AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ನ್ಯೂಸ್​9 ಜಾಗತಿಕ ಶೃಂಗಸಭೆಯ ಅಂತಿಮ ದಿನ, ಫುಟ್ಬಾಲ್ ಪಂದ್ಯ

ದೇಶದ ನಂಬರ್​1 ನ್ಯೂಸ್​ ನೆಟ್​ವರ್ಕ್​ ಟಿವಿ9 ಹಮ್ಮಿಕೊಂಡಿರುವ ನ್ಯೂಸ್​9 ಜಾಗತಿಕ ಶೃಂಗಸಭೆ ಅಂತಿಮ ಘಟ್ಟಕ್ಕೆ ಬಂದಿದೆ. ಜರ್ಮನಿಯ ಸ್ಟಟ್​ಗಾರ್ಟ್​ನಲ್ಲಿ ನಡೆಯುತ್ತಿದೆ. ಎರಡನೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ: ಜಾಗತಿಕ ಪ್ರಕಾಶಮಾನ ತಾಣದ ಒಳಗೆ ವಿಷಯದ ಕುರಿತು ಮಾತನಾಡಿದರು.

ಇಂದು ನ್ಯೂಸ್​9 ಜಾಗತಿಕ ಶೃಂಗಸಭೆಯ ಅಂತಿಮ ದಿನ, ಫುಟ್ಬಾಲ್ ಪಂದ್ಯ
ಶೃಂಗಸಭೆ
ನಯನಾ ರಾಜೀವ್
|

Updated on: Nov 23, 2024 | 9:11 AM

Share

ದೇಶದ ನಂಬರ್​1 ನ್ಯೂಸ್​ ನೆಟ್​ವರ್ಕ್​ ಟಿವಿ9 ಹಮ್ಮಿಕೊಂಡಿರುವ ನ್ಯೂಸ್​9 ಜಾಗತಿಕ ಶೃಂಗಸಭೆ ಅಂತಿಮ ಘಟ್ಟಕ್ಕೆ ಬಂದಿದೆ. ಜರ್ಮನಿಯ ಸ್ಟಟ್​ಗಾರ್ಟ್​ನಲ್ಲಿ ನಡೆಯುತ್ತಿದೆ. ಎರಡನೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ: ಜಾಗತಿಕ ಪ್ರಕಾಶಮಾನ ತಾಣದ ಒಳಗೆ ವಿಷಯದ ಕುರಿತು ಮಾತನಾಡಿದರು.

ಶೃಂಗಸಭೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ, ಇಂದಿನ ಮಾಹಿತಿ ಯುಗದಲ್ಲಿ ಭಾರತದ ಮಾಧ್ಯಮ ಸಮೂಹ ಜರ್ಮನಿ ಮತ್ತು ಜರ್ಮನಿಯ ಜನರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ ಎಂದರು. ಇದರೊಂದಿಗೆ ದೇಶ ಮತ್ತು ಜಗತ್ತಿನ ಇತರ ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ್ತು ಕಾರ್ಪೊರೇಟ್ ದಿಗ್ಗಜರು ಶೃಂಗಸಭೆಯಲ್ಲಿ ಭಾಗವಹಿಸಿದ್ದರು.

ಟಿವಿ9 ನೆಟ್‌ವರ್ಕ್ ಎಂಡಿ ಮತ್ತು ಸಿಇಒ ಬರುಣ್​ದಾಸ್ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹವಾಮಾನ ಬದಲಾವಣೆ ಮತ್ತು AI ಕುರಿತು ಅವರು ಪ್ರಮುಖ ವಿಷಯಗಳನ್ನು ಹೇಳಿದರು. ಶೃಂಗಸಭೆಯ ಎರಡನೇ ದಿನದ ಅತಿಥಿಗಳ ಆಗಮನಕ್ಕೆ ಅವರು ಕೃತಜ್ಞತೆ ವ್ಯಕ್ತಪಡಿಸಿದರು. ಮೊದಲ ದಿನ ಶೃಂಗಸಭೆಯಲ್ಲಿ ಭಾಗವಹಿಸಿದ್ದಕ್ಕಾಗಿ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಧನ್ಯವಾದ ಅರ್ಪಿಸಿದರು.

ಮತ್ತಷ್ಟು ಓದಿ: ಜರ್ಮನ್, ಸಂಸ್ಕೃತದ ನಡುವೆ ಆಳವಾದ ಸಂಬಂಧವಿದೆ: ಟಿವಿ9 ನೆಟ್​ವರ್ಕ್​ ಎಡಿಟೋರಿಯಲ್ ಡೈರೆಕ್ಟರ್ ಹೇಮಂತ್ ಶರ್ಮಾ

ಶೃಂಗಸಭೆಯ ಕೊನೆಯ ದಿನ ಇಂದು ಅಂದರೆ ಶನಿವಾರ ಶೃಂಗಸಭೆಯ ಮೂರನೇ ಮತ್ತು ಕೊನೆಯ ದಿನವಾಗಿದೆ. ಇಂದು VfB Stuttgart ಮತ್ತು VfL Bochum ನಡುವೆ ಫುಟ್ಬಾಲ್ ಪಂದ್ಯ ನಡೆಯಲಿದೆ.

ಭಾರತ-ಜರ್ಮನಿ ಕೃಷಿ ಕ್ಷೇತ್ರದಲ್ಲಿ ಪರಸ್ಪರ ಸಹಾಯ ಮಾಡಬಹುದು ಟಿವಿ9 ಆಯೋಜಿಸಿದ್ದ ಎರಡನೇ ನ್ಯೂಸ್ 9 ಜಾಗತಿಕ ಶೃಂಗಸಭೆಯಲ್ಲಿ ಜರ್ಮನಿಯ ಆಹಾರ ಮತ್ತು ಕೃಷಿ ಸಚಿವ ಸೆಮ್ ಒಜ್ಡೆಮಿರ್ ಅವರು AI ಕುರಿತು ಮಾತನಾಡಿದರು. ಈ ಮೂಲಕ ಕೃಷಿ ಕ್ಷೇತ್ರವನ್ನು ಪ್ರಗತಿಯತ್ತ ಕೊಂಡೊಯ್ಯುವ ಬಗ್ಗೆ ಮಾತನಾಡಿದರು. ಎಐಯೊಂದಿಗೆ ಭಾರತ ಮತ್ತು ಜರ್ಮನಿ ಕೃಷಿ ವಲಯದಲ್ಲಿ ಪರಸ್ಪರ ಸಹಾಯ ಮಾಡಬಹುದು ಎಂದು ಓಜ್ಡೆಮಿರ್ ಹೇಳಿದರು.

Mercedes-Benz ಇಂಡಿಯಾದ MD ಮತ್ತು CEO ಸಂತೋಷ್ ಅಯ್ಯರ್ ಕೂಡ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಡ್ರೈವಿಂಗ್ ಎ ಬಿಲಿಯನ್ ಆಸ್ಪಿರೇಷನ್ ವಿಷಯದ ಕುರಿತು ಮಾತನಾಡಿದ ಅವರು, ಭಾರತದಲ್ಲಿ ನಾವು 20 ಸಾವಿರ ಐಷಾರಾಮಿ ಕಾರುಗಳ ಮಾರಾಟದ ಅಂಕಿಅಂಶವನ್ನು ತಲುಪಿದ್ದೇವೆ. ಭಾರತದಲ್ಲಿ ಐಷಾರಾಮಿ ಜೀವನಶೈಲಿಯಲ್ಲಿ ದೊಡ್ಡ ಬದಲಾವಣೆಯಾಗಿದೆ. ತಮ್ಮ ಭಾಷಣದಲ್ಲಿ ಅಯ್ಯರ್ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಒತ್ತು ನೀಡಿದರು.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಶೃಂಗಸಭೆಯಲ್ಲಿ ಪಾಲ್ಗೊಂಡರು. ತಮ್ಮ ಭಾಷಣದಲ್ಲಿ ಅವರು ಜರ್ಮನ್ ಕಂಪನಿಗಳಿಗೆ ಕರ್ನಾಟಕದಲ್ಲಿ ಹೂಡಿಕೆ ಮಾಡಲು ಕರೆ ನೀಡಿದರು. ಕರ್ನಾಟಕದಲ್ಲಿ ಹೂಡಿಕೆಗೆ ಸೂಕ್ತ ವಾತಾವರಣವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಂದಿನ ವರ್ಷ ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಭೆ ನಡೆಯಲಿದ್ದು, ಇದರಲ್ಲಿ ಜರ್ಮನಿ ಪಾಲುದಾರ ರಾಷ್ಟ್ರವಾಗಿ ಭಾಗವಹಿಸಲಿದೆ.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ವಿಡಿಯೋ ಕಾನ್ಫರೆನ್ಸ್ ಮೂಲಕ ಶೃಂಗಸಭೆಯಲ್ಲಿ ಪಾಲ್ಗೊಂಡರು.  ಹೂಡಿಕೆಯ ವಿಷಯದಲ್ಲಿ ವಿಶ್ವದ ಕಂಪನಿಗಳಿಗೆ ಗುಜರಾತ್ ಅತ್ಯಂತ ಆದ್ಯತೆಯ ತಾಣವಾಗಿದೆ. ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆಯು ಗುಜರಾತ್ ಅನ್ನು ಹೂಡಿಕೆ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಜಾಗತಿಕ ನಾಯಕನನ್ನಾಗಿ ಮಾಡಲು ಸಹಾಯ ಮಾಡಿದೆ ಎಂದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?