AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಓರ್ಲಿಯನ್ಸ್‌ನಲ್ಲಿ ಭಯೋತ್ಪಾದಕ ದಾಳಿ; ಜನಸಂದಣಿಯ ಮೇಲೆ ವಾಹನ ನುಗ್ಗಿ 10 ಸಾವು, 35 ಜನರಿಗೆ ಗಾಯ

ಅಮೆರಿಕದ ನ್ಯೂ ಓರ್ಲಿಯನ್ಸ್​ನಲ್ಲಿ ಜನರ ಮೇಲೆ ವಾಹನ ನುಗ್ಗಿ 10 ಜನ ಸಾವನ್ನಪ್ಪಿದ್ದಾರೆ, 35ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಎಫ್‌ಬಿಐ ಸ್ಫೋಟಕ ಸಾಧನವನ್ನು ಕಂಡುಹಿಡಿದಿದೆ. ಇದು ಭಯೋತ್ಪಾದನಾ ದಾಳಿ ಎಂದು ಆರೋಪಿಸಿದೆ. ದಕ್ಷಿಣ ಯುಎಸ್ ನಗರವಾದ ನ್ಯೂ ಓರ್ಲಿಯನ್ಸ್‌ನಲ್ಲಿ ಹೊಸ ವರ್ಷವನ್ನು ಆಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ನ್ಯೂ ಓರ್ಲಿಯನ್ಸ್‌ನಲ್ಲಿ ಭಯೋತ್ಪಾದಕ ದಾಳಿ; ಜನಸಂದಣಿಯ ಮೇಲೆ ವಾಹನ ನುಗ್ಗಿ 10 ಸಾವು, 35 ಜನರಿಗೆ ಗಾಯ
New Orleans Attack
ಸುಷ್ಮಾ ಚಕ್ರೆ
|

Updated on:Jan 01, 2025 | 10:48 PM

Share

ನವದೆಹಲಿ: ಯುನೈಟೆಡ್ ಸ್ಟೇಟ್ಸ್‌ನ ನ್ಯೂ ಓರ್ಲಿಯನ್ಸ್‌ನಲ್ಲಿ ನಡೆದ ಸಾಮೂಹಿಕ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಹಾಗೂ 35 ಮಂದಿ ಗಾಯಗೊಂಡಿದ್ದಾರೆ. ಬೌರ್ಬನ್ ಸ್ಟ್ರೀಟ್‌ನಲ್ಲಿ ವಾಹನವೊಂದು ಜನಸಮೂಹಕ್ಕೆ ಡಿಕ್ಕಿ ಹೊಡೆಯಿತು. ಆ ವೇಳೆ ಚಾಲಕ ಪಿಕಪ್ ಟ್ರಕ್‌ನಿಂದ ಕೆಳಗಿಳಿದು ಗುಂಡು ಹಾರಿಸಲು ಪ್ರಾರಂಭಿಸಿದ. ಲೂಯಿಸಿಯಾನ ಗವರ್ನರ್ ಜೆಫ್ ಲ್ಯಾಂಡ್ರಿ ಈ ಘಟನೆಯನ್ನು ಭಯಾನಕ ಹಿಂಸಾಚಾರದ ಕೃತ್ಯ ಎಂದು ಕರೆದಿದ್ದಾರೆ. ಈ ಪ್ರದೇಶದಲ್ಲಿ ಓಡಾಡದಂತೆ ಅಧಿಕಾರಿಗಳು ಜನರಿಗೆ ಸೂಚಿಸಿದ್ದಾರೆ. ಈ ಘಟನೆಯ ತನಿಖೆಯನ್ನು ಎಫ್‌ಬಿಐ ವಹಿಸಿಕೊಂಡಿದೆ. ದಾಳಿಯ ಸ್ಥಳದಿಂದ ಅಧಿಕಾರಿಗಳು ಲಾಂಗ್ ಗನ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ದಕ್ಷಿಣ ಯುಎಸ್ ನಗರವಾದ ನ್ಯೂ ಓರ್ಲಿಯನ್ಸ್‌ನಲ್ಲಿ ಹೊಸ ವರ್ಷವನ್ನು ಆಚರಿಸುತ್ತಿದ್ದ ಜನರ ಮೇಲೆ ಕಾರೊಂದು ಡಿಕ್ಕಿ ಹೊಡೆದ ನಂತರ 10 ಜನರು ಸಾವನ್ನಪ್ಪಿದ್ದಾರೆ ಮತ್ತು 35 ಜನರು ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ನಗರದ ಫ್ರೆಂಚ್ ಕ್ವಾರ್ಟರ್‌ನಲ್ಲಿರುವ ಬೌರ್ಬನ್ ಸ್ಟ್ರೀಟ್‌ನಲ್ಲಿ ವಾಹನವೊಂದು ಜನಸಂದಣಿಯ ಮೇಲೆ ನುಗ್ಗಿತು.

ಇದನ್ನೂ ಓದಿ: ಮಾಸ್ಕೋ ಬಾಂಬ್‌ ಸ್ಫೋಟದಲ್ಲಿ ರಷ್ಯಾದ ಪರಮಾಣು ರಕ್ಷಣಾ ಪಡೆ ಮುಖ್ಯಸ್ಥ ಸಾವು

ಈ ದಾಳಿ ಉದ್ದೇಶಪೂರ್ವಕವಾಗಿತ್ತು ಮತ್ತು ಶಂಕಿತ ಭದ್ರತಾ ಅಧಿಕಾರಿಗಳ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ, ನ್ಯೂ ಓರ್ಲಿಯನ್ಸ್ ಮೇಯರ್ ಲಾಟೋಯಾ ಕ್ಯಾಂಟ್ರೆಲ್ ಘಟನೆಯನ್ನು “ಭಯೋತ್ಪಾದಕ ದಾಳಿ” ಎಂದು ವಿವರಿಸಿದರು. ರೋಮಾಂಚಕ ಬಾರ್‌ಗಳು ಮತ್ತು ಕ್ಲಬ್‌ಗಳಿಗೆ ಹೆಸರುವಾಸಿಯಾದ ಬೌರ್ಬನ್ ಸ್ಟ್ರೀಟ್, 2025ರ ಆಗಮನವನ್ನು ಆಚರಿಸಲು ಹೊಸ ವರ್ಷದ ಸಂಭ್ರಮದಿಂದ ತುಂಬಿತ್ತು. ಈ ವೇಳೆ ಈ ದುರ್ಘಟನೆ ನಡೆದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:48 pm, Wed, 1 January 25

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ