಸ ನಕ್ಷೆಯನ್ನು ತಿರಸ್ಕರಿಸಿದ ದೇಶಗಳಿವು

ಚೀನಾದ ಹೊಸ ನಕ್ಷೆಯು ಭಾರತವನ್ನು ಮಾತ್ರವಲ್ಲದೆ ಇತರ ಹಲವು ದೇಶಗಳನ್ನೂ ಕೆರಳಿಸಿದೆ. ಭಾರತದೊಂದಿಗೆ, ಫಿಲಿಪೈನ್ಸ್, ಮಲೇಷ್ಯಾ, ವಿಯೆಟ್ನಾಂ ಮತ್ತು ತೈವಾನ್ ಸರ್ಕಾರಗಳು ಗುರುವಾರ ಚೀನಾದ ಹೊಸ ರಾಷ್ಟ್ರೀಯ ನಕ್ಷೆಯನ್ನು ತಿರಸ್ಕರಿಸಿವೆ. ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಪ್ರದೇಶವನ್ನು ತಮ್ಮದೆಂದು ಚೀನಾದ ಸ್ಟ್ಯಾಂಡರ್ಡ್ ಮ್ಯಾಪ್​ನಲ್ಲಿ ಪ್ರಸ್ತಾಪಿಸಿರುವ ಬಗ್ಗೆ ಭಾರತ ಮಂಗಳವಾರ ತೀವ್ರ ಪ್ರತಿಭಟನೆಯನ್ನು ದಾಖಲಿಸಿದೆ.

China Map Controversy: ಭಾರತ ಹೊರತುಪಡಿಸಿ ಚೀನಾದ ಹೊಸ ನಕ್ಷೆಯನ್ನು ತಿರಸ್ಕರಿಸಿದ ದೇಶಗಳಿವು
ಚೀನಾ
ನಯನಾ ರಾಜೀವ್
|

Updated on: Sep 01, 2023 | 12:42 PM

Share

ಚೀನಾ(China)ದ ಹೊಸ ನಕ್ಷೆ(Map)ಯು ಭಾರತವನ್ನು ಮಾತ್ರವಲ್ಲದೆ ಇತರ ಹಲವು ದೇಶಗಳನ್ನೂ ಕೆರಳಿಸಿದೆ. ಭಾರತದೊಂದಿಗೆ, ಫಿಲಿಪೈನ್ಸ್, ಮಲೇಷ್ಯಾ, ವಿಯೆಟ್ನಾಂ ಮತ್ತು ತೈವಾನ್ ಸರ್ಕಾರಗಳು ಗುರುವಾರ ಚೀನಾದ ಹೊಸ ರಾಷ್ಟ್ರೀಯ ನಕ್ಷೆಯನ್ನು ತಿರಸ್ಕರಿಸಿವೆ. ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಪ್ರದೇಶವನ್ನು ತಮ್ಮದೆಂದು ಚೀನಾದ ಸ್ಟ್ಯಾಂಡರ್ಡ್ ಮ್ಯಾಪ್​ನಲ್ಲಿ ಪ್ರಸ್ತಾಪಿಸಿರುವ ಬಗ್ಗೆ ಭಾರತ ಮಂಗಳವಾರ ತೀವ್ರ ಪ್ರತಿಭಟನೆಯನ್ನು ದಾಖಲಿಸಿದೆ.

ಚೀನಾದ ನೈಸರ್ಗಿಕ ಸಂಪನ್ಮೂಲಗಳ ಸಚಿವಾಲಯವು ಆಗಸ್ಟ್ 28 ರಂದು ವಿವಾದಾತ್ಮಕ ನಕ್ಷೆಯನ್ನು ಬಿಡುಗಡೆ ಮಾಡಿತು. ಚೀನಾದ ಹೊಸ ಅಧಿಕೃತ ನಕ್ಷೆಯು ಸ್ಪ್ರಾಟ್ಲಿ ಮತ್ತು ಪ್ಯಾರಾಸೆಲ್ ದ್ವೀಪಗಳ ಮೇಲಿನ ತನ್ನ ಸಾರ್ವಭೌಮತ್ವವನ್ನು ಮತ್ತು ಅದರ ನೀರಿನ ಮೇಲಿನ ನ್ಯಾಯವ್ಯಾಪ್ತಿಯನ್ನು ಉಲ್ಲಂಘಿಸುತ್ತದೆ ಎಂದು ವಿಯೆಟ್ನಾಂ ಹೇಳಿಕೊಂಡಿದೆ.

ಭಾರತದ ಗಡಿಯಲ್ಲಿ ಸದಾ ತಗಾದೆ ತೆಗೆಯುತ್ತಿರುವ ಚೀನಾ ಹೊಸ ಮ್ಯಾಪ್​ನಲ್ಲಿ ಭಾರತದ ಅರುಣಾಚಲಪ್ರದೇಶ ಹಾಗೂ ವಿವಾದಿತ ಅಕ್ಸಾಯ್ ಚಿನ್ ಪ್ರದೇಶವನ್ನು ತನ್ನದೆಂಬಂತೆ ಬಿಂಬಿಸಿತ್ತು. ಚೀನಾದ ಈ ನಡೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ರಾಜಕೀಯ ಸಂಚಲನ ಮೂಡಿಸಿದೆ. ಚೀನಾ ಅತಿಕ್ರಮಣವಾಗಲಿ ಅಥವಾ ಭಾರತದ ಭೂಭಾಗವನ್ನು ತನ್ನದೆಂದು ಹೇಳಿಕೊಂಡಿರುವುದು ಇದೇ ಮೊದಲ ಸಲವಲ್ಲ,. ಪ್ರತಿ ಬಾರಿಯೂ ಭಾರತ ಇದಕ್ಕೆ ಸೂಕ್ತ ರೀತಿಯಲ್ಲಿ ಪ್ರತಿರೋಧ ತೋರುತ್ತಿದೆ.

ಮತ್ತಷ್ಟು ಓದಿ: ಚೀನಾದ ಹೊಸ ಮ್ಯಾಪ್​​ನಲ್ಲಿ ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಸೇರ್ಪಡೆ

ಕೆಲವು ತಿಂಗಳುಗಳ ಹಿಂದೆ ತೈವಾನ್ ಹಾಗೂ ದಕ್ಷಿಣ ಸಮುದ್ರವು ತನ್ನದೆಂದು ಹೊಸ ಭೂಪಟವನ್ನು ಸಿದ್ಧಪಡಿಸಿತ್ತು, 1962ರ ಯುದ್ಧದ ಸಮಯದಲ್ಲಿ ಅಕ್ಸಾಯ್ ಚಿನ್ ಪ್ರದೇಶವನ್ನು ಚೀನಾ ತನ್ನದೆಂದು ಬಿಂಬಿಸಿಕೊಂಡಿತ್ತು. ಇದಲ್ಲದೆ ಅರುಣಾಚಲ ಪ್ರದೇಶವನ್ನು ಕೂಡ ತನ್ನದೆಂದು ಹೇಳಿತ್ತು.

ಈ ನಡೆಯಿಂದಾಗಿ ವಿಯೆಟ್ನಾಂ, ಫಿಲಿಪೈನ್ಸ್, ಮಲೇಷ್ಯಾ, ಬ್ರೂನಿ ಮತ್ತು ತೈವಾನ್ ದೇಶಗಳಿಂದಲೂ ಚೀನಾ ವಿರೋಧ ಎದುರಿಸುತ್ತಿದೆ. ಫಿಲಿಪೈನ್ಸ್​ ಚೀನಾಗೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲು ಹಾಗೂ ಅಂತಾರಾಷ್ಟ್ರೀಯ ಕಾನೂನಿನಡಿಯಲ್ಲಿ ತನ್ನ ಬಾಧ್ಯತೆಗಳಿಗೆ ಬದ್ಧವಾಗಿರಲು ಕರೆ ನೀಡಿತು.

ಚೀನಾದ ಯು ಆಕಾರದ ರೇಖೆಯು ಅದರ ಹೈವಾನ್ ದ್ವೀಪದ ದಕ್ಷಿಣಕ್ಕೆ 1500 ಕಿ.ಮೀ ಸಾಗುತ್ತದೆ, ಮತ್ತು ವಿಯೆಟ್ನಾಂ, ಫಿಲಿಪೈನ್ಸ್​, ಮಲೇಷ್ಯಾ, ಬ್ರೂನಿ ಹಾಗೂ ಇಂಡೋನೇಷ್ಯಾದ ವಿಶೇಷ ಆರ್ಥಿಕ ವಲಯದ ಮೂಲಕ ಬೇರ್ಪಡುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು