AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಜೀರಿಯಾ: ಶಾಲಾ ಕಟ್ಟಡ ಕುಸಿತ; 22 ವಿದ್ಯಾರ್ಥಿಗಳು ಸಾವು, ಮುಂದುವರಿದ ಶೋಧ ಕಾರ್ಯ

ಏಕಾಏಕಿ ಶಾಲಾ ಕಟ್ಟಡ ಬಿದ್ದ ಪರಿಣಾಮ 22 ವಿದ್ಯಾರ್ಥಿಗಳು ಸಾವನ್ನಪ್ಪಿರು ಘಟನೆ ನೈಜೀರಿಯಾದಲ್ಲಿ ಅಬುಜಾದಲ್ಲಿ ನಡೆದಿದೆ. ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 132 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.

ನೈಜೀರಿಯಾ: ಶಾಲಾ ಕಟ್ಟಡ ಕುಸಿತ; 22 ವಿದ್ಯಾರ್ಥಿಗಳು ಸಾವು, ಮುಂದುವರಿದ ಶೋಧ ಕಾರ್ಯ
ಶಾಲಾ ಕಟ್ಟಡ ಕುಸಿತImage Credit source: AFP
ಅಕ್ಷತಾ ವರ್ಕಾಡಿ
|

Updated on:Jul 13, 2024 | 10:16 AM

Share

ಅಬುಜಾ (ನೈಜೀರಿಯಾ): ಆಫ್ರಿಕಾದ ನೈಜೀರಿಯಾದಲ್ಲಿ ಶುಕ್ರವಾರ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿನ ಸೇಂಟ್ಸ್ ಅಕಾಡೆಮಿ ಕಾಲೇಜಿನ ಎರಡು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ 22 ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಶಾಲಾ ಸಿಬ್ಬಂದಿ ವರ್ಗ ಸೇರಿದಂತೆ ಹಲವು ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿದ್ದು, ಶೋಧ ಕಾರ್ಯ ಮುಂದುವರಿದಿದೆ. ಗಾಯಾಳುಗಳಿಗೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಆರಂಭದಲ್ಲಿ ಒಟ್ಟು 154 ವಿದ್ಯಾರ್ಥಿಗಳು ಅವಶೇಷಗಳಲ್ಲಿ ಸಿಲುಕಿಕೊಂಡಿದ್ದು, ಅವರಲ್ಲಿ 132 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ದುರದೃಷ್ಟವಶಾತ್​​ 22 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರ ಆಲ್ಫ್ರೆಡ್ ಅಲಾಬೊ ಹೇಳಿದ್ದಾರೆ.

ಅಪಘಾತಕ್ಕೆ ಕಾರಣ:

ಈ ಶಾಲೆಯನ್ನು ನದಿಯ ದಡದಲ್ಲಿ ನಿರ್ಮಿಸಲಾಗಿರುವುದೇ ಈ ಅಪಘಾತಕ್ಕೆ ಕಾರಣ ಎಂದು ರಾಜ್ಯ ಸರ್ಕಾರ ಆರೋಪಿಸಿದೆ. ಅಲ್ಲದೆ, ಮುನ್ನೆಚ್ಚರಿಕೆ ವಹಿಸಿ, ದುರ್ಬಲ ಕಟ್ಟಡಗಳನ್ನು ಹೊಂದಿರುವ ಮತ್ತು ನದಿ ದಡದಲ್ಲಿರುವ ರಾಜ್ಯದ ಎಲ್ಲಾ ಶಾಲಾ ಕಟ್ಟಡಗಳನ್ನು ಕೂಡಲೇ ಮುಚ್ಚುವಂತೆ ಸರ್ಕಾರ ಮನವಿ ಮಾಡಿದೆ.

ಮತ್ತಷ್ಟು ಓದಿ: ಚಾರ್‌ ಧಾಮ್​ನಲ್ಲಿ ಭೂಕುಸಿತ: ಸಂಕಷ್ಟಕ್ಕೆ ಸಿಲುಕಿದ ಹಾವೇರಿಯ 7 ಜನರು

ಆಫ್ರಿಕನ್ ದೇಶಗಳ ಪೈಕಿ ನೈಜೀರಿಯಾ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ. ನೈಜೀರಿಯಾದಲ್ಲಿ ಕಟ್ಟಡ ಕುಸಿತವು ಸಾಮಾನ್ಯ ಘಟನೆಯಾಗಿದ್ದರೂ, ಕಳೆದ ಎರಡು ವರ್ಷಗಳಲ್ಲಿ ದೇಶದಲ್ಲಿ ಹತ್ತಕ್ಕೂ ಹೆಚ್ಚು ಕಟ್ಟಡ ಕುಸಿತದ ಘಟನೆಗಳು ದಾಖಲಾಗಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:14 am, Sat, 13 July 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ