AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವುಹಾನ್ ಕೊರೊನಾಗಿಂತಲೂ 10 ಪಟ್ಟು ವೇಗವಾಗಿ ಹರಡುತ್ತೆ ಈ ಕೊರೊನಾ ಕ್ರಿಮಿ!

ದೆಹಲಿ: ಕೊರೊನಾ ಆರ್ಭಟದಿಂದ ಪ್ರಪಂಚದಾದ್ಯಂತ ತತ್ತರಿಸಿ ಹೋಗಿರುವ ಜನರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಮಲೇಷ್ಯಾ ದೇಶದಲ್ಲಿ ಹೊಸ ಪ್ರಬೇಧದ ಕೊರೊನಾ ವೈರಸ್ ಪತ್ತೆ ಹಚ್ಚಲಾಗಿದ್ದು ಇದು ವುಹಾನ್ ವೈರಸ್​ಗಿಂತಲೂ ಹತ್ತು ಪಟ್ಟು ವೇಗವಾಗಿ ಹರಡುತ್ತೆ ಎಂದು ತಿಳಿದುಬಂದಿದೆ. ಈ ಹೊಸ ಪ್ರಭೇದದ ಕೊರೊನಾ ವೈರಸ್​ ಈ ಮೊದಲು ಬೇರೆಡೆ ಕೂಡ ಪತ್ತೆಯಾಗಿತ್ತು. ಆದರೆ, ಇದರ ಬಗ್ಗೆ ಆಗ ಹೆಚ್ಚು ಸಂಶೋಧನೆ ನಡೆಸಲಾಗಿರಲಿಲ್ಲ. ಆದರೆ ಇದೀಗ, ಈ ಪ್ರಭೇದದ ಬಗ್ಗೆ ಮಾಹಿತಿ ಲಭ್ಯವಾಗಿದೆ. D614G ಎಂದು ಕರೆಯಲಾಗುವ […]

ವುಹಾನ್ ಕೊರೊನಾಗಿಂತಲೂ 10 ಪಟ್ಟು ವೇಗವಾಗಿ ಹರಡುತ್ತೆ ಈ ಕೊರೊನಾ ಕ್ರಿಮಿ!
ಪ್ರಾತಿನಿಧಿಕ ಚಿತ್ರ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 17, 2020 | 11:59 AM

Share

ದೆಹಲಿ: ಕೊರೊನಾ ಆರ್ಭಟದಿಂದ ಪ್ರಪಂಚದಾದ್ಯಂತ ತತ್ತರಿಸಿ ಹೋಗಿರುವ ಜನರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಮಲೇಷ್ಯಾ ದೇಶದಲ್ಲಿ ಹೊಸ ಪ್ರಬೇಧದ ಕೊರೊನಾ ವೈರಸ್ ಪತ್ತೆ ಹಚ್ಚಲಾಗಿದ್ದು ಇದು ವುಹಾನ್ ವೈರಸ್​ಗಿಂತಲೂ ಹತ್ತು ಪಟ್ಟು ವೇಗವಾಗಿ ಹರಡುತ್ತೆ ಎಂದು ತಿಳಿದುಬಂದಿದೆ.

ಈ ಹೊಸ ಪ್ರಭೇದದ ಕೊರೊನಾ ವೈರಸ್​ ಈ ಮೊದಲು ಬೇರೆಡೆ ಕೂಡ ಪತ್ತೆಯಾಗಿತ್ತು. ಆದರೆ, ಇದರ ಬಗ್ಗೆ ಆಗ ಹೆಚ್ಚು ಸಂಶೋಧನೆ ನಡೆಸಲಾಗಿರಲಿಲ್ಲ. ಆದರೆ ಇದೀಗ, ಈ ಪ್ರಭೇದದ ಬಗ್ಗೆ ಮಾಹಿತಿ ಲಭ್ಯವಾಗಿದೆ.

D614G ಎಂದು ಕರೆಯಲಾಗುವ ಈ ಕೊರೊನಾ ವೈರಸ್ ಪ್ರಭೇದವನ್ನ ಭಾರತದಿಂದ ವಾಪಸ್ ಆದ ಮೂವರಲ್ಲಿ ಕಂಡು ಬಂದಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ, ಫಿಲಿಪೈನ್ಸ್​ನಿಂದ ಬಂದ ವ್ಯಕ್ತಿಗಳಲ್ಲೂ ಈ ಪ್ರಭೇದದ ವೈರಸ್ ಪತ್ತೆ‌ಯಾಗಿದೆಯಂತೆ.

ಹೊಸ ಪ್ರಭೇದದ ಕೊರೊನ ವೈರಸ್ ನಿಂದ ಕೊರೊನಾ ವೇಗವಾಗಿ ಹರಡುತ್ತೆ ಎಂದ ಅಮೆರಿಕಾದ ಪ್ರಮುಖ ಸಾಂಕ್ರಾಮಿಕ ರೋಗ ತಜ್ಞ ಡಾಕ್ಟರ್ ಅಂಥೋನಿ ಫೌಸಿ ಹೇಳಿದ್ದಾರೆ. ಈ ಹೊಸ ರೂಪಾಂತರದ ವೈರಸ್ ಯೂರೋಪ್ ಮತ್ತು ಆಮೆರಿಕಾದಲ್ಲಿ ಹೆಚ್ಚಾಗಿ ಪತ್ತೆಯಾಗುತ್ತಿದ್ದರೂ ಸದ್ಯಕ್ಕೆ ಇದರಿಂದ ಯಾವುದೇ ಗಂಭೀರ ಸಮಸ್ಯೆ ಎದುರಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಸಹ ಮಾಹಿತಿ ನೀಡಿದೆ.

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!