AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಅಂದಂಗಾಯ್ತು.. ಕೊರೊನಾ ನಾಶವಾಗುವ ಮುನ್ನವೇ ಬ್ರಿಟನ್‌ನಲ್ಲಿ ಹೊಸ ಪ್ರಭೇದದ ಆತಂಕ

ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಅನ್ನೋ ರೀತಿ ಕೊರೊನಾ ಮುಗಿಯುವ ಮುನ್ನವೇ ಹೊಸ ಪ್ರಭೇದದ ಕೊವಿಡ್ ವೈರಸ್ ಬ್ರಿಟನ್‌ನಲ್ಲಿ ನಿಯಂತ್ರಣ ಮೀರಿ ವ್ಯಾಪಿಸುತ್ತಿದೆ. ಈ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ WHO ಸೂಚಿಸಿದೆ.

ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಅಂದಂಗಾಯ್ತು.. ಕೊರೊನಾ ನಾಶವಾಗುವ ಮುನ್ನವೇ ಬ್ರಿಟನ್‌ನಲ್ಲಿ ಹೊಸ ಪ್ರಭೇದದ ಆತಂಕ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on:Dec 21, 2020 | 8:12 AM

Share

ದೆಹಲಿ: ವಿಶ್ವಕ್ಕೆ ಮಾರಕವಾಗಿರುವ ಕೊರೊನಾ ವೈರಸ್​ಗೆ ಇನ್ನೇನು ಲಸಿಕೆ ಕಂಡು ಹಿಡಿದಿದ್ದು ಅದರ ನಾಶವಾಗುತ್ತೇ ಎಂಬ ಖುಷಿ ಮೊಗದಲ್ಲಿ ಮೂಡುವ ಮುನ್ನವೇ ಮತ್ತೊಂದು ಆತಂಕ ಎದುರಾಗಿದೆ. ರೂಪಾಂತರಗೊಂಡ ಮಹಾಮಾರಿ ಕೊರೊನಾ ವೈರಸ್​ನ ಹೊಸ ಪ್ರಭೇದ ಬ್ರಿಟನ್‌ನಲ್ಲಿ ಕಾಣಿಸಿಕೊಂಡಿದ್ದು ಅದು ನಿಯಂತ್ರಣ ಮೀರಿ ವ್ಯಾಪಿಸುತ್ತಿರುವುದು ಆತಂಕ ಹೆಚ್ಚು ಮಾಡಿದೆ.

ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಅನ್ನೋ ರೀತಿ ಕೊರೊನಾ ಮುಗಿಯುವ ಮುನ್ನವೇ ಹೊಸ ಪ್ರಭೇದದ ಕೊವಿಡ್ ವೈರಸ್ ಬ್ರಿಟನ್‌ನಲ್ಲಿ ನಿಯಂತ್ರಣ ಮೀರಿ ವ್ಯಾಪಿಸುತ್ತಿದೆ. ಈ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ WHO ಸೂಚಿಸಿದೆ.

ಲಂಡನ್‌ನಲ್ಲಿ ಲಾಕ್‌ಡೌನ್: ಆತಂಕದ ವಿಷಯ ಅಂದ್ರೆ ಕೇವಲ ಬ್ರಿಟನ್‌ ಅಲ್ಲದೆ ದಕ್ಷಿಣ ಆಫ್ರಿಕಾದಲ್ಲೂ ಹೊಸ ಪ್ರಭೇದದ ಸೋಂಕು ಹೆಚ್ಚಾಗಿದೆ. ಹೀಗಾಗಿ ದಕ್ಷಿಣ ಆಫ್ರಿಕಾ, ಬ್ರಿಟನ್ ವಿಮಾನಗಳಿಗೆ ನೆದರ್ಲೆಂಡ್, ಬೆಲ್ಜಿಯಂ ನಿಷೇಧ ವಿಧಿಸಿದೆ. ಇನ್ನು ಜರ್ಮನಿ, ಇಟಲಿ ಕೂಡ ವಿಮಾನ ನಿಷೇಧ ವಿಧಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ.

ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಕ್ರಿಸ್‌ಮಸ್ ಆಚರಣೆ ಮೇಲೆ ನಿರ್ಬಂಧ ವಿಧಿಸಿಲು ಬ್ರಿಟನ್ ಸರ್ಕಾರ ಮುಂದಾಗಿದೆ. ಜೊತೆಗೆ ಲಂಡನ್‌ನಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ಹೊಸ ಪ್ರಭೇದದ ವೈರಸ್ ಶೇ.70ರಷ್ಟು ವೇಗದಲ್ಲಿ ಹರಡ್ತಿದೆ. ಈ ಸೋಂಕು ಪ್ರಾಣ ತೆಗೆಯುತ್ತೆ ಎಂಬುದಕ್ಕೆ ಪುರಾವೆಗಳಿಲ್ಲ. ಈ ಬಗ್ಗೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿಕೆ ನೀಡಿದ್ದಾರೆ.

ಮುಂಜಾಗ್ರತಾ ಕ್ರಮಕೈಗೊಳ್ಳಲು ಭಾರತದಲ್ಲಿ ಸಭೆ: ಬ್ರಿಟನ್‌ನಲ್ಲಿ ಹೊಸ ಪ್ರಭೇದದ ಕೊರೊನಾ ಆರ್ಭಟ ಹಿನ್ನೆಲೆಯಲ್ಲಿ ಭಾರತದಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಲು ಇಂದು ಕೇಂದ್ರ ಆರೋಗ್ಯ ಇಲಾಖೆಯಿಂದ‌ ತುರ್ತು ಸಭೆ ಕರೆಯಲಾಗಿದೆ. WHOನ ಭಾರತದ ಪ್ರತಿನಿಧಿ ಡಾ.ರೊಡೆರಿಕೊ ಹೆಚ್.ಒಫ್ರಿನ್ ಕೂಡ ಸಭೆಯಲ್ಲಿ ಭಾಗಿಯಾಗಲಿದ್ದು ಹೊಸ ಪ್ರಭೇದದ ಕೊವಿಡ್ ಭಾರತ ಪ್ರವೇಶಿಸದಂತೆ ತಡೆಯುವ ಬಗ್ಗೆ ಸಮಾಲೋಚನೆ ನಡೆಸಲಾಗುತ್ತೆ.

ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳು 3.05ಲಕ್ಷ; ಚೇತರಿಕೆ ಪ್ರಮಾಣದಲ್ಲಿ ಗಣನೀಯ ಏರಿಕೆ

Published On - 8:04 am, Mon, 21 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್