AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್​ನಲ್ಲಿ ಕೊರೊನಾ ಅವತಾರ್​ 2 ಮಧ್ಯೆಯೇ.. ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೊನಾವತಾರ ಪತ್ತೆ!

ವೈರಸ್​ ಮತ್ತೊಂದು ರೂಪಾಂತರ ಪಡೆದಿದ್ದು ಈ ಹೊಸ ಪ್ರಭೇದ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿದೆ. ಅಂದ ಹಾಗೆ, ಈ ಹೊಸ ಪ್ರಭೇದ ಬ್ರಿಟನ್​ ಭೂತಕ್ಕಿಂತಲೂ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ.

ಬ್ರಿಟನ್​ನಲ್ಲಿ ಕೊರೊನಾ ಅವತಾರ್​ 2 ಮಧ್ಯೆಯೇ.. ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೊನಾವತಾರ ಪತ್ತೆ!
ಸಾಂದರ್ಭಿಕ ಚಿತ್ರ
KUSHAL V
| Updated By: ಸಾಧು ಶ್ರೀನಾಥ್​|

Updated on: Dec 24, 2020 | 11:23 AM

Share

ಇಷ್ಟು ತಿಂಗಳು ಮಾನವಕುಲವನ್ನು ಬೆಚ್ಚಿಬೀಳಿಸಿದ್ದ ಕೊರೊನಾ ಮಹಾಮಾರಿ ಇದೀಗ ಹೊಸ ಅವತಾರಗಳನ್ನು ತಾಳುತ್ತಿದೆ. ಹೆಮ್ಮಾರಿಯ ರೌದ್ರನರ್ತನದ ಸೆಕೆಂಡ್​ ಇನ್ನಿಂಗ್ಸ್​ ಈಗಷ್ಟೇ ಶುರುವಾಗಿದ್ದು ಇಂಗ್ಲೆಂಡ್​ನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಕೊರೊನಾದ ಮತ್ತೊಂದು ಪ್ರಭೇದ ಪತ್ತೆಯಾಗಿದೆ. ಕೊರೊನಾದ ಹೊಸ ರೂಪಾಂತರವಾದ ಈ ಬ್ರಿಟನ್​ ಭೂತ ಅತಿ ವೇಗವಾಗಿ ಸೋಂಕು ಹರಡುವ ಸಾಮರ್ಥ್ಯ ಹೊಂದಿದ್ದು ಇದೀಗ ಜಗತ್ತೇ ನಲುಗಿ ಹೋಗಿದೆ.

ಆದರೆ ಈಗ, ವೈರಸ್​ ಮತ್ತೊಂದು ರೂಪಾಂತರ ಪಡೆದಿದ್ದು ಈ ಹೊಸ ಪ್ರಭೇದ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿದೆ. ಅಂದ ಹಾಗೆ, ಈ ಹೊಸ ಪ್ರಭೇದ ಬ್ರಿಟನ್​ ಭೂತಕ್ಕಿಂತಲೂ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ.

ಸದ್ಯ, ಕೊರೊನಾದ ಈ ಹೊಸ ಅವತಾರ ದಕ್ಷಿಣ ಆಫ್ರಿಕಾದಿಂದ ಬೇರೆ ದೇಶಗಳಿಗೆ ಹರಡಿದೆ ಅನ್ನೋ ಮಾಹಿತಿ ಲಭ್ಯವಾಗಿದ್ದು ಇದೀಗ ಬ್ರಿಟನ್​ನಲ್ಲೂ ಸಹ ಇದು ಪತ್ತೆಯಾಗಿದೆ. ಹಾಗಾಗಿ, ಇಡೀ ವಿಶ್ವವನ್ನೇ ಆಳಿದ ಬ್ರಿಟನ್​ ಸಾಮ್ರಾಜ್ಯ ಒಂದೇ ವೈರಸ್​ನ​ ಎರಡು ರೂಪಾಂತರಗಳ ಡಬಲ್​ ದಾಳಿ ಎದುರಿಸುತ್ತಿದೆ.

ಅಂದ ಹಾಗೆ, ದಕ್ಷಿಣ ಆಫ್ರಿಕಾದ ಆರೋಗ್ಯ ಇಲಾಖೆ ಕಳೆದ ವಾರವಷ್ಟೇ ಈ ಹೊಸ ರೂಪಾಂತರದ ಬಗ್ಗೆ ವರದಿಮಾಡಿದೆ. ಆಫ್ರಿಕಾ ಖಂಡದ ಈ ರಾಷ್ಟ್ರದಲ್ಲಿರುವ ಜನರ ಆನುವಂಶಿಕ ವೈವಿಧ್ಯತೆಯಲ್ಲಿ ಇದು ಹುಟ್ಟಿದ್ದು ಬ್ರಿಟನ್​ನಲ್ಲಿ ಪತ್ತೆಯಾಗಿರುವ ಪ್ರಭೇದಕ್ಕಿಂತ ಮತ್ತಷ್ಟು ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ. ಸದ್ಯ, ತಜ್ಞರ ಪ್ರಕಾರ, ಎರಡೂ ಪ್ರಭೇದಗಳು ಒಂದೇ ರೂಪಾಂತರದ ಅಂಶ (N501Y) ಹೊಂದಿದ್ದು ಈ ರೂಪಾಂತರಗಳ ಬಗ್ಗೆ ಮತ್ತಷ್ಟು ಸಂಶೋಧನೆ ನಡೆಯುತ್ತಿದೆ.

ಕೊರೊನಾ ಎರಡನೇ ಅಲೆ ಭೀತಿ ಬೆನ್ನಲ್ಲೇ ರಾಜ್ಯದಲ್ಲಿ ಇಳಿಮುಖವಾಯ್ತು ಕೊವಿಡ್ ಪ್ರಕರಣ

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ