AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ರಷ್ಯಾದ 3500ಕ್ಕೂ ಹೆಚ್ಚು ಸೈನಿಕರನ್ನು ಕೊಂದಿದ್ದಾಗಿ ಹೇಳಿದ ಉಕ್ರೇನ್​; ಇಲ್ಲಿದೆ ಪ್ರಮುಖ ಬೆಳವಣಿಗೆಗಳ ವಿವರ

ಇಂದು ಮುಂಜಾನೆಯ ಹೊತ್ತಲ್ಲಿ ಯುಕೆ ಪ್ರಧಾನಮಂತ್ರಿ ಬೋರಿಸ್​ ಜಾನ್ಸನ್​​ರೊಂದಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಮಾತುಕತೆ ನಡೆಸಿದ್ದಾರೆ. ಮುಂದಿನ 24ಗಂಟೆ ಉಕ್ರೇನ್​ ಪಾಲಿಗೆ ಅತ್ಯಂತ ನಿರ್ಣಾಯಕ ಅವಧಿ ಎಂದು ಝೆಲೆನ್ಸ್ಕಿ ಹೇಳಿಕೊಂಡಿದ್ದಾರೆ.

Russia-Ukraine War: ರಷ್ಯಾದ 3500ಕ್ಕೂ ಹೆಚ್ಚು ಸೈನಿಕರನ್ನು ಕೊಂದಿದ್ದಾಗಿ ಹೇಳಿದ ಉಕ್ರೇನ್​; ಇಲ್ಲಿದೆ ಪ್ರಮುಖ ಬೆಳವಣಿಗೆಗಳ ವಿವರ
ಉಕ್ರೇನ್​​ನಲ್ಲಿ ಸ್ಥಳೀಯರಿಗೂ ತರಬೇತಿ
TV9 Web
| Edited By: |

Updated on:Feb 28, 2022 | 9:27 AM

Share

ರಷ್ಯಾ ಉಕ್ರೇನ್​ ಮೇಲೆ ದಾಳಿ ನಡೆಸಿ (Russia-Ukraine War) ಐದು ದಿನಗಳು ಕಳೆದಿದ್ದು, ಹೋರಾಟ ತೀವ್ರಗೊಂಡಿದೆ. ಮಾಸ್ಕೋ ಉಕ್ರೇನ್​​ಗೆ ಕಾಲಿಟ್ಟಾಗಿನಿಂದ ಇಲ್ಲಿಯವರೆಗೆ ಆ ದೇಶದ 3500 ಸೈನಿಕರನ್ನು ಕೊಂದಿದ್ದೇವೆ ಮತ್ತು 200ಕ್ಕೂ ಹೆಚ್ಚು ಯೋಧರನ್ನು ಸೆರೆ ಹಿಡಿದಿದ್ದೇವೆ ಎಂದು ಉಕ್ರೇನ್​ ಹೇಳಿಕೊಂಡಿದೆ. ಆದರೆ ಉಕ್ರೇನ್​​ನ ಈ ಹೇಳಿಕೆಯನ್ನು ರಷ್ಯಾ ಸರ್ಕಾರ ಒಪ್ಪಿಕೊಂಡಿಲ್ಲ. ಇದೆಲ್ಲದರ ಮಧ್ಯೆ ನಿನ್ನೆ ಒಂದು ಮಹತ್ವದ ಬೆಳವಣಿಗೆ ಆಗಿದೆ. ಅದೇನೆಂದರೆ ಬೆಲಾರಸ್​ ಗಡಿಯಲ್ಲಿ ಉಕ್ರೇನ್​ ಮತ್ತು ರಷ್ಯಾಗಳು ಶಾಂತಿ ಮಾತುಕತೆ ನಡೆಸಲಿವೆ. ಆದರೆ ಗಡಿಯಲ್ಲಿ ಎಲ್ಲಿ? ಯಾವ ಸಮಯದಲ್ಲಿ ಈ ಮಾತುಕತೆ ನಡೆಯಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಇಲ್ಲಿದೆ ನೋಡಿ ಪ್ರಮುಖ ಬೆಳವಣಿಗೆಗಳ ಮಾಹಿತಿ

  1. ರಷ್ಯಾದ 3500 ಸೈನಿಕರನ್ನು ಕೊಂದಿದ್ದಾಗಿ ಹೇಳಿಕೊಂಡಿರುವ ಉಕ್ರೇನ್​ ತನ್ನ ದೇಶದಲ್ಲಿ ಮೃತಪಟ್ಟ ಸೈನಿಕರ ಸಂಖ್ಯೆಯನ್ನು ನಿಖರ ಪಡಿಸಿಲ್ಲ. ರಷ್ಯಾ ದಾಳಿಗೆ 14 ಮಕ್ಕಳು ಸೇರಿ 352 ಮಂದಿ ನಾಗರಿಕರು ಮೃತಪಟ್ಟಿದ್ದಾರೆ. 116 ಮಕ್ಕಳು ಸೇರಿ 1684 ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ತಿಳಿಸಿದ್ದಾರೆ.
  2. ಈ ಮಧ್ಯೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​ ತಮ್ಮ ದೇಶದ ನ್ಯೂಕ್ಲಿಯರ್​ ಫೋರ್ಸ್​​ನ್ನು ಹೈ ಅಲರ್ಟ್​​ನಲ್ಲಿ ಇಡುವಂತೆ ಸಶಸ್ತ್ರ ಪಡೆಗಳ ಮುಖ್ಯಸ್ಥನಿಗೆ ಸೂಚಿಸಿದ್ದಾರೆ. ಇದೀಗ ನಮ್ಮ ದೇಶದ ಮೇಲೆ ಹೇರಿರುವ ನಿರ್ಬಂಧಗಳು ಕಾನೂನು ಬಾಹಿರ ಎಂದು ಹೇಳಿರುವ ಪುಟಿನ್​, ಆ ದೇಶಗಳು ಯಾವವೂ ನಮ್ಮ ಆರ್ಥಿಕತೆಗೆ ಸಹಾಯ ಮಾಡುವ ಸ್ನೇಹಿತರಲ್ಲ ಎಂದಿದ್ದಾರೆ. ಇನ್ನು ಪರಮಾಣು ನಿರೋಧಕ ಪಡೆಗಳಿಗೆ ಯುದ್ಧಸನ್ನದ್ಧರಾಗುವಂತೆ ಸೂಚಿಸಿದ ಪುಟಿನ್​ ನಡೆಯನ್ನು ನ್ಯಾಟೋ ಖಂಡಿಸಿದೆ.
  3. ಇಂದು ಮುಂಜಾನೆಯ ಹೊತ್ತಲ್ಲಿ ಯುಕೆ ಪ್ರಧಾನಮಂತ್ರಿ ಬೋರಿಸ್​ ಜಾನ್ಸನ್​​ರೊಂದಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಮಾತುಕತೆ ನಡೆಸಿದ್ದಾರೆ. ಮುಂದಿನ 24ಗಂಟೆ ಉಕ್ರೇನ್​ ಪಾಲಿಗೆ ಅತ್ಯಂತ ನಿರ್ಣಾಯಕ ಅವಧಿ ಎಂದು ಝೆಲೆನ್ಸ್ಕಿ ಹೇಳಿಕೊಂಡಿದ್ದಾಗಿ ವರದಿಯಾಗಿದೆ. ಇನ್ನು ಇಂಗ್ಲೆಂಡ್​ ಮತ್ತು ಅದರ ಮಿತ್ರರಾಷ್ಟ್ರಗಳು ಉಕ್ರೇನ್​​ ಭದ್ರತೆಗೆ ಅಗತ್ಯವಿರುವ ಸಹಾಯವನ್ನು ಮಾಡಲು ಸಿದ್ಧ ಇರುವುದಾಗಿ ಬೋರಿಸ್ ಜಾನ್ಸನ್​ ಹೇಳಿದ್ದಾರೆ ಎಂದು ರಾಯಿಟರ್ಸ್​ ವರದಿ ಮಾಡಿದೆ.
  4. ಉಕ್ರೇನ್​ ಮೇಲೆ ರಷ್ಯಾ ದಾಳಿ ತೀವ್ರಗೊಂಡ ಬೆನ್ನಲ್ಲೇ ಇಂದು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆ ಒಂದು ಅಪರೂಪದ ತುರ್ತು ಅಧಿವೇಶನ ಕರೆದಿದೆ. ಆದರೆ ಈ ಅಧಿವೇಶನ ಕರೆಯಲು ನಿರ್ಣಯ ತೆಗೆದುಕೊಂಡಿದ್ದನ್ನು ರಷ್ಯಾದ ರಾಯಭಾರಿ ಟೀಕಿಸಿದ್ದಾರೆ. ಅಂತಾರಾಷ್ಟ್ರೀಯ ಭದ್ರತೆ ಮತ್ತು ಶಾಂತಿಯನ್ನು ನಿಭಾಯಿಸುವಲ್ಲಿ, ತಮ್ಮ ಜವಾಬ್ದಾರಿಯನ್ನು ನಿಭಾಯಿಸಲು ವಿಶ್ವ ಸಂಸ್ಥೆ ಭದ್ರತಾ ಮಂಡಳಿ ವಿಫಲವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಳೆದ ವರ್ಷ ಭೀಕರ ಅಪಘಾತ ಕಂಡಿದ್ದ ರಸ್ತೆಯ ಅಗಲೀಕರಣಕ್ಕೆ ಇಂದು ಶಂಕುಸ್ಥಾಪನೆ: ಬೆಳಗಾವಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಆಗಮನ

Published On - 9:25 am, Mon, 28 February 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್