AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಅಂದಂಗಾಯ್ತು.. ಕೊರೊನಾ ನಾಶವಾಗುವ ಮುನ್ನವೇ ಬ್ರಿಟನ್‌ನಲ್ಲಿ ಹೊಸ ಪ್ರಭೇದದ ಆತಂಕ

ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಅನ್ನೋ ರೀತಿ ಕೊರೊನಾ ಮುಗಿಯುವ ಮುನ್ನವೇ ಹೊಸ ಪ್ರಭೇದದ ಕೊವಿಡ್ ವೈರಸ್ ಬ್ರಿಟನ್‌ನಲ್ಲಿ ನಿಯಂತ್ರಣ ಮೀರಿ ವ್ಯಾಪಿಸುತ್ತಿದೆ. ಈ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ WHO ಸೂಚಿಸಿದೆ.

ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಅಂದಂಗಾಯ್ತು.. ಕೊರೊನಾ ನಾಶವಾಗುವ ಮುನ್ನವೇ ಬ್ರಿಟನ್‌ನಲ್ಲಿ ಹೊಸ ಪ್ರಭೇದದ ಆತಂಕ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on:Dec 21, 2020 | 8:12 AM

Share

ದೆಹಲಿ: ವಿಶ್ವಕ್ಕೆ ಮಾರಕವಾಗಿರುವ ಕೊರೊನಾ ವೈರಸ್​ಗೆ ಇನ್ನೇನು ಲಸಿಕೆ ಕಂಡು ಹಿಡಿದಿದ್ದು ಅದರ ನಾಶವಾಗುತ್ತೇ ಎಂಬ ಖುಷಿ ಮೊಗದಲ್ಲಿ ಮೂಡುವ ಮುನ್ನವೇ ಮತ್ತೊಂದು ಆತಂಕ ಎದುರಾಗಿದೆ. ರೂಪಾಂತರಗೊಂಡ ಮಹಾಮಾರಿ ಕೊರೊನಾ ವೈರಸ್​ನ ಹೊಸ ಪ್ರಭೇದ ಬ್ರಿಟನ್‌ನಲ್ಲಿ ಕಾಣಿಸಿಕೊಂಡಿದ್ದು ಅದು ನಿಯಂತ್ರಣ ಮೀರಿ ವ್ಯಾಪಿಸುತ್ತಿರುವುದು ಆತಂಕ ಹೆಚ್ಚು ಮಾಡಿದೆ.

ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಅನ್ನೋ ರೀತಿ ಕೊರೊನಾ ಮುಗಿಯುವ ಮುನ್ನವೇ ಹೊಸ ಪ್ರಭೇದದ ಕೊವಿಡ್ ವೈರಸ್ ಬ್ರಿಟನ್‌ನಲ್ಲಿ ನಿಯಂತ್ರಣ ಮೀರಿ ವ್ಯಾಪಿಸುತ್ತಿದೆ. ಈ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ WHO ಸೂಚಿಸಿದೆ.

ಲಂಡನ್‌ನಲ್ಲಿ ಲಾಕ್‌ಡೌನ್: ಆತಂಕದ ವಿಷಯ ಅಂದ್ರೆ ಕೇವಲ ಬ್ರಿಟನ್‌ ಅಲ್ಲದೆ ದಕ್ಷಿಣ ಆಫ್ರಿಕಾದಲ್ಲೂ ಹೊಸ ಪ್ರಭೇದದ ಸೋಂಕು ಹೆಚ್ಚಾಗಿದೆ. ಹೀಗಾಗಿ ದಕ್ಷಿಣ ಆಫ್ರಿಕಾ, ಬ್ರಿಟನ್ ವಿಮಾನಗಳಿಗೆ ನೆದರ್ಲೆಂಡ್, ಬೆಲ್ಜಿಯಂ ನಿಷೇಧ ವಿಧಿಸಿದೆ. ಇನ್ನು ಜರ್ಮನಿ, ಇಟಲಿ ಕೂಡ ವಿಮಾನ ನಿಷೇಧ ವಿಧಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ.

ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಕ್ರಿಸ್‌ಮಸ್ ಆಚರಣೆ ಮೇಲೆ ನಿರ್ಬಂಧ ವಿಧಿಸಿಲು ಬ್ರಿಟನ್ ಸರ್ಕಾರ ಮುಂದಾಗಿದೆ. ಜೊತೆಗೆ ಲಂಡನ್‌ನಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ಹೊಸ ಪ್ರಭೇದದ ವೈರಸ್ ಶೇ.70ರಷ್ಟು ವೇಗದಲ್ಲಿ ಹರಡ್ತಿದೆ. ಈ ಸೋಂಕು ಪ್ರಾಣ ತೆಗೆಯುತ್ತೆ ಎಂಬುದಕ್ಕೆ ಪುರಾವೆಗಳಿಲ್ಲ. ಈ ಬಗ್ಗೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿಕೆ ನೀಡಿದ್ದಾರೆ.

ಮುಂಜಾಗ್ರತಾ ಕ್ರಮಕೈಗೊಳ್ಳಲು ಭಾರತದಲ್ಲಿ ಸಭೆ: ಬ್ರಿಟನ್‌ನಲ್ಲಿ ಹೊಸ ಪ್ರಭೇದದ ಕೊರೊನಾ ಆರ್ಭಟ ಹಿನ್ನೆಲೆಯಲ್ಲಿ ಭಾರತದಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಲು ಇಂದು ಕೇಂದ್ರ ಆರೋಗ್ಯ ಇಲಾಖೆಯಿಂದ‌ ತುರ್ತು ಸಭೆ ಕರೆಯಲಾಗಿದೆ. WHOನ ಭಾರತದ ಪ್ರತಿನಿಧಿ ಡಾ.ರೊಡೆರಿಕೊ ಹೆಚ್.ಒಫ್ರಿನ್ ಕೂಡ ಸಭೆಯಲ್ಲಿ ಭಾಗಿಯಾಗಲಿದ್ದು ಹೊಸ ಪ್ರಭೇದದ ಕೊವಿಡ್ ಭಾರತ ಪ್ರವೇಶಿಸದಂತೆ ತಡೆಯುವ ಬಗ್ಗೆ ಸಮಾಲೋಚನೆ ನಡೆಸಲಾಗುತ್ತೆ.

ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳು 3.05ಲಕ್ಷ; ಚೇತರಿಕೆ ಪ್ರಮಾಣದಲ್ಲಿ ಗಣನೀಯ ಏರಿಕೆ

Published On - 8:04 am, Mon, 21 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ