AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಓರ್ಲಿಯನ್ಸ್‌ನಲ್ಲಿ ಭಯೋತ್ಪಾದಕ ದಾಳಿ; ಜನಸಂದಣಿಯ ಮೇಲೆ ವಾಹನ ನುಗ್ಗಿ 10 ಸಾವು, 35 ಜನರಿಗೆ ಗಾಯ

ಅಮೆರಿಕದ ನ್ಯೂ ಓರ್ಲಿಯನ್ಸ್​ನಲ್ಲಿ ಜನರ ಮೇಲೆ ವಾಹನ ನುಗ್ಗಿ 10 ಜನ ಸಾವನ್ನಪ್ಪಿದ್ದಾರೆ, 35ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಎಫ್‌ಬಿಐ ಸ್ಫೋಟಕ ಸಾಧನವನ್ನು ಕಂಡುಹಿಡಿದಿದೆ. ಇದು ಭಯೋತ್ಪಾದನಾ ದಾಳಿ ಎಂದು ಆರೋಪಿಸಿದೆ. ದಕ್ಷಿಣ ಯುಎಸ್ ನಗರವಾದ ನ್ಯೂ ಓರ್ಲಿಯನ್ಸ್‌ನಲ್ಲಿ ಹೊಸ ವರ್ಷವನ್ನು ಆಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ನ್ಯೂ ಓರ್ಲಿಯನ್ಸ್‌ನಲ್ಲಿ ಭಯೋತ್ಪಾದಕ ದಾಳಿ; ಜನಸಂದಣಿಯ ಮೇಲೆ ವಾಹನ ನುಗ್ಗಿ 10 ಸಾವು, 35 ಜನರಿಗೆ ಗಾಯ
New Orleans Attack
ಸುಷ್ಮಾ ಚಕ್ರೆ
|

Updated on:Jan 01, 2025 | 10:48 PM

Share

ನವದೆಹಲಿ: ಯುನೈಟೆಡ್ ಸ್ಟೇಟ್ಸ್‌ನ ನ್ಯೂ ಓರ್ಲಿಯನ್ಸ್‌ನಲ್ಲಿ ನಡೆದ ಸಾಮೂಹಿಕ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಹಾಗೂ 35 ಮಂದಿ ಗಾಯಗೊಂಡಿದ್ದಾರೆ. ಬೌರ್ಬನ್ ಸ್ಟ್ರೀಟ್‌ನಲ್ಲಿ ವಾಹನವೊಂದು ಜನಸಮೂಹಕ್ಕೆ ಡಿಕ್ಕಿ ಹೊಡೆಯಿತು. ಆ ವೇಳೆ ಚಾಲಕ ಪಿಕಪ್ ಟ್ರಕ್‌ನಿಂದ ಕೆಳಗಿಳಿದು ಗುಂಡು ಹಾರಿಸಲು ಪ್ರಾರಂಭಿಸಿದ. ಲೂಯಿಸಿಯಾನ ಗವರ್ನರ್ ಜೆಫ್ ಲ್ಯಾಂಡ್ರಿ ಈ ಘಟನೆಯನ್ನು ಭಯಾನಕ ಹಿಂಸಾಚಾರದ ಕೃತ್ಯ ಎಂದು ಕರೆದಿದ್ದಾರೆ. ಈ ಪ್ರದೇಶದಲ್ಲಿ ಓಡಾಡದಂತೆ ಅಧಿಕಾರಿಗಳು ಜನರಿಗೆ ಸೂಚಿಸಿದ್ದಾರೆ. ಈ ಘಟನೆಯ ತನಿಖೆಯನ್ನು ಎಫ್‌ಬಿಐ ವಹಿಸಿಕೊಂಡಿದೆ. ದಾಳಿಯ ಸ್ಥಳದಿಂದ ಅಧಿಕಾರಿಗಳು ಲಾಂಗ್ ಗನ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ದಕ್ಷಿಣ ಯುಎಸ್ ನಗರವಾದ ನ್ಯೂ ಓರ್ಲಿಯನ್ಸ್‌ನಲ್ಲಿ ಹೊಸ ವರ್ಷವನ್ನು ಆಚರಿಸುತ್ತಿದ್ದ ಜನರ ಮೇಲೆ ಕಾರೊಂದು ಡಿಕ್ಕಿ ಹೊಡೆದ ನಂತರ 10 ಜನರು ಸಾವನ್ನಪ್ಪಿದ್ದಾರೆ ಮತ್ತು 35 ಜನರು ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ನಗರದ ಫ್ರೆಂಚ್ ಕ್ವಾರ್ಟರ್‌ನಲ್ಲಿರುವ ಬೌರ್ಬನ್ ಸ್ಟ್ರೀಟ್‌ನಲ್ಲಿ ವಾಹನವೊಂದು ಜನಸಂದಣಿಯ ಮೇಲೆ ನುಗ್ಗಿತು.

ಇದನ್ನೂ ಓದಿ: ಮಾಸ್ಕೋ ಬಾಂಬ್‌ ಸ್ಫೋಟದಲ್ಲಿ ರಷ್ಯಾದ ಪರಮಾಣು ರಕ್ಷಣಾ ಪಡೆ ಮುಖ್ಯಸ್ಥ ಸಾವು

ಈ ದಾಳಿ ಉದ್ದೇಶಪೂರ್ವಕವಾಗಿತ್ತು ಮತ್ತು ಶಂಕಿತ ಭದ್ರತಾ ಅಧಿಕಾರಿಗಳ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ, ನ್ಯೂ ಓರ್ಲಿಯನ್ಸ್ ಮೇಯರ್ ಲಾಟೋಯಾ ಕ್ಯಾಂಟ್ರೆಲ್ ಘಟನೆಯನ್ನು “ಭಯೋತ್ಪಾದಕ ದಾಳಿ” ಎಂದು ವಿವರಿಸಿದರು. ರೋಮಾಂಚಕ ಬಾರ್‌ಗಳು ಮತ್ತು ಕ್ಲಬ್‌ಗಳಿಗೆ ಹೆಸರುವಾಸಿಯಾದ ಬೌರ್ಬನ್ ಸ್ಟ್ರೀಟ್, 2025ರ ಆಗಮನವನ್ನು ಆಚರಿಸಲು ಹೊಸ ವರ್ಷದ ಸಂಭ್ರಮದಿಂದ ತುಂಬಿತ್ತು. ಈ ವೇಳೆ ಈ ದುರ್ಘಟನೆ ನಡೆದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:48 pm, Wed, 1 January 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!